Homeಮುಖಪುಟತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

ತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

- Advertisement -
- Advertisement -

ಶತಾಯಗತಾಯ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಮೇಲೆ ಸೋಲುಗಳು ಎದುರಾಗಿವೆ. ದೇಶದಲ್ಲಿಯೇ ಭಾರೀ ಬಹುಮತವನ್ನು ಹೊಂದಿರುವ ಬಿಜೆಪಿ ದಕ್ಷಿಣದ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗೆದ್ದಿಲ್ಲ.

ಅಷ್ಟು ಮಾತ್ರವಲ್ಲ ಪ್ರತಿ ಭಾರೀ ಮೋದಿ ತಮಿಳುನಾಡಿಗೆ ಭೇಟಿ ನೀಡಿದಾಗಲೆಲ್ಲಾ ಗೋಬ್ಯಾಕ್‌ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಸದ್ದು ಮಾಡುತ್ತವೆ. ಆದರೂ ಛಲಬಿಡದ ಬಿಜೆಪಿ ಏನಾದರೂ ಮಾಡಿ ನೆಲೆ ಕಂಡುಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಾಮಲ್ಲಪುರಂಗೆ ಕರೆದುಕೊಂಡು ಹೋಗಿ ಪುಸಿ ಹೊಡೆದಿದ್ದ ಮೋದಿಪಡೆ ಈ ಬಾರಿ ತಮಿಳಿನ ಸಾಂಸ್ಕೃತಿಕ ಸಾಹಿತ್ಯಕ ಲೋಕಕ್ಕೆ ಪ್ರವೇಶಿಸಲು ನೋಡಿ ಕೈಸುಟ್ಟುಕೊಂಡಿದೆ.

ತಮಿಳಿನ ಪ್ರಖಾತ್ಯ ಕವಿ ತಿರುವಳ್ಳುವರ್‌ ಎಂದರೆ ಎಲ್ಲರಿಗೂ ಪ್ರೀತಿ. ತಮಿಳರಿಗೆ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ಕೂಡ ತಿರುವಳ್ಳುವರ್‌ ಪ್ರತಿಮೆ ನಿರ್ಮಿಸಿ ಗೌರವಿಸಲಾಗಿದೆ. ಇಂತಹ ತಿರುವಳ್ಳುವರ್‌ರವರ ಭಾವಚಿತ್ರವನ್ನು ಬಿಜೆಪಿ ತಿರುಚಲು ಹೋಗಿ ಸಿಕ್ಕಿಬಿದ್ದಿದೆ. ಬಿಳಿ ಬಣ್ಣದ ವಸ್ತ್ರ ಧರಿಸಿರುವ ತಿರುವಳ್ಳುವರ್‌ರವರ ಭಾವಚಿತ್ರಗಳು ತಮಿಳುನಾಡಿನ ಎಲ್ಲಾ ಮನೆಗಳಲ್ಲೂ ಮನೆಮಾತಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಬಿಜೆಪಿಗರೂ ತಿರುವಳ್ಳುವರ್‌ ಹಿಂದೂ ಧರ್ಮದವರಾದ್ದರಿಂದ ಅವರ ಭಾವಚಿತ್ರ ಕೇಸರಿ ಬಣ್ಣದಲ್ಲಿರಬೇಕೆಂದು ಬಯಸಿ ಕೇಸರಿ ಬಣ್ಣದ ಭಾವಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ.

ಇದು ತಮಿಳರ ಸ್ವಾಭಿಮಾನವನ್ನು ಬಡಿದೆಬ್ಬಿಸಿದೆ. ಕೂಡಲೇ ’ಬಿಜೆಪಿ ತಿರುವಳ್ಳುವರ್‌ಗೆ ಅವಮಾನಿಸಿದ” #BJPInsultsThiruvalluvar ಎಂದು ಆರೋಪಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 1000 ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಚಳುವಳಿಗಳು ನಡೆದಿವೆ. ಎಡ ಅಥವಾ ಬಲವಾಗಿರಲಿ ಅವರಲ್ಲಿ ಯಾರೂ ಕೂಡ ತಿರುವಳ್ಳುವರ್‌ರವರಿಗೆ ಕೋಮು ಬಣ್ಣವನ್ನು ನೀಡಿರಲಿಲ್ಲ ಅಥವಾ  ಅವರ ಸಿದ್ಧಾಂತಕ್ಕೆ ಬಣ್ಣ ಕೊಟ್ಟಿರಲಿಲ್ಲ. ಆದರೀಗ ಬಿಜೆಪಿಯ ಕೋಮುರಾಜಕೀಯಕ್ಕೆ ತಿರುವಳ್ಳುವರ್ ಸಹ ಉಳಿದಿಲ್ಲ ಎಂಬುದು ಬೇಸರದ ಸಂಗತಿ ಎಂದು ಹಲವು ಜನ ಅಭಿಪ್ರಾಯಪಟ್ಟಿದ್ದಾರೆ.

ಮಹಾನ್ ಕವಿ ತಿರುವಳ್ಳುವರ್ ಅವರಿಗೆ ಕೇಸರಿ ಬಣ್ಣ ನೀಡಿ ಬಿಜೆಪಿ ಅವಮಾನಿಸಿದೆ. ತಿರುವಳ್ಳುವರ್ ಅವರ ಕೆಲಸವನ್ನು ವಿಶ್ವದಾದ್ಯಂತ ಜಾತ್ಯತೀತ ಮನೋಭಾವದಿಂದ ಸ್ವೀಕರಿಸಲಾಗಿದೆ. ಈ ವಿವಾದವನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಶೀಸ್‌ ವಿವೇಕ್‌ ಎಂಬುವವರು ಆಗ್ರಹಿಸಿದ್ದಾರೆ.

ಇಂದು ನಾನು ತುಂಬಾ ದುಃಖಿತನಾಗಿದ್ದೇನೆ. ನನ್ನ ಸಂಸ್ಕೃತಿ, ಸಾಹಿತ್ಯ, ಜನರು ಮತ್ತು ಸ್ಥಳಗಳೆಲ್ಲವೂ ಹಿಂದುತ್ವದಿಂದ ಅಪಾಯದಲ್ಲಿದೆ ಎಂದು ನಾವೆಲ್ಲರೂ ಸ್ಪಷ್ಟವಾಗಿ ನೋಡಬಹುದು.

ಬ್ರಿಟಿಷರಂತೆಯೇ ಬಿಜೆಪಿಯು ಸಹ ವಿಭಜನೆಯ ನಿಯಮವನ್ನು ಬಳಸಿಕೊಂಡು ತಮಿಳುನಾಡು ಪ್ರವೇಶಿಸಲು ಪ್ರಯತ್ನಿಸುತ್ತಿದೆ. ನಾನು ಇದನ್ನು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ ಅಂಬೇಡ್ಕರ್‌ ಸೇರಿದಂತೆ ಎಲ್ಲಾ ನಾಯಕರನ್ನು ಕೇಸರಿ ಬಣ್ಣಕ್ಕೆ ತಿರುಗಿಸುವ ಬಿಜೆಪಿಯ ತಂತ್ರಕ್ಕೆ ಪ್ರತಿರೋಧ ವ್ಯಕ್ತವಾಗಿದೆ. ಬಣ್ಣವನ್ನಷ್ಟೇ ಬದಲಿಸಬಹದು ನಮ್ಮ ಚಿಂತನೆಗಳನ್ನು ಬದಲಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...