HomeಮುಖಪುಟCOP29 | ಹವಾಮಾನ ಶೃಂಗಸಭೆಯ ಅಂತಿಮ ದಿನ : ನಿಧಿ ಸಂಗ್ರಹ ವಿಚಾರದಲ್ಲಿ ಮೂಡದ ಒಮ್ಮತ

COP29 | ಹವಾಮಾನ ಶೃಂಗಸಭೆಯ ಅಂತಿಮ ದಿನ : ನಿಧಿ ಸಂಗ್ರಹ ವಿಚಾರದಲ್ಲಿ ಮೂಡದ ಒಮ್ಮತ

- Advertisement -
- Advertisement -

ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಇಂದು (ನ.22) ಅಂತ್ಯಗೊಳ್ಳಲಿದೆ.

ನವೆಂಬರ್ 11ರಂದು ಪ್ರಾರಂಭಗೊಂಡ ಶೃಂಗಸಭೆಯಲ್ಲಿ ಹಲವಾರು ಚರ್ಚೆಗಳು ನಡೆದರೂ, ಸಭೆಯ ಮೂಲ ಉದ್ದೇಶವನ್ನು ಈಡೇರಿಸುವಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಹಾಗಾಗಿ, ಬಾಕು ಶೃಂಗಸಭೆ ಒಂದು ‘ವ್ಯರ್ಥ ಸಭೆ’ಯಾಗಿ ಕೊನೆಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಈ ಬಾರಿಯ ಶೃಂಗಸಭೆಗೆ ‘Finance COP'(ಹಣಕಾಸಿನ ಶೃಂಗಸಭೆ) ಎಂದು ಸಹ ಹೆಸರಿಡಲಾಗಿತ್ತು. ಈ ಮೂಲಕ ಹವಾಮಾನ ನಿಧಿ ಸಂಗ್ರಹದ ಗುರಿಯನ್ನು ಹೊಂದಲಾಗಿತ್ತು. ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ಮತ್ತು ಹಿಂದುಳಿದ ರಾಷ್ಟ್ರಗಳಿಗೆ ಹವಾಮಾನ ಸಂಬಂಧಿತ ಸವಾಲುಗಳನ್ನು ಎದುರಿಸಲು ಹಣಕಾಸಿನ ನೆರವು ಒದಗಿಸುವುದು ಸಭೆಯ ಮೂಲ ಉದ್ದೇಶವಾಗಿತ್ತು.

ಆದರೆ, ಶೃಂಗಸಭೆ ಕೊನೆಗೊಳ್ಳುವ ಹೊತ್ತಿಗೆ ಈ ವಿಚಾರದಲ್ಲಿ ಒಮ್ಮತದ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಹಣಕಾಸಿನ ನೆರವು ನೀಡಬೇಕು ಎಂಬುವುದು ಒಂದು ಒಮ್ಮತದ ಒಪ್ಪಂದ. ಆದರೆ, ಇದು ಕಡ್ಡಾಯ ನಿಯಮವಲ್ಲ. ಹಾಗಾಗಿ, ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಉದ್ದೇಶಿತ ನೆರವು ನೀಡುವುದಿಲ್ಲ ಎಂದು ಹಿಂಜರಿದಿವೆ. ಈ ಮೂಲಕ ಶೃಂಗಸಭೆಯ ಮೂಲ ಉದ್ದೇಶ ತಲೆಕೆಳಗಾಗಿದೆ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಕೋಪನ್ ಹ್ಯಾಗನ್ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2015 ಪ್ಯಾರಿಸ್ ಒಪ್ಪಂದವು 2009ರ ಒಪ್ಪಂದವನ್ನೇ ಮತ್ತೊಮ್ಮೆ ಪುನರುಚ್ಚರಿಸಿತ್ತು. ಆದರೆ, 2022ರ ಹೊತ್ತಿಗೆ ಕೇವಲ 83.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಯಿತು. 100 ಬಿಲಿಯನ್ ಗುರಿಯನ್ನು ಅಂತಿಮವಾಗಿ 2023 ರಲ್ಲಿ ತಲುಪಲಾಯಿತು. ಯುಎಸ್ ಸೇರಿದಂತೆ ಎಲ್ಲಾ 196 ದೇಶಗಳು 2015ರ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭೂಮಿಯ ತಾಪಮಾನ ಕಡಿಮೆ ಮಾಡುವಲ್ಲಿ ಬದ್ದವಾಗಿರುವುದಾಗಿ ಪ್ರತಿಜ್ಞೆ ಮಾಡಿದ್ದವು.

2023ರಲ್ಲಿ 100 ಬಿಲಿಯನ್ ಗುರಿ ತಲುಪಿದರೂ, ಈ ಬಾರಿಯ ಬಾಕು ಶೃಂಗಸಭೆಯಲ್ಲಿ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಭಾರತ ಸೇರಿದಂತೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಬೇಡಿಕೆ ಇಟ್ಟಿತ್ತು. ಆದರೆ, ಮುಂದುವರಿದ ರಾಷ್ಟ್ರಗಳು ಈ ವಿಚಾರದಲ್ಲಿ ಬಿನ್ನಾಭಿಪ್ರಾಯ ವ್ಯಕ್ತಪಡಿಸಿವೆ. ನಿಧಿ ಸಂಗ್ರಹ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಈ ನಡುವೆ ದೊಡ್ಡ ಪಾಲುದಾರರಾಗಿರುವ ಯುಎಸ್‌ ಅಧ್ಯಕ್ಷ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದಲೇ ಹೊರ ನಡೆಯುವುದಾಗಿ ಹೇಳುತ್ತಿದ್ದಾರೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಯೋಜನೆಗಳು ಒಂದು ‘ವಂಚನೆ’ ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬುವುದು ಟ್ರಂಪ್ ವಾದ. ಅವರು ತನ್ನದೇ ಆದ ಯೋಜನೆಗಳನ್ನು ರೂಪಿಸಬಹುದು ಎಂದು ವರದಿಗಳು ಹೇಳಿವೆ.

2016ರಲ್ಲಿ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಾಗ ಇತರ ರಾಷ್ಟ್ರಗಳೂ ಇದೇ ನಿಲುವನ್ನು ಹೊಂದಬಹುದು ಎಂದು ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿತ್ತು. ಆದರೆ, 2021ರಲ್ಲಿ ಜೋ ಬೈಡೆನ್ ಆಡಳಿತ ಅವಧಿಯಲ್ಲಿ ಯುಎಸ್‌ ಪ್ಯಾರಿಸ್ ಒಪ್ಪಂದಕ್ಕೆ ಮರು ಸೇರ್ಪಡೆ ಆಯಿತು. 2030ರ ವೇಳೆಗೆ, ತನ್ನ ಇಂಗಾಲ ಹೊರಸೂಸುವಿಕೆಯನ್ನು 2005ರ ಮಟ್ಟಕ್ಕಿಂತ ಅರ್ಧದಷ್ಟು ಕಡಿತಗೊಳಿಸುವುದಾಗಿ ಶಪಥ ಮಾಡಿತ್ತು. ಅದನ್ನು ಟ್ರಂಪ್ ಮುರಿಯುವ ಸಾಧ್ಯತೆ ಇದೆ.

ಭಾರತ ಸೇರಿದಂತೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಮತ್ತು ಪೆಟ್ರೋಲಿಯಂ ಆರ್ಥಿಕತೆಯನ್ನು ಅವಲಂಭಿಸಿರುವ ಕೊಲ್ಲಿ ರಾಷ್ಟ್ರಗಳು ಕೂಡ ಅಭಿವೃದ್ದಿ ಹೊಂದಿರುವ ರಾಷ್ಟ್ರಗಳು ಹವಾಮಾನ ನಿಧಿಗೆ ಹೆಚ್ಚಿನ ಕೊಡುಗೆ ನೀಡಬೇಕು ಎಂದು ಆಗ್ರಹಿಸಿವೆ. ಈ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಈ ಬಾರಿಯ ಶೃಂಗಸಭೆ ಗುರಿ ಹೊಂದಿತ್ತು.

ಆದರೆ, ಹವಾಮಾನ ಆರ್ಥಿಕತೆಯ ದೊಡ್ಡ ಪಾಲುದಾರ ಯುಎಸ್‌ ಶೃಂಗಸಭೆಯಲ್ಲಿ ಪಾಲ್ಗೊಂಡರೂ, ಅದರ ಬಗ್ಗೆ ಅಷ್ಟೊಂದು ಒಲವು ಹೊಂದಿಲ್ಲ. ಯುಎಸ್‌ನಲ್ಲಿ ಪ್ರಸ್ತುತ ಬೈಡೆನ್ ಸರ್ಕಾರ ಇರುವುದರಿಂದ ಶೃಂಗಸಭೆಗೆ ಪ್ರತಿನಿಧಿಗಳನ್ನು ಕಳುಹಿಸಿಕೊಟ್ಟಿದೆ. ಇನ್ನು ಮುಂದೆ ಟ್ರಂಪ್ ಸರ್ಕಾರ ಬಂದರೆ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಮತ್ತು ಆರ್ಥಿಕ ನೆರವು ನೀಡುವುದನ್ನು ಯುಎಸ್ ನಿಲ್ಲಿಸಬಹುದು. ಅರ್ಜೆಂಟೀನಾ ಈ ಬಾರಿಯ ಶೃಂಗಸಭೆಯಿಂದ ತನ್ನ ಪ್ರತಿನಿಧಿಗಳನ್ನು ಅರ್ಧದಲ್ಲೇ ವಾಪಸ್ ಕರೆಸಿಕೊಂಡಿದೆ. ಫ್ರಾನ್ಸ್ ಸಚಿವರು ಶೃಂಗಸಭೆಯಲ್ಲಿ ಬರುವುದಾಗಿ ಹೇಳಿ ಪ್ರವಾಸ ರದ್ದುಗೊಳಿಸಿದ್ದಾರೆ. ಹೀಗಿರುವಾಗ ಹವಾಮಾನ ನಿಧಿಯ ವಿಷಯದಲ್ಲಿ ಅಂತಿಮ ನಿರ್ಧಾರಕ್ಕೆ ಬರುವುದು ಸವಾಲಾಗಿ ಪರಿಣಮಿಸಿದೆ.

COP ಶೃಂಗಸಭೆ ಅರ್ಥಹೀನ

ಹವಾಮಾನ ನಿಧಿಯ ಸಂಗ್ರಹ ವಿಚಾರದಲ್ಲಿ ಅಂತಿಮ ನಿರ್ಧಾರಕ್ಕೆ ಬರುವುದು ಸವಾಲಾಗಿರುವಾಗ ಅರ್ಥಶಾಸ್ರಜ್ಞರು ಇಡೀ ಶೃಂಗಸಭೆಯೇ ಅರ್ಥಹೀನ ಎಂದಿದ್ದಾರೆ.

ವಿಶ್ವಸಂಸ್ಥೆಯು ವಾರ್ಷಿಕ ಹವಾಮಾನ ಬದಲಾವಣೆ ಸಮ್ಮೇಳನದ ವಿಷಯದಲ್ಲಿ ಸಂಪೂರ್ಣವಾಗಿ ಮರು-ಚಿಂತನೆ ಮಾಡುವ ಸಮಯ ಬಂದಿದೆ ಎಂದು ಅರ್ಥಶಾಸ್ತ್ರಜ್ಞೆ ಜಯತಿ ಘೋಷ್ ಹೇಳಿದ್ದಾರೆ.

“ಪ್ರತಿವರ್ಷ ಹವಾಮಾನ ಶೃಂಗಸಭೆ ನಡೆಯುತ್ತಲೇ ಇದೆ. ಆದರಿಂದ ಯಾವುದೇ ಪ್ರಯೋಜನಗಳು ಆಗುತ್ತಿಲ್ಲ. ನಮ್ಮ ಸಮಸ್ಯೆಗಳು ಗಂಭೀರವಾಗಿವೆ. ಅದಕ್ಕೆ ತುರ್ತು ಪರಿಹಾರ ಬೇಕಿದೆ. ಇಂತಹ ದೊಡ್ಡ ಸಭೆಗಳಿಂದ ಪರಿಹಾರ ದೊರೆಯುತ್ತಿಲ್ಲ. ನಾವು 2050, 2070 ಎಂದು ವರ್ಷಗಳನ್ನು ದೂಡುತ್ತಲೇ ಇದ್ದೇವೆ” ಎಂದು ಮ್ಯಾಸಚೂಸೆಟ್ಸ್ ಅಮ್ಹೆರ್ಸ್ಟ್ ವಿಶ್ವವಿದ್ಯಾಲಯದಲ್ಲಿ ಅಭಿವೃದ್ಧಿ ಅರ್ಥಶಾಸ್ತ್ರಜ್ಞೆಯಾಗಿರುವ ಜಯತಿ ಘೋಷ್ ಟೀಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : 5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...