Homeಮುಖಪುಟಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್...

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ

ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿಹೇಳಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ, ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಡಾ. ಕಾರ್ತಿಕೇ ಹರಿ ಗುಪ್ತಾ, ಇಮ್ರಾನ್ ಅಲಿ ಖಾನ್, ಪಲ್ಲವಿ ಬಹುಗುಣ, ರಫತ್ ಮುನೀರ್ ಅಲಿ ಮತ್ತು ಇರುಮ್ ಝೆಬಾ ಅವರು ಮುಸ್ಲಿಮರನ್ನು ಉದ್ದೇಶಿಸಿ ನಡೆಸಲಾಗುತ್ತಿರುವ ದ್ವೇಷ ಭಾಷಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಯುಕ್ತ ಸನಾತನ ಧರಮ್ ರಕ್ಷಾ ಸಂಘದ ಸದಸ್ಯರು ಮತ್ತು ಅವರ ಸಹಚರರು ಮುಸ್ಲಿಮರು ಮತ್ತು ಮಸೀದಿಯ ವಿರುದ್ಧ ತೀವ್ರವಾದ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ” ಎಂದು ಅವರು ವಾದಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

‘ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು 1969ರಲ್ಲಿ ಖಾಸಗಿಯಾಗಿ ಖರೀದಿಸಿದ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಪ್ರತಿಪಾದಿಸಿ ‘ಅಲ್ಪಸಂಖಾಯಕ್ ಸೇವಾ ಸಮಿತಿ’ ರಿಟ್ ಅರ್ಜಿ ಸಲ್ಲಿಸಿದೆ. 1986 ರಲ್ಲಿ ಉತ್ತರ ಪ್ರದೇಶದ ಸಹಾಯಕ ವಕ್ಫ್ ಕಮಿಷನರ್ ವಿಚಾರಣೆ ನಡೆಸಿ ಮುಸ್ಲಿಂ ಸಮುದಾಯದ ಸದಸ್ಯರು ಧರ್ಮಾರ್ಥ ನಿಧಿಯನ್ನು ಬಳಸಿ ನಿರ್ಮಿಸಿದ ಖಾಸ್ರಾ ನಂ. 2223 ರಲ್ಲಿ ಮಸೀದಿ ಅಸ್ತಿತ್ವದಲ್ಲಿದೆ ಎಂದು ದೃಢಪಡಿಸಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ವಕ್ಫ್ ಆಯುಕ್ತರ ವರದಿಯು “ಮಸೀದಿಯನ್ನು ಸುನ್ನಿ ಸಮುದಾಯವು ಸಕ್ರಿಯವಾಗಿ ಬಳಸುತ್ತದೆ” ಎಂದು ಪ್ರಮಾಣೀಕರಿಸಿದೆ ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ.

“1987 ರಲ್ಲಿ, ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು ಅಧಿಕೃತವಾಗಿ ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಯಿತು. ಆದರೆ, ಸೆಪ್ಟೆಂಬರ್ 2024 ರಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕರಾದ ಜಿತೇಂದ್ರ ಸಿಂಗ್ ಚೌಹಾಣ್, ಸ್ವಾಮಿ ದರ್ಶನ್ ಭಾರತಿ, ಸೋನು ಸಿಂಗ್ ನೇಗಿ, ಲಖ್ಪತ್ ಸಿಂಗ್ ಭಂಡಾರಿ ಮತ್ತು ಅನುಜ್ ವಾಲಿಯಾ ಸೇರಿದಂತೆ ಸಂಯುಕ್ತ ಸನಾತನ ಧರ್ಮ ರಕ್ಷಾ ಸಂಘದ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್, ಮಸೀದಿ ಕೆಡವುವುದಾಗಿ ಬೆದರಿಕೆ ಹಾಕಲು ಆರಂಭಿಸಿತು” ಎಂದು ಅರ್ಜಿದಾದರರು ಕೋರ್ಟ್‌ಗೆ ಹೇಳಿದ್ದಾರೆ.

ಈ ನಾಯಕರು ಮಸೀದಿಯ ಕಾನೂನುಬದ್ಧತೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವರುಣಾವತ್ ಪರ್ವತದ ಬುಡದಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸುತ್ತಿರುವ ಸಂಯುಕ್ತ ಸನಾತನ ಧರ್ಮ ರಕ್ಷಣಾ ಸಂಘದ ನೇತೃತ್ವದಲ್ಲಿ ವ್ಯಾಪಕ ಅಭಿಯಾನ ನಡೆಸಲಾಗುತ್ತಿದೆ. ಆರೆಸ್ಸೆಸ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಡಿಸೆಂಬರ್ 1 ರಂದು ತಮ್ಮ ಹೋರಾಟಕ್ಕೆ ಬೆಂಬಲವಾಗಿ ಮಹಾಪಂಚಾಯತ್ ನಡೆಸುವ ಯೋಜನೆಯನ್ನು ಪ್ರಕಟಿಸಿದೆ.

ಬಿಜೆಪಿ ಪರ ಸಂಘಟನೆಗಳು ಕೃತ್ಯಗಳ ಕಾರಣಕ್ಕೆ ಪ್ರದೇಶದಲ್ಲಿ ಈಗಾಗಲೇ ಹಿಂಸಾಚಾರ ನಡೆದಿದ್ದು, ಅಕ್ಟೋಬರ್ 24 ರಂದು, ಉದ್ವಿಗ್ನತೆ ಭುಗಿಲೆದ್ದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೋಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಘಟನೆಯಲ್ಲಿ ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಪೊಲೀಸರು 200 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಂಟು ಶಂಕಿತರನ್ನು ಹೆಸರಿಸಿದ್ದಾರೆ. ಮೂವರು ಪ್ರಮುಖ ಸಂಘಟಕರನ್ನು ಬಂಧಿಸಲಾಗಿದ್ದರೂ, ಅವರು ನಂತರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...