Homeಅಂಕಣಗಳುಎಲೆಮರೆಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ 'ಸಂತೋಷ ಗುಡ್ಡಿಯಂಗಡಿ’

ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ಶಾಲಾ ಶಿಕ್ಷಣದಲ್ಲಿ ರಂಗಭೂಮಿ ಕಸಿ ಮಾಡುತ್ತಿರುವ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಒಂದಿಷ್ಟು...

- Advertisement -
- Advertisement -

ಎಲೆಮರೆ-5

-ಅರುಣ್ ಜೋಳದಕೂಡ್ಲಿಗಿ.

ಶಿವಾಜಿಯ ಆಡಳಿತವಿದ್ದಾಗ ಆತನ ಸೈನ್ಯದಲ್ಲಿದ್ದ ಒಂದು ಗುಂಪು ಆತನ  ಸಾವಿನ ನಂತರ ಸಾಗರದ ಕಡೆಗೆ ವಲಸೆ ಬರುತ್ತಾರೆ. ಇಲ್ಲಿ ಹವ್ಯಕರ ಮನೆಗಳಲ್ಲಿ ಕೆಲವು ಕಾಲ ಜೀತ ಮಾಡಿಕೊಂಡಿದ್ದು, ಕಾಲಾನಂತರ ಶಿವನ ಭಕ್ತರಾಗಿದ್ದ ಇವರು ಕರಾವಳಿಯ ಕೋಟೇಶ್ವರಕ್ಕೆ ಬಂದು ಅಲ್ಲಿನ ಕೆರೆಗೆ ತಾವು ಕಟ್ಟಿದ್ದ ಲಿಂಗವನ್ನು ಎಸೆದು ಮೀನು ತಿನ್ನಲು ಶುರುಮಾಡಿದ ಪುಟ್ಟ ಸಮುದಾಯವೆ ‘ಕೂಸಾಳ’. ಜೀತ ಮಾಡುವವರನ್ನು ಒಡೆಯರು ಮನೆಯ ಮಕ್ಕಳೆಂದು ಪ್ರೀತಿಯಿಂದ ಕರೆಯುತ್ತಾರೆಂದು ನಂಬಿಸಿರುವ ‘ಕೂಸಾಳು’ ಪದವೇ ಸಮುದಾಯಕ್ಕೂ ಬಂದಿರಬಹುದು. ಉಡುಪಿ, ಕಾರ್ಕಳ, ಕುಂದಾಪುರ ಮುಂತಾದ ಕಡೆಗಳಲ್ಲಿ ನೆಲೆಸಿದ ಕೂಸಾಳುಗಳು ದಲಿತ ಅಸ್ಪೃಶ್ಯ ಸಮುದಾಯಕ್ಕೆ ಸೇರಿದ್ದು, ಇದೀಗ ತಮ್ಮನ್ನು ಆದಿ ದ್ರಾವಿಡ ಎಂದು ಕರೆದುಕೊಳ್ಳುತ್ತಾರೆ.

ಈ ಕೂಸಾಳು ಸಮುದಾಯ ‘ಕೀಳು’ ಎನ್ನುವ ಭೂತವನ್ನು ಆರಾಧಿಸುತ್ತಾರೆ. ಮರದ ಬಳಿ ಇಟ್ಟಿರುವ ಕಲ್ಲೇ ದೈವ, ಈ ದೈವದ ಹೆಸರೇ ಕೀಳು. ಹೀಗೆ ತಮ್ಮದೇ ಆದ ಪುಟ್ಟ ದೈವದ ಮನೆಗಳನ್ನು ಕಟ್ಟಿಕೊಂಡು ಪೂಜೆ ಮಾಡುತ್ತ ತಮ್ಮ ಗುರುತನ್ನು ಕಾಪಿಟ್ಟುಕೊಂಡ ಪುಟ್ಟದಾದ ಕೂಸಾಳು ಸಮುದಾಯದ ಒಳಗಿಂದ ಅಕ್ಷರದ ಬೆಳಕಿನಲ್ಲಿ ನಡೆದುಕೊಂಡು ಬಂದವರು ಸಂತೋಷ್ ಗುಡ್ಡಿಯಂಗಡಿ.

“ಮಂತ್ರವಾದಿಯಾದ ತಾತ ಸಾಗರ – ಶಿವಮೊಗ್ಗದ ಕಡೆಯ ಘಟ್ಟಕ್ಕೆ ಹೋಗುವಾಗ ಕೊಲ್ಲೂರು ಕಾಡಲ್ಲಿ ರಾತ್ರಿಯಾಗುತ್ತದೆ. ಆಗ ಮಂತ್ರಶಕ್ತಿಯಿಂದ ಎರಡು ಹುಲಿಗಳನ್ನು ವಶಮಾಡಿಕೊಂಡು ತನ್ನ ಕಾಲು ಮತ್ತು ತಲೆಯ ಬಳಿ ಕಾವಲಿಗಿರಿಸಿ ಅಜ್ಜ ಮಲಗುತ್ತಾನೆ. ದಾರಿಹೋಕ ಬ್ರಿಟೀಷ್ ಅಧಿಕಾರಿ ಅಜ್ಜನನ್ನು ನೋಡುತ್ತಾನೆ. ಈ ಮನುಷ್ಯ ಅಸಾಮಾನ್ಯ, ಇಂತವರು ನಮ್ಮ ವಿರುದ್ಧ ತಿರುಗಿಬಿದ್ದರೆ ಕಷ್ಟವೆಂದು ಆ ಮಂತ್ರವಾದಿಯನ್ನು ಏಳು ಗುಂಡಿಟ್ಟು ಕೊಂದರಂತೆ. ಅಜ್ಜಿಯ ಮೇಲೆ ಭೂತ ಬಂದು ಮೈಮೇಲೆ ಅಳಕೊಂಡು ಈ ಕತೆಯನ್ನು ಹೇಳುತ್ತಿದ್ದರು” ಎನ್ನುತ್ತ ತನ್ನ ಮುತ್ತಾತನ ಕತೆ ಹೇಳುವ ಸಂತೋಷ ತನ್ನ ಸಮುದಾಯದ ಕಥನಗಳನ್ನು ಒಡಲೊಳಗಿಟ್ಟುಕೊಂಡ ಯುವಕ.

ನಂದನ್ ನೀಲೆಕಣಿ ಅವರ ಶಿರಸಿಯ ಕಡೆ ತೋಟದಲ್ಲಿ ಜೀತ ಮಾಡುತ್ತಿದ್ದ ತಂದೆತಾಯಿಯ ಮಗನಾದ ಸಂತೋಷ್, ಪಿಯುಸಿ ಫೇಲಾಗಿ ಮನೆಯಲ್ಲಿ ಸುಳ್ಳು ಹೇಳಿ, 4 ವರ್ಷ ಗಾರೆ ಕೆಲಸ ಮಾಡುತ್ತಾನೆ. ಹಿಮಕರ ಎನ್ನುವವರ ಸಂಪರ್ಕ ಸಿಕ್ಕು ‘ನಮ್ಮ ಭೂಮಿ’ ಸಂಸ್ಥೆಯ ಬೀದಿನಾಟಕಕ್ಕೆ ಸಂತೋಷ್ ಅವರನ್ನು ಪರಿಚಯಿಸುತ್ತಾರೆ. ನಂತರ ಮುರಾರಿ ಬಲ್ಲಾಳ್ ಎನ್ನುವವರು ನೀನಾಸಂಗೆ ದಾರಿ ತೋರುತ್ತಾರೆ. ನೀನಾಸಂ ತಿರುಗಾಟದಲ್ಲಿ ಮೂರು ವರ್ಷ ಓಡಾಟ ಮಾಡಿ, ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ಒಂದು ವರ್ಷ ಮೇಷ್ಟ್ರಾಗಿ ಕೆಲಸ ಮಾಡುತ್ತಾರೆ. ಅದೇ ಹೊತ್ತಿಗೆ 2009 ರಲ್ಲಿ ಸರಕಾರಿ ಪ್ರೌಢಶಾಲೆಯ ನಾಟಕದ ಮೇಷ್ಟ್ರಾಗಿ ಕೆಲಸಕ್ಕೆ ಸೇರುತ್ತಾರೆ. ಇದೀಗ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಾ ಒಂದು ದಶಕ ಪೂರೈಸಿದ್ದಾರೆ.

ಶಾಲೆಗಳಲ್ಲಿ ರಂಗಶಿಕ್ಷಣಕ್ಕೆ ಇಂತದ್ದೇ ಮಾದರಿಯಿಲ್ಲ. ಆಯಾ ಶಾಲೆಯಲ್ಲಿ ಆಯ್ಕೆಯಾದ ರಂಗಶಿಕ್ಷಕರು ತಮ್ಮ ಕ್ರಿಯಾಶೀಲತೆ, ಹೊಸತನದಿಂದ ತಾವೇ ಮಾದರಿಗಳನ್ನು ರೂಪಿಸಬೇಕು. ಒಂದು ದಶಕದಲ್ಲಿ ಸಂಶೋಷ್ ಅವರು ರಂಗ ಶಿಕ್ಷಕರಾಗಿ ನಡೆಸಿದ ಪ್ರಯೋಗಗಳು ನಿಜಕ್ಕೂ ಅತ್ಯುತ್ತಮ ರಂಗಶಿಕ್ಷಣದ ಮಾದರಿಗಳಾಗಿವೆ. ಇಡೀ ಶಾಲೆಯನ್ನೇ ಒಂದು ರಂಗಮಂದಿರವನ್ನಾಗಿಸಿ, ಮಕ್ಕಳನ್ನು ರಂಗಭೂಮಿಯ ಕಣ್ಣೋಟದಿಂದ ಲೋಕವನ್ನು ನೋಡುವ ಮಾದರಿ ರೂಪಿಸಿದ್ದಾರೆ. ಈ ಪ್ರಯೋಗದಲ್ಲಿ ಮಕ್ಕಳಿಂದ ಈತನಕ 25 ನಾಟಕಗಳನ್ನು ಮಾಡಿಸಿದ್ದಾರೆ. ಸಂತೋಷ್ ಅವರು ‘ಸನಿಮಾತ್ಮೆ’ ಮತ್ತು ‘ಗಾಯ’ ಎನ್ನುವ ನಾಟಕಗಳನ್ನು ಬರೆದಿದ್ದಾರೆ. ಮಕ್ಕಳಿಗಾಗಿಯೇ ‘ಹುಲಿಯಜ್ಜ’, ‘ತಿಕ್ಕಲು ರಾಜ ತಿರಬೋಕಿ ರಾಜ್ಯ’, ‘ಭೂಮಿಗೆ ಜ್ವರ ಬಂದಿದೆ’, ‘ಜಟ್ರೋಫ ಎಂಬ ವರ’, ‘ಮಾಯದ ಡಬ್ಬಿ’, ‘ಪ್ಲಾಸ್ಟಿಕ್ ರಾಕ್ಷಸ’, ‘ಕಾಮನಬಿಲ್ಲಿನ ಸೈನಿಕರು’, ‘ಕಪ್ಪು ವಜ್ರ’ ನಾಟಕಗಳನ್ನು ಮಾಡಿಸಿದ್ದಾರೆ.

ಹೆಮ್ಮರಗಾಲ ಶಾಲೆಯಲ್ಲಿದ್ದಾಗ ಶಾಲಾ ಮಕ್ಕಳ ಬರಹಗಳನ್ನೊಳಗೊಂಡ “ಹೆಮ್ಮರ” ಕೈಬರಹದ ಮಾಸಿಕವನ್ನು ಸಂತೋಷ್‌ರವರು ಬಹಳ ವರ್ಷ ಪ್ರಕಟಿಸಿದ್ದಾರೆ. ಅದು ಮಕ್ಕಳ ವಿಶೇಷ ಪ್ರತಿಭೆಯನ್ನು ಅನಾವರಣಗೊಳಿಸಲು, ಮಕ್ಕಳಲ್ಲಿ ಓದಲು, ಬರೆಯಲು ದೊಡ್ಡ ಸ್ಫೂರ್ತಿಯನ್ನು ನೀಡಿತ್ತು.

ಸ್ವೀಡನ್‌ನ 16 ವರ್ಷದ ಶಾಲಾ ಬಾಲಕಿ ಗ್ರೇಟಾ ಥನ್ಬರ್ಗ್ ಹವಾಮಾನ ವೈಪರೀತ್ಯ ಕಂಡು 2018 ರಲ್ಲಿ ‘ಸ್ಕೂಲ್ ಸ್ಟ್ರೈಕ್ ಫಾರ್ ಕ್ಲೈಮೆಟ್/ ಪ್ರೈಡೇಸ್ ಫಾರ್ ಫ್ಯೂಚರ್’ ಅಭಿಯಾನ ಆರಂಭಿಸಿದಳು. ಸೆಪ್ಟಂಬರ್ 23 ರಂದು ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ‘ನಿಮಗೆಷ್ಟು ಧೈರ್ಯ’? ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯ, ಕನಸುಗಳನ್ನು ಚೂರಾಗಿಸಿದ್ದೀರಿ ಎಂದು ಜಾಗತಿಕ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಳು. ಗ್ರೇಟಾ ಪ್ರಭಾವದಿಂದ ಸಂತೋಷ್ ತಮ್ಮ ಶಾಲೆಯ ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಿ ‘ನಾಳೆಗಳು ನಮ್ಮದು’ ಎನ್ನುವ ಧ್ಯೇಯವಾಕ್ಯದೊಂದಿಗೆ ‘ನಿಮ್ಮ ಕಸ ನಿಮಗೆ’ ಎಂಬ ಅಭಿಯಾನವನ್ನು ಆರಂಭಿಸಿದರು. ಉತ್ಪಾದಕ ಕಂಪನಿಗಳಿಗೇ ಅವರ ಪ್ಲಾಸ್ಟಿಕ್ ಕಸವನ್ನು ಪೋಸ್ಟ್ ಮಾಡುವ ವಿಶಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ಹೆಗ್ಗಡನಳ್ಳಿ ಮಕ್ಕಳು ರಾಜ್ಯವ್ಯಾಪಿ ಗಮನ ಸೆಳೆಯುತ್ತಿದ್ದಾರೆ. ಇದು ಇಡೀ ದೇಶಕ್ಕೆ ಮಾದರಿಯಾಗಿದೆ.

ಸಂತೋಷ್ ಒಳ್ಳೆಯ ಕಥೆಗಾರ ಕೂಡ. ಅವರ ‘ಕೊರಬಾಡು’ ಕಥಾಸಂಕಲನ ಭಿನ್ನ ಪ್ರಯೋಗ. ಅಷ್ಟು ಚರ್ಚೆಗೆ ಬಾರದ ಈ ಸಂಕಲನದಲ್ಲಿ ದೇವನೂರು ಮಾದರಿಯ ಕಥನ ಶೈಲಿಯನ್ನು ಅನುಕರಿಸುತ್ತಲೇ ಅದನ್ನು ಮೀರಲು ಪ್ರಯತ್ನಿಸಲಾಗಿದೆ. ಬಹುಶಃ ದೇವನೂರೋತ್ತರ ನಂಜನಗೂಡಿನ ಜನರ ನುಡಿಗಟ್ಟನ್ನು ಸಂತೋಷ್ ಅವರ ಕತೆಗಳಲ್ಲಿ ಕಾಣಬಹುದು. ಕಥನ ಶೈಲಿಯಲ್ಲಿಯೂ ದೇವನೂರರ ಮಾದರಿಯನ್ನು ಹೊಸದಾಗಿ ವಿಸ್ತರಿಸಲು ಪ್ರಯತ್ನಿಸಿದ್ದಾರೆ. ಸಂತೋಷ್ ನಾಟಕದ ಹಿನ್ನೆಲೆಯವರಾದ ಕಾರಣ ಈ ಕತೆಗಳಲ್ಲಿನ ನಾಟಕೀಯ ಗುಣ ವಿಶಿಷ್ಟವಾಗಿ ಮೂಡಿಬಂದಿದೆ. ಹೊಸ ತಲೆಮಾರಿನ ಬರಹಗಾರರು ಓದಲೇಬೇಕಾದ ಕಥಾ ಸಂಕಲನವಿದು. ಹೀಗೆ ಸಂತೋಷ್ ತನ್ನದೇ ಲೋಕದಲ್ಲಿ ನಡೆಸುತ್ತಿರುವ ಕ್ರಿಯಾಶೀಲ ಚಟುವಟಿಕೆಗಳು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಮ್ಮೂರ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಹೆಮ್ಮೆಯೆನಿಸುತ್ತದೆ. ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...