Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...