Homeಮುಖಪುಟಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

- Advertisement -
- Advertisement -

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ) ಗುರುವಾರ (ನ.21) ಬಂಧನ ವಾರೆಂಟ್ ಹೊರಡಿಸಿದೆ.

ಬೆಂಜಮಿನ್ ನೆತನ್ಯಾಹು ಮತ್ತು ಯೋವ್ ಗ್ಯಾಲಂಟ್ 8 ಅಕ್ಟೋಬರ್ 2023ರಿಂದ 20 ಮೇ 2024 (ಪ್ರಾಸಿಕ್ಯೂಷನ್ ಬಂಧನ ವಾರೆಂಟ್‌ಗೆ ಅರ್ಜಿ ಸಲ್ಲಿಸಿದ ದಿನ) ರವರೆಗೆ ನಡೆಸಿದ ‘ಮನುಷ್ಯ ವಿರೋಧಿ ಯುದ್ದ ಅಪರಾಧ’ಗಳಿಗೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿಯ ಈ ಆದೇಶ ನೆತನ್ಯಾಹು ಓಡಾಟಕ್ಕೆ ಅಂಕುಶ ಹಾಕಲಿದೆ. ಏಕೆಂದರೆ, ಐಸಿಸಿಯ ವ್ಯಾಪ್ತಿಗೆ ಬರುವ 124 ರಾಷ್ಟ್ರಗಳಲ್ಲಿ ಯಾರು ಬೇಕಾದರು ತಮ್ಮ ಪ್ರದೇಶದ ಒಳಗೆ ನೆತನ್ಯಾಹು ಅವರನ್ನು ಬಂಧಿಸಬಹುದು ಎಂದು ವರದಿಗಳು ಹೇಳಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ಹಮಾಸ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಎರಡೂ ಕಡೆಯವರ ವಿರುದ್ಧದ ಬಂಧನ ವಾರೆಂಟ್‌ಗಳು “ಕೆಲ ವ್ಯಕ್ತಿಗಳು ಕಾನೂನಿಗಿಂತ ದೊಡ್ಡವರು ಎಂಬ ಭಾವನೆಯನ್ನು ಹೋಗಲಾಡಿಸುತ್ತದೆ” ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಸಹಾಯಕ ಅಂತಾರಾಷ್ಟ್ರೀಯ ನ್ಯಾಯ ನಿರ್ದೇಶಕ ಬಾಲ್ಕೀಸ್ ಜರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ನೆತನ್ಯಾಹು ಈಗ ಅಧಿಕೃತವಾಗಿ ಬೇಕಾಗಿರುವ ವ್ಯಕ್ತಿ” ಎಂದು ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

“ಇದೊಂದು ಐತಿಹಾಸಿಕ ಆದೇಶ. ನಮ್ಮ ಜನರ ವಿರುದ್ಧದ ಅನ್ಯಾಯದ ಸುದೀರ್ಘ ಇತಿಹಾಸವನ್ನು ಈ ಆದೇಶ ತಿದ್ದುಪಡಿ ಮಾಡಲಿದೆ. ನಮ್ಮ ಜನರು ಕಳೆದ 76 ವರ್ಷಗಳಿಂದ ಸುದೀರ್ಘ ಫ್ಯಾಸಿಸ್ಟ್ ಆಕ್ರಮಣವನ್ನು ಎದುರಿಸುತ್ತಿದ್ದಾರೆ” ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ.

“ನಮ್ಮ ಪ್ಯಾಲೆಸ್ತೀನ್ ಜನರ ವಿರುದ್ಧ ದೌರ್ಜನ್ಯ ಎಸಗಿದ ಮತ್ತು ಆಧುನಿಕತೆಗೆ ತಿಳಿದಿರುವ ಅತ್ಯಂತ ಘೋರವಾದ ಕೊಲೆ, ಭಯೋತ್ಪಾದನೆ ಮತ್ತು ಹಸಿವಿನ ಕೃತ್ಯಗಳನ್ನು ಎಸಗಿರುವ ಎಲ್ಲಾ ಕ್ರಿಮಿನಲ್ ನಾಯಕರು, ಮಂತ್ರಿಗಳು ಮತ್ತು ಫ್ಯಾಸಿಸ್ಟ್ ಮಿಲಿಟರಿ ಅಧಿಕಾರಿಗಳನ್ನು ಈ ಆದೇಶದೊಳಗೆ ಸೇರಿಸಿ” ಎಂದು ಹಮಾಸ್ ಐಸಿಸಿಯನ್ನು ಒತ್ತಾಯಿಸಿದೆ. ತನ್ನ ಮಿಲಿಟರಿ ಮುಖ್ಯಸ್ಥ ಡೀಫ್ ವಿರುದ್ಧದ ವಾರೆಂಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಕಳೆದ ಜುಲೈನಲ್ಲಿ ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಡೀಫ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಆಗಸ್ಟ್ ಆರಂಭದಲ್ಲಿ ಹೇಳಿತ್ತು. ಆದರೆ, ಹಮಾಸ್ ಈ ಸಾವನ್ನು ದೃಢಪಡಿಸಿಲ್ಲ. ಡೀಫ್ ಸಾವನ್ನಪ್ಪಿದ್ದಾರೆಯೇ.. ಇಲ್ಲವೇ? ಎಂಬುವುದನ್ನು ನಿರ್ಧರಿಸಲು ಪ್ರಾಸಿಕ್ಯೂಟರ್‌ಗೆ ಸಾಧ್ಯವಾಗದ ಕಾರಣ ಬಂಧನ ವಾರೆಂಟ್ ಹೊರಡಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಐಸಿಸಿಯ ಆದೇಶವನ್ನು ಇಸ್ರೇಲ್ ಕಠುವಾಗಿ ಟೀಕಿಸಿದೆ. ಇದು “ಯಹೂದಿ ವಿರೋಧಿ” ಆದೇಶ ಎಂದಿದೆ. ಐಸಿಸಿ “ತನ್ನ ವಿರುದ್ಧ ಮಾಡಿರುವ ಅಸಂಬದ್ಧ, ಸುಳ್ಳು ಆರೋಪಗಳನ್ನು ಅಸಹ್ಯದಿಂದ ತಿರಸ್ಕರಿಸುತ್ತೇವೆ” ಎಂದು ಇಸ್ರೇಲ್ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಸೇರಿದಂತೆ ಇಸ್ರೇಲ್‌ನ ಮಿತ್ರರಾಷ್ಟ್ರಗಳು ಕೂಡ ಇಸ್ರೇಲಿ ರಾಜಕಾರಣಿಗಳ ವಿರುದ್ಧದ ಬಂಧನ ವಾರೆಂಟ್‌ಗಳನ್ನು ಖಂಡಿಸಿವೆ.

ಇದನ್ನೂ ಓದಿ : ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...