Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...