Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...