ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಉನ್ನತ ಮಟ್ಟದ ಸಭೆಯು ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಹೇರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಲಾಗಿದ್ದು, ಜಾತಿ ಆಧಾರಿತ ಜನಗಣತಿಯನ್ನು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಪಕ್ಷ ಸಭೆಯ ನಿರ್ಣಯದಲ್ಲಿ ತೀವ್ರವಾಗಿ ಟೀಕಿಸಿದೆ. ಈ ಮೂಲಕ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತರೂಢ ಡಿಎಂಕೆ ಪಕ್ಷವು ತಯಾರಿ ಪ್ರಾರಂಭಿಸಿದೆ. ಹಿಂದಿ ಹೇರಿಕೆ
ಮಣಿಪುರದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಬಗ್ಗೆ “ಮೂಕ ಪ್ರೇಕ್ಷಕ”ನಾಗಿ ಇರುವ ಬದಲಿಗೆ ಸಕ್ರಿಯವಾಗಿ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಎಂಕೆ ಕರೆ ನೀಡಿದೆ. ಗಲಭೆ ಪೀಡಿತ ಮಣಿಪುರದಲ್ಲಿ ಎಲ್ಲಾ ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ಮತ್ತು ಈ ಪ್ರದೇಶದಲ್ಲಿ ಮಾನವೀಯತೆಯನ್ನು ಪುನಃಸ್ಥಾಪಿಸುವ ಅಗತ್ಯವನ್ನು ಪಕ್ಷವು ಒತ್ತಿಹೇಳಿದೆ. ಹಿಂದಿ ಹೇರಿಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
16 ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ತಮಿಳುನಾಡಿನ ವಿನಂತಿಗಳನ್ನು ಸೇರಿಸುವಂತೆ ಸಭೆಯಲ್ಲಿ ಅಂಗೀಕರಿಸಲಾದ ಮತ್ತೊಂದು ನಿರ್ಣಯಲ್ಲಿ ಡಿಎಂಕೆ ಪಕ್ಷವೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ರಾಜ್ಯದ ಆರ್ಥಿಕ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಈ ನಿರ್ಣಯಗಳನ್ನು ಅಂಗೀಕರಿಸಲು ಪಕ್ಷವು ಕರೆ ನೀಡಿದೆ.
2026 ರ ತಮಿಳುನಾಡು ವಿಧಾನಸಭಾ ಚುನಾವಣೆಯ ತಯಾರಿಯ ಭಾಗವಾಗಿ ತಳಮಟ್ಟದ ಸಾಂಸ್ಥಿಕ ಕೆಲಸವನ್ನು ತಕ್ಷಣವೇ ಪ್ರಾರಂಭಿಸಲು ಡಿಎಂಕೆ ನಾಯಕತ್ವವು ತನ್ನ ಪಕ್ಷದ ಕಾರ್ಯಕರ್ತರಿಗೆ ನಿರ್ದೇಶನ ನೀಡಿದೆ. ಅಷ್ಟೆ ಅಲ್ಲದೆ, ಪಕ್ಷವೂ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೆ ಪೂರ್ಣಾವಧಿ ಕಾರ್ಯಕರ್ತರನ್ನು ನೇಮಿಸಿದೆ.
ಆಯ್ಕೆ ಮಾಡಲಾದ ಅರ್ಧದಷ್ಟು ಪೂರ್ಣಾವಧಿ ಕಾರ್ಯಕರ್ತರು 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿರುವವರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಡಿಎಂಕೆ ನೇತೃತ್ವದ ಇಂಡಿಯಾ ಒಕ್ಕೂಟವು ತಮಿಳುನಾಡಿನ ಎಲ್ಲಾ 39 ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿರುವ ಏಕೈಕ ಸ್ಥಾನವನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ.
ನೇಮಕಗೊಂಡ ಪೂರ್ಣಾವಧಿ ಕಾರ್ಯಕರ್ತರು ತಮ್ಮ ಕ್ಷೇತ್ರಗಳಲ್ಲಿನ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಗುರುತಿಸಿ ರಾಜ್ಯ ಪಕ್ಷದ ಪ್ರಧಾನ ಕಛೇರಿಗೆ ಸಾಪ್ತಾಹಿಕ ಪ್ರಗತಿ ವರದಿಗಳನ್ನು ಸಲ್ಲಿಸಬೇಕಾಗುತ್ತದೆ. ಅಲ್ಲದೆ, ಸಮನ್ವಯವನ್ನು ಹೆಚ್ಚಿಸಲು ಮತ್ತು ಪ್ರತಿ ಜಿಲ್ಲೆಯ ಕಾರ್ಯಕ್ಷಮತೆಯ ಮೇಲ್ವಿಚಾರಣೆ ಮಾಡಲು ಸಚಿವರನ್ನು ನೇಮಿಸಲಾಗಿದೆ. ಈ ಸಚಿವರು ಕ್ಷೇತ್ರದ ಉಸ್ತುವಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲಿದ್ದು, ಪ್ರಗತಿಯ ಮೇಲ್ವಿಚಾರಣೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುತ್ತಾರೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಚಿವರ ಕಾರ್ಯವೈಖರಿಯನ್ನು ಖುದ್ದಾಗಿ ಗಮನಿಸಲಿದ್ದು, 2026 ರ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 200 ಸ್ಥಾನಗಳನ್ನು ಗೆಲ್ಲುವ ಡಿಎಂಕೆ ಸಾಮರ್ಥ್ಯದ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ 133 ಸ್ಥಾನಗಳನ್ನು ಹೊಂದಿರುವ ಪಕ್ಷವು ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದ್ದು, ಅದಕ್ಕಾಗಿ ಕಠಿಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ
ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ


