Homeಕರ್ನಾಟಕಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ 'ಪಕ್ಷಪಾತದ ನಿಲುವು' : ಸಿಜೆಐಗೆ ಪತ್ರ ಬರೆದ ವಕೀಲ

ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ‘ಪಕ್ಷಪಾತ ನಿಲುವು’ ಅನುಸರಿಸುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಂಗ ಯಡಿಯೂರಪ್ಪ ಪರ ನಿಲುವು ತಾಳುತ್ತಿದೆ ಎಂದು ವಕೀಲ ಸಚಿನ್ ಆರೋಪಿಸಿದ್ದು, 2017ರಿಂದ ಬಾಕಿ ಉಳಿದಿರುವ ಯಡಿಯೂರಪ್ಪ ವಿರುದ್ದದ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡದೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದಿದ್ದಾರೆ.

“ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಕೋರಿದರೆ, ಸುಪ್ರೀಂ ಕೋರ್ಟ್ ತಕ್ಷಣವೇ ಅದನ್ನು ಮಂಜೂರು ಮಾಡುತ್ತದೆ. ಯಾವುದೇ ವಿವರಣೆ ಇಲ್ಲದೆ ನೀಡುವ ತಡೆಯಾಜ್ಞೆ ಆದೇಶಗಳನ್ನು ಪ್ರಾಸಿಕ್ಯೂಷನ್ (ಕರ್ನಾಟಕ ಸರ್ಕಾರ ಮತ್ತು ಭ್ರಷ್ಟಾಚಾರ ನಿಗ್ರಹ ದಳ) ಪ್ರಶ್ನಿಸುವವರೆಗೆ ಯಾವುದೇ ವ್ಯತ್ಯಾಸವಿಲ್ಲದೆ ವರ್ಷಗಳ ಕಾಲ ವಿಸ್ತರಣೆ ಮಾಡಲಾಗುತ್ತಿದೆ” ಎಂದು ಸಚಿನ್ ದೂರಿದ್ದಾರೆ.

ಯಡಿಯೂರಪ್ಪ ವಿರುದ್ಧ ಪಿಸಿ ಕಾಯ್ದೆಯಡಿ ದಾಖಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್‌ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ/ಭ್ರಷ್ಟಾಚಾರ ನಿಗ್ರಹ ದಳ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಆದರೆ, ಇದುವರೆಗೂ ತಡೆ ನೀಡುವುದನ್ನು ಸುಪ್ರೀಂ ಕೋರ್ಟ್‌ ಪರಿಗಣಿಸಿಲ್ಲ ಎಂದು ಸಚಿನ್ ಹೇಳಿದ್ದಾರೆ.

“ನಿರ್ದಿಷ್ಟವಾಗಿ ಯಡಿಯೂರಪ್ಪ ಅವರಿಗೆ ಅನುಕೂಲಕರವಾದ ಹೈಕೋರ್ಟ್ ಆದೇಶಗಳನ್ನು ತಡೆಯಲು ಪ್ರಾಸಿಕ್ಯೂಷನ್ ಪ್ರಯತ್ನಿಸಿದ ಪ್ರಕರಣಗಳಲ್ಲಿ, ತಡೆ ನೀಡುವ ಮತ್ತು ವಿಚಾರಣೆಯನ್ನು ವಿಳಂಬಗೊಳಿಸುವ ಮಾದರಿಯು ನ್ಯಾಯಾಂಗ ಪಕ್ಷಪಾತ ಮಾಡುತ್ತಿದೆಯೇ? ಎಂಬ ಪ್ರಶ್ನೆ ಮೂಡಿಸುತ್ತದೆ” ಎಂದು ಸಚಿನ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಿಜೆಐಗೆ ಬರೆದಿರುವ ಪತ್ರದಲ್ಲಿ ವಕೀಲ ಸಚಿನ್ ಅವರು ತನ್ನ ಆರೋಪವನ್ನು ಪುಷ್ಠೀಕರಿಸುವ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಅವುಗಳು ಹೀಗಿವೆ..

ಶಿವರಾಮ ಕಾರಂತ ಬಡಾವಣೆಯಲ್ಲಿ 257 ಎಕರೆ ಡಿನೋಟಿಫಿಕೇಶನ್‌

ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ 2021ರ ಜನವರಿ 05ರಂದು ಹೈಕೋರ್ಟ್‌, ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದರಿಂದ ಪ್ರಾಸಿಕ್ಯೂಷನ್‌ಗೆ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ ಅಡಿ ಅನುಮತಿ ಬೇಕಿಲ್ಲ ಎಂದು ಹೇಳಿತ್ತು.

ಈ ಬೆನ್ನಲ್ಲೇ ಯಡಿಯೂರಪ್ಪ ಅವರು ಬಂಧನ ಭೀತಿಯಿಂದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 2021ರ ಜನವರಿ 27ರಂದು ಸುಪ್ರೀಂ ಕೋರ್ಟ್‌ ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿ, ನೋಟಿಸ್‌ ಜಾರಿ ಮಾಡಿತ್ತು. ಆದೇಶದಲ್ಲಿ ಎಲ್ಲಿಯೂ ಏಕೆ ತಡೆ ನೀಡಲಾಗುತ್ತದೆ ಎಂಬುವುದಕ್ಕೆ ಸುಪ್ರೀಂ ಕೋರ್ಟ್ ಕಾರಣ ನೀಡಿರಲಿಲ್ಲ. ಯಡಿಯೂರಪ್ಪ ಜೊತೆಗೂಡಿ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳು ಸಲ್ಲಿಸಿರುವ ಅರ್ಜಿಯಲ್ಲಿಯೂ ಅದೇ ಆದೇಶ ಪಾಲನೆ ಮಾಡಲಾಗಿದೆ. ನಾಲ್ಕು ವರ್ಷಗಳಿಂದ ಈ ಆದೇಶ ಚಾಲ್ತಿಯಲ್ಲಿದೆ.

2008-2011ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಡಾ. ಕೆ ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 257 ಎಕರೆಯನ್ನು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

2017ರ ಜೂನ್‌ 06ರಂದು ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಎಸಿಬಿ, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ್ದ ಕರ್ನಾಟಕ ಹೈಕೋರ್ಟ್‌ 2017ರ ಸೆಪ್ಟೆಂಬರ್‌ 22ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಎಸಿಬಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2017ರ ಡಿಸೆಂಬರ್‌ 11ರಂದು ಈ ಕುರಿತು ನೋಟಿಸ್‌ ಜಾರಿಯಾಗಿದ್ದು, ಇದುವರೆಗೆ ಯಾವುದೇ ಬೆಳವಣಿಗೆಯಾಗಿಲ್ಲ. 2018ರ ನವೆಂಬರ್‌ 14ರಂದು ಕೊನೆಯ ಬಾರಿಗೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆರು ವರ್ಷಗಳಿಂದ ಇದುವರೆಗೂ ಪ್ರಕರಣವು ವಿಚಾರಣೆಗೆ ಬಂದಿಲ್ಲ. 2017ರ ಸೆಪ್ಟೆಂಬರ್‌ನಿಂದ ಪ್ರಕರಣದ ತನಿಖೆಗೆ ತಡೆ ನೀಡಲಾಗಿದೆ.

ವಾಸುದೇವ ರೆಡ್ಡಿ ಡಿನೋಟಿಫಿಕೇಶನ್‌ ಪ್ರಕರಣ

ಬಿ.ಎಸ್‌ ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ನಡೆಸಿರುವ ಅಕ್ರಮ ಡಿನೋಟಿಫಿಕೇಶ್‌ ಆರೋಪ ಸಂಬಂಧ ಖಾಸಗಿ ದೂರಿನಲ್ಲಿ ವಿಶೇಷ ನ್ಯಾಯಾಲಯ ನೀಡಿರುವ ನಿರ್ದೇಶನ ಆಧರಿಸಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಸೆಕ್ಷನ್‌ 13(1)(ಡಿ) ಜೊತೆಗೆ 13(2)ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು 2020ರ ಡಿಸೆಂಬರ್‌ 22ರಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. 2015ರ ಫೆಬ್ರವರಿ 18ರಿಂದ 2019ರ ಏಪ್ರಿಲ್‌ 02ರವರೆಗೆ ಯಾವುದೇ ತಡೆ ಇಲ್ಲದಿದ್ದರೂ ತನಿಖೆ ವಿಳಂಬ ಮಾಡಿದ್ದಕ್ಕೆ ಲೋಕಾಯುಕ್ತ ಪೊಲೀಸರನ್ನು ಹೈಕೋರ್ಟ್‌ ಟೀಕಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. 2022ರ ಫೆಬ್ರವರಿ 18ರಂದು ಪ್ರಕರಣವು ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. 2022ರ ಜುಲೈ 22ರಂದು ಮೊದಲ ವಿಚಾರಣೆ ನಡೆದಿತ್ತು. ನೋಟಿಸ್‌ ಜಾರಿ ಮಾಡಿದ್ದ ಸುಪ್ರೀಂ ಕೋರ್ಟ್, ತನಿಖೆಗೆ ತಡೆ ನೀಡಿತ್ತು. ಅಂದಿನಿಂದ 2023ರ ಫೆಬ್ರವರಿ 14ರ ರವರೆಗೆ ಕೊನೆಯ ಬಾರಿಗೆ ವಿಚಾರಣೆ ಮುಂದೂಡಲಾಗಿದೆ. ಇದುವರೆಗೂ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ.

ಸಿಎಜಿ ವರದಿಯಲ್ಲಿನ ಡಿನೋಟಿಫಿಕೇಶನ್‌

ಸಾಮಾಜಿಕ ಕಾರ್ಯಕರ್ತ ಜಯಕುಮಾರ್‌ ಹಿರೇಮಠ ಅವರು ಸಿಎಜಿ ವರದಿ ಆಧರಿಸಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ 15 ಅರ್ಜಿಗಳನ್ನು ಹೈಕೋರ್ಟ್‌ ವಜಾ ಮಾಡಿತ್ತು.

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ

ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಲಂಚ, ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಇದನ್ನು ಪ್ರಶ್ನಿಸಿ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಭಾಗಶಃ ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ 2022ರ ಸೆಪ್ಟೆಂಬರ್‌ 23ರಂದು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿತ್ತು. ಅಂದಿನಿಂದ ಇದುವರೆಗೂ ಪ್ರಕರಣ ಇತ್ಯರ್ಥವಾಗಿಲ್ಲ.

ಸೌಜನ್ಯ : thenewsminute.com, kannada.barandbench.com

ಇದನ್ನೂ ಓದಿ : ತುಮಕೂರು | 2010ರಲ್ಲಿ ನಡೆದ ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...