Homeಮುಖಪುಟಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

- Advertisement -
- Advertisement -

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ) ಗುರುವಾರ (ನ.21) ಬಂಧನ ವಾರೆಂಟ್ ಹೊರಡಿಸಿದೆ.

ಬೆಂಜಮಿನ್ ನೆತನ್ಯಾಹು ಮತ್ತು ಯೋವ್ ಗ್ಯಾಲಂಟ್ 8 ಅಕ್ಟೋಬರ್ 2023ರಿಂದ 20 ಮೇ 2024 (ಪ್ರಾಸಿಕ್ಯೂಷನ್ ಬಂಧನ ವಾರೆಂಟ್‌ಗೆ ಅರ್ಜಿ ಸಲ್ಲಿಸಿದ ದಿನ) ರವರೆಗೆ ನಡೆಸಿದ ‘ಮನುಷ್ಯ ವಿರೋಧಿ ಯುದ್ದ ಅಪರಾಧ’ಗಳಿಗೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿಯ ಈ ಆದೇಶ ನೆತನ್ಯಾಹು ಓಡಾಟಕ್ಕೆ ಅಂಕುಶ ಹಾಕಲಿದೆ. ಏಕೆಂದರೆ, ಐಸಿಸಿಯ ವ್ಯಾಪ್ತಿಗೆ ಬರುವ 124 ರಾಷ್ಟ್ರಗಳಲ್ಲಿ ಯಾರು ಬೇಕಾದರು ತಮ್ಮ ಪ್ರದೇಶದ ಒಳಗೆ ನೆತನ್ಯಾಹು ಅವರನ್ನು ಬಂಧಿಸಬಹುದು ಎಂದು ವರದಿಗಳು ಹೇಳಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ಹಮಾಸ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಎರಡೂ ಕಡೆಯವರ ವಿರುದ್ಧದ ಬಂಧನ ವಾರೆಂಟ್‌ಗಳು “ಕೆಲ ವ್ಯಕ್ತಿಗಳು ಕಾನೂನಿಗಿಂತ ದೊಡ್ಡವರು ಎಂಬ ಭಾವನೆಯನ್ನು ಹೋಗಲಾಡಿಸುತ್ತದೆ” ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಸಹಾಯಕ ಅಂತಾರಾಷ್ಟ್ರೀಯ ನ್ಯಾಯ ನಿರ್ದೇಶಕ ಬಾಲ್ಕೀಸ್ ಜರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ನೆತನ್ಯಾಹು ಈಗ ಅಧಿಕೃತವಾಗಿ ಬೇಕಾಗಿರುವ ವ್ಯಕ್ತಿ” ಎಂದು ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

“ಇದೊಂದು ಐತಿಹಾಸಿಕ ಆದೇಶ. ನಮ್ಮ ಜನರ ವಿರುದ್ಧದ ಅನ್ಯಾಯದ ಸುದೀರ್ಘ ಇತಿಹಾಸವನ್ನು ಈ ಆದೇಶ ತಿದ್ದುಪಡಿ ಮಾಡಲಿದೆ. ನಮ್ಮ ಜನರು ಕಳೆದ 76 ವರ್ಷಗಳಿಂದ ಸುದೀರ್ಘ ಫ್ಯಾಸಿಸ್ಟ್ ಆಕ್ರಮಣವನ್ನು ಎದುರಿಸುತ್ತಿದ್ದಾರೆ” ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ.

“ನಮ್ಮ ಪ್ಯಾಲೆಸ್ತೀನ್ ಜನರ ವಿರುದ್ಧ ದೌರ್ಜನ್ಯ ಎಸಗಿದ ಮತ್ತು ಆಧುನಿಕತೆಗೆ ತಿಳಿದಿರುವ ಅತ್ಯಂತ ಘೋರವಾದ ಕೊಲೆ, ಭಯೋತ್ಪಾದನೆ ಮತ್ತು ಹಸಿವಿನ ಕೃತ್ಯಗಳನ್ನು ಎಸಗಿರುವ ಎಲ್ಲಾ ಕ್ರಿಮಿನಲ್ ನಾಯಕರು, ಮಂತ್ರಿಗಳು ಮತ್ತು ಫ್ಯಾಸಿಸ್ಟ್ ಮಿಲಿಟರಿ ಅಧಿಕಾರಿಗಳನ್ನು ಈ ಆದೇಶದೊಳಗೆ ಸೇರಿಸಿ” ಎಂದು ಹಮಾಸ್ ಐಸಿಸಿಯನ್ನು ಒತ್ತಾಯಿಸಿದೆ. ತನ್ನ ಮಿಲಿಟರಿ ಮುಖ್ಯಸ್ಥ ಡೀಫ್ ವಿರುದ್ಧದ ವಾರೆಂಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಕಳೆದ ಜುಲೈನಲ್ಲಿ ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಡೀಫ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಆಗಸ್ಟ್ ಆರಂಭದಲ್ಲಿ ಹೇಳಿತ್ತು. ಆದರೆ, ಹಮಾಸ್ ಈ ಸಾವನ್ನು ದೃಢಪಡಿಸಿಲ್ಲ. ಡೀಫ್ ಸಾವನ್ನಪ್ಪಿದ್ದಾರೆಯೇ.. ಇಲ್ಲವೇ? ಎಂಬುವುದನ್ನು ನಿರ್ಧರಿಸಲು ಪ್ರಾಸಿಕ್ಯೂಟರ್‌ಗೆ ಸಾಧ್ಯವಾಗದ ಕಾರಣ ಬಂಧನ ವಾರೆಂಟ್ ಹೊರಡಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಐಸಿಸಿಯ ಆದೇಶವನ್ನು ಇಸ್ರೇಲ್ ಕಠುವಾಗಿ ಟೀಕಿಸಿದೆ. ಇದು “ಯಹೂದಿ ವಿರೋಧಿ” ಆದೇಶ ಎಂದಿದೆ. ಐಸಿಸಿ “ತನ್ನ ವಿರುದ್ಧ ಮಾಡಿರುವ ಅಸಂಬದ್ಧ, ಸುಳ್ಳು ಆರೋಪಗಳನ್ನು ಅಸಹ್ಯದಿಂದ ತಿರಸ್ಕರಿಸುತ್ತೇವೆ” ಎಂದು ಇಸ್ರೇಲ್ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಸೇರಿದಂತೆ ಇಸ್ರೇಲ್‌ನ ಮಿತ್ರರಾಷ್ಟ್ರಗಳು ಕೂಡ ಇಸ್ರೇಲಿ ರಾಜಕಾರಣಿಗಳ ವಿರುದ್ಧದ ಬಂಧನ ವಾರೆಂಟ್‌ಗಳನ್ನು ಖಂಡಿಸಿವೆ.

ಇದನ್ನೂ ಓದಿ : ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....