Homeಮುಖಪುಟಹಿಂದಿ ಹೇರಿಕೆ | ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ತೆಗೆದುಕೊಂಡ ಡಿಎಂಕೆ

ಹಿಂದಿ ಹೇರಿಕೆ | ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ತೆಗೆದುಕೊಂಡ ಡಿಎಂಕೆ

- Advertisement -
- Advertisement -

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಉನ್ನತ ಮಟ್ಟದ ಸಭೆಯು ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಹೇರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಲಾಗಿದ್ದು, ಜಾತಿ ಆಧಾರಿತ ಜನಗಣತಿಯನ್ನು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಪಕ್ಷ ಸಭೆಯ ನಿರ್ಣಯದಲ್ಲಿ ತೀವ್ರವಾಗಿ ಟೀಕಿಸಿದೆ. ಈ ಮೂಲಕ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತರೂಢ ಡಿಎಂಕೆ ಪಕ್ಷವು ತಯಾರಿ ಪ್ರಾರಂಭಿಸಿದೆ. ಹಿಂದಿ ಹೇರಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಬಗ್ಗೆ “ಮೂಕ ಪ್ರೇಕ್ಷಕ”ನಾಗಿ ಇರುವ ಬದಲಿಗೆ ಸಕ್ರಿಯವಾಗಿ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಎಂಕೆ ಕರೆ ನೀಡಿದೆ. ಗಲಭೆ ಪೀಡಿತ ಮಣಿಪುರದಲ್ಲಿ ಎಲ್ಲಾ ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ಮತ್ತು ಈ ಪ್ರದೇಶದಲ್ಲಿ ಮಾನವೀಯತೆಯನ್ನು ಪುನಃಸ್ಥಾಪಿಸುವ ಅಗತ್ಯವನ್ನು ಪಕ್ಷವು ಒತ್ತಿಹೇಳಿದೆ. ಹಿಂದಿ ಹೇರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

16 ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ತಮಿಳುನಾಡಿನ ವಿನಂತಿಗಳನ್ನು ಸೇರಿಸುವಂತೆ ಸಭೆಯಲ್ಲಿ ಅಂಗೀಕರಿಸಲಾದ ಮತ್ತೊಂದು ನಿರ್ಣಯಲ್ಲಿ ಡಿಎಂಕೆ ಪಕ್ಷವೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ರಾಜ್ಯದ ಆರ್ಥಿಕ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಈ ನಿರ್ಣಯಗಳನ್ನು ಅಂಗೀಕರಿಸಲು ಪಕ್ಷವು ಕರೆ ನೀಡಿದೆ.

2026 ರ ತಮಿಳುನಾಡು ವಿಧಾನಸಭಾ ಚುನಾವಣೆಯ ತಯಾರಿಯ ಭಾಗವಾಗಿ ತಳಮಟ್ಟದ ಸಾಂಸ್ಥಿಕ ಕೆಲಸವನ್ನು ತಕ್ಷಣವೇ ಪ್ರಾರಂಭಿಸಲು ಡಿಎಂಕೆ ನಾಯಕತ್ವವು ತನ್ನ ಪಕ್ಷದ ಕಾರ್ಯಕರ್ತರಿಗೆ ನಿರ್ದೇಶನ ನೀಡಿದೆ. ಅಷ್ಟೆ ಅಲ್ಲದೆ, ಪಕ್ಷವೂ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೆ ಪೂರ್ಣಾವಧಿ ಕಾರ್ಯಕರ್ತರನ್ನು ನೇಮಿಸಿದೆ.

ಆಯ್ಕೆ ಮಾಡಲಾದ ಅರ್ಧದಷ್ಟು ಪೂರ್ಣಾವಧಿ ಕಾರ್ಯಕರ್ತರು 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿರುವವರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಡಿಎಂಕೆ ನೇತೃತ್ವದ ಇಂಡಿಯಾ ಒಕ್ಕೂಟವು ತಮಿಳುನಾಡಿನ ಎಲ್ಲಾ 39 ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿರುವ ಏಕೈಕ ಸ್ಥಾನವನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ.

ನೇಮಕಗೊಂಡ ಪೂರ್ಣಾವಧಿ ಕಾರ್ಯಕರ್ತರು ತಮ್ಮ ಕ್ಷೇತ್ರಗಳಲ್ಲಿನ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಗುರುತಿಸಿ ರಾಜ್ಯ ಪಕ್ಷದ ಪ್ರಧಾನ ಕಛೇರಿಗೆ ಸಾಪ್ತಾಹಿಕ ಪ್ರಗತಿ ವರದಿಗಳನ್ನು ಸಲ್ಲಿಸಬೇಕಾಗುತ್ತದೆ. ಅಲ್ಲದೆ, ಸಮನ್ವಯವನ್ನು ಹೆಚ್ಚಿಸಲು ಮತ್ತು ಪ್ರತಿ ಜಿಲ್ಲೆಯ ಕಾರ್ಯಕ್ಷಮತೆಯ ಮೇಲ್ವಿಚಾರಣೆ ಮಾಡಲು ಸಚಿವರನ್ನು ನೇಮಿಸಲಾಗಿದೆ. ಈ ಸಚಿವರು ಕ್ಷೇತ್ರದ ಉಸ್ತುವಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲಿದ್ದು, ಪ್ರಗತಿಯ ಮೇಲ್ವಿಚಾರಣೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುತ್ತಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಚಿವರ ಕಾರ್ಯವೈಖರಿಯನ್ನು ಖುದ್ದಾಗಿ ಗಮನಿಸಲಿದ್ದು, 2026 ರ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 200 ಸ್ಥಾನಗಳನ್ನು ಗೆಲ್ಲುವ ಡಿಎಂಕೆ ಸಾಮರ್ಥ್ಯದ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ 133 ಸ್ಥಾನಗಳನ್ನು ಹೊಂದಿರುವ ಪಕ್ಷವು ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದ್ದು, ಅದಕ್ಕಾಗಿ ಕಠಿಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...