Homeಅಂಕಣಗಳುಎಲೆಮರೆಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ 'ಸಂತೋಷ ಗುಡ್ಡಿಯಂಗಡಿ’

ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ಶಾಲಾ ಶಿಕ್ಷಣದಲ್ಲಿ ರಂಗಭೂಮಿ ಕಸಿ ಮಾಡುತ್ತಿರುವ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಒಂದಿಷ್ಟು...

- Advertisement -
- Advertisement -

ಎಲೆಮರೆ-5

-ಅರುಣ್ ಜೋಳದಕೂಡ್ಲಿಗಿ.

ಶಿವಾಜಿಯ ಆಡಳಿತವಿದ್ದಾಗ ಆತನ ಸೈನ್ಯದಲ್ಲಿದ್ದ ಒಂದು ಗುಂಪು ಆತನ  ಸಾವಿನ ನಂತರ ಸಾಗರದ ಕಡೆಗೆ ವಲಸೆ ಬರುತ್ತಾರೆ. ಇಲ್ಲಿ ಹವ್ಯಕರ ಮನೆಗಳಲ್ಲಿ ಕೆಲವು ಕಾಲ ಜೀತ ಮಾಡಿಕೊಂಡಿದ್ದು, ಕಾಲಾನಂತರ ಶಿವನ ಭಕ್ತರಾಗಿದ್ದ ಇವರು ಕರಾವಳಿಯ ಕೋಟೇಶ್ವರಕ್ಕೆ ಬಂದು ಅಲ್ಲಿನ ಕೆರೆಗೆ ತಾವು ಕಟ್ಟಿದ್ದ ಲಿಂಗವನ್ನು ಎಸೆದು ಮೀನು ತಿನ್ನಲು ಶುರುಮಾಡಿದ ಪುಟ್ಟ ಸಮುದಾಯವೆ ‘ಕೂಸಾಳ’. ಜೀತ ಮಾಡುವವರನ್ನು ಒಡೆಯರು ಮನೆಯ ಮಕ್ಕಳೆಂದು ಪ್ರೀತಿಯಿಂದ ಕರೆಯುತ್ತಾರೆಂದು ನಂಬಿಸಿರುವ ‘ಕೂಸಾಳು’ ಪದವೇ ಸಮುದಾಯಕ್ಕೂ ಬಂದಿರಬಹುದು. ಉಡುಪಿ, ಕಾರ್ಕಳ, ಕುಂದಾಪುರ ಮುಂತಾದ ಕಡೆಗಳಲ್ಲಿ ನೆಲೆಸಿದ ಕೂಸಾಳುಗಳು ದಲಿತ ಅಸ್ಪೃಶ್ಯ ಸಮುದಾಯಕ್ಕೆ ಸೇರಿದ್ದು, ಇದೀಗ ತಮ್ಮನ್ನು ಆದಿ ದ್ರಾವಿಡ ಎಂದು ಕರೆದುಕೊಳ್ಳುತ್ತಾರೆ.

ಈ ಕೂಸಾಳು ಸಮುದಾಯ ‘ಕೀಳು’ ಎನ್ನುವ ಭೂತವನ್ನು ಆರಾಧಿಸುತ್ತಾರೆ. ಮರದ ಬಳಿ ಇಟ್ಟಿರುವ ಕಲ್ಲೇ ದೈವ, ಈ ದೈವದ ಹೆಸರೇ ಕೀಳು. ಹೀಗೆ ತಮ್ಮದೇ ಆದ ಪುಟ್ಟ ದೈವದ ಮನೆಗಳನ್ನು ಕಟ್ಟಿಕೊಂಡು ಪೂಜೆ ಮಾಡುತ್ತ ತಮ್ಮ ಗುರುತನ್ನು ಕಾಪಿಟ್ಟುಕೊಂಡ ಪುಟ್ಟದಾದ ಕೂಸಾಳು ಸಮುದಾಯದ ಒಳಗಿಂದ ಅಕ್ಷರದ ಬೆಳಕಿನಲ್ಲಿ ನಡೆದುಕೊಂಡು ಬಂದವರು ಸಂತೋಷ್ ಗುಡ್ಡಿಯಂಗಡಿ.

“ಮಂತ್ರವಾದಿಯಾದ ತಾತ ಸಾಗರ – ಶಿವಮೊಗ್ಗದ ಕಡೆಯ ಘಟ್ಟಕ್ಕೆ ಹೋಗುವಾಗ ಕೊಲ್ಲೂರು ಕಾಡಲ್ಲಿ ರಾತ್ರಿಯಾಗುತ್ತದೆ. ಆಗ ಮಂತ್ರಶಕ್ತಿಯಿಂದ ಎರಡು ಹುಲಿಗಳನ್ನು ವಶಮಾಡಿಕೊಂಡು ತನ್ನ ಕಾಲು ಮತ್ತು ತಲೆಯ ಬಳಿ ಕಾವಲಿಗಿರಿಸಿ ಅಜ್ಜ ಮಲಗುತ್ತಾನೆ. ದಾರಿಹೋಕ ಬ್ರಿಟೀಷ್ ಅಧಿಕಾರಿ ಅಜ್ಜನನ್ನು ನೋಡುತ್ತಾನೆ. ಈ ಮನುಷ್ಯ ಅಸಾಮಾನ್ಯ, ಇಂತವರು ನಮ್ಮ ವಿರುದ್ಧ ತಿರುಗಿಬಿದ್ದರೆ ಕಷ್ಟವೆಂದು ಆ ಮಂತ್ರವಾದಿಯನ್ನು ಏಳು ಗುಂಡಿಟ್ಟು ಕೊಂದರಂತೆ. ಅಜ್ಜಿಯ ಮೇಲೆ ಭೂತ ಬಂದು ಮೈಮೇಲೆ ಅಳಕೊಂಡು ಈ ಕತೆಯನ್ನು ಹೇಳುತ್ತಿದ್ದರು” ಎನ್ನುತ್ತ ತನ್ನ ಮುತ್ತಾತನ ಕತೆ ಹೇಳುವ ಸಂತೋಷ ತನ್ನ ಸಮುದಾಯದ ಕಥನಗಳನ್ನು ಒಡಲೊಳಗಿಟ್ಟುಕೊಂಡ ಯುವಕ.

ನಂದನ್ ನೀಲೆಕಣಿ ಅವರ ಶಿರಸಿಯ ಕಡೆ ತೋಟದಲ್ಲಿ ಜೀತ ಮಾಡುತ್ತಿದ್ದ ತಂದೆತಾಯಿಯ ಮಗನಾದ ಸಂತೋಷ್, ಪಿಯುಸಿ ಫೇಲಾಗಿ ಮನೆಯಲ್ಲಿ ಸುಳ್ಳು ಹೇಳಿ, 4 ವರ್ಷ ಗಾರೆ ಕೆಲಸ ಮಾಡುತ್ತಾನೆ. ಹಿಮಕರ ಎನ್ನುವವರ ಸಂಪರ್ಕ ಸಿಕ್ಕು ‘ನಮ್ಮ ಭೂಮಿ’ ಸಂಸ್ಥೆಯ ಬೀದಿನಾಟಕಕ್ಕೆ ಸಂತೋಷ್ ಅವರನ್ನು ಪರಿಚಯಿಸುತ್ತಾರೆ. ನಂತರ ಮುರಾರಿ ಬಲ್ಲಾಳ್ ಎನ್ನುವವರು ನೀನಾಸಂಗೆ ದಾರಿ ತೋರುತ್ತಾರೆ. ನೀನಾಸಂ ತಿರುಗಾಟದಲ್ಲಿ ಮೂರು ವರ್ಷ ಓಡಾಟ ಮಾಡಿ, ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ಒಂದು ವರ್ಷ ಮೇಷ್ಟ್ರಾಗಿ ಕೆಲಸ ಮಾಡುತ್ತಾರೆ. ಅದೇ ಹೊತ್ತಿಗೆ 2009 ರಲ್ಲಿ ಸರಕಾರಿ ಪ್ರೌಢಶಾಲೆಯ ನಾಟಕದ ಮೇಷ್ಟ್ರಾಗಿ ಕೆಲಸಕ್ಕೆ ಸೇರುತ್ತಾರೆ. ಇದೀಗ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಾ ಒಂದು ದಶಕ ಪೂರೈಸಿದ್ದಾರೆ.

ಶಾಲೆಗಳಲ್ಲಿ ರಂಗಶಿಕ್ಷಣಕ್ಕೆ ಇಂತದ್ದೇ ಮಾದರಿಯಿಲ್ಲ. ಆಯಾ ಶಾಲೆಯಲ್ಲಿ ಆಯ್ಕೆಯಾದ ರಂಗಶಿಕ್ಷಕರು ತಮ್ಮ ಕ್ರಿಯಾಶೀಲತೆ, ಹೊಸತನದಿಂದ ತಾವೇ ಮಾದರಿಗಳನ್ನು ರೂಪಿಸಬೇಕು. ಒಂದು ದಶಕದಲ್ಲಿ ಸಂಶೋಷ್ ಅವರು ರಂಗ ಶಿಕ್ಷಕರಾಗಿ ನಡೆಸಿದ ಪ್ರಯೋಗಗಳು ನಿಜಕ್ಕೂ ಅತ್ಯುತ್ತಮ ರಂಗಶಿಕ್ಷಣದ ಮಾದರಿಗಳಾಗಿವೆ. ಇಡೀ ಶಾಲೆಯನ್ನೇ ಒಂದು ರಂಗಮಂದಿರವನ್ನಾಗಿಸಿ, ಮಕ್ಕಳನ್ನು ರಂಗಭೂಮಿಯ ಕಣ್ಣೋಟದಿಂದ ಲೋಕವನ್ನು ನೋಡುವ ಮಾದರಿ ರೂಪಿಸಿದ್ದಾರೆ. ಈ ಪ್ರಯೋಗದಲ್ಲಿ ಮಕ್ಕಳಿಂದ ಈತನಕ 25 ನಾಟಕಗಳನ್ನು ಮಾಡಿಸಿದ್ದಾರೆ. ಸಂತೋಷ್ ಅವರು ‘ಸನಿಮಾತ್ಮೆ’ ಮತ್ತು ‘ಗಾಯ’ ಎನ್ನುವ ನಾಟಕಗಳನ್ನು ಬರೆದಿದ್ದಾರೆ. ಮಕ್ಕಳಿಗಾಗಿಯೇ ‘ಹುಲಿಯಜ್ಜ’, ‘ತಿಕ್ಕಲು ರಾಜ ತಿರಬೋಕಿ ರಾಜ್ಯ’, ‘ಭೂಮಿಗೆ ಜ್ವರ ಬಂದಿದೆ’, ‘ಜಟ್ರೋಫ ಎಂಬ ವರ’, ‘ಮಾಯದ ಡಬ್ಬಿ’, ‘ಪ್ಲಾಸ್ಟಿಕ್ ರಾಕ್ಷಸ’, ‘ಕಾಮನಬಿಲ್ಲಿನ ಸೈನಿಕರು’, ‘ಕಪ್ಪು ವಜ್ರ’ ನಾಟಕಗಳನ್ನು ಮಾಡಿಸಿದ್ದಾರೆ.

ಹೆಮ್ಮರಗಾಲ ಶಾಲೆಯಲ್ಲಿದ್ದಾಗ ಶಾಲಾ ಮಕ್ಕಳ ಬರಹಗಳನ್ನೊಳಗೊಂಡ “ಹೆಮ್ಮರ” ಕೈಬರಹದ ಮಾಸಿಕವನ್ನು ಸಂತೋಷ್‌ರವರು ಬಹಳ ವರ್ಷ ಪ್ರಕಟಿಸಿದ್ದಾರೆ. ಅದು ಮಕ್ಕಳ ವಿಶೇಷ ಪ್ರತಿಭೆಯನ್ನು ಅನಾವರಣಗೊಳಿಸಲು, ಮಕ್ಕಳಲ್ಲಿ ಓದಲು, ಬರೆಯಲು ದೊಡ್ಡ ಸ್ಫೂರ್ತಿಯನ್ನು ನೀಡಿತ್ತು.

ಸ್ವೀಡನ್‌ನ 16 ವರ್ಷದ ಶಾಲಾ ಬಾಲಕಿ ಗ್ರೇಟಾ ಥನ್ಬರ್ಗ್ ಹವಾಮಾನ ವೈಪರೀತ್ಯ ಕಂಡು 2018 ರಲ್ಲಿ ‘ಸ್ಕೂಲ್ ಸ್ಟ್ರೈಕ್ ಫಾರ್ ಕ್ಲೈಮೆಟ್/ ಪ್ರೈಡೇಸ್ ಫಾರ್ ಫ್ಯೂಚರ್’ ಅಭಿಯಾನ ಆರಂಭಿಸಿದಳು. ಸೆಪ್ಟಂಬರ್ 23 ರಂದು ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ‘ನಿಮಗೆಷ್ಟು ಧೈರ್ಯ’? ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯ, ಕನಸುಗಳನ್ನು ಚೂರಾಗಿಸಿದ್ದೀರಿ ಎಂದು ಜಾಗತಿಕ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಳು. ಗ್ರೇಟಾ ಪ್ರಭಾವದಿಂದ ಸಂತೋಷ್ ತಮ್ಮ ಶಾಲೆಯ ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಿ ‘ನಾಳೆಗಳು ನಮ್ಮದು’ ಎನ್ನುವ ಧ್ಯೇಯವಾಕ್ಯದೊಂದಿಗೆ ‘ನಿಮ್ಮ ಕಸ ನಿಮಗೆ’ ಎಂಬ ಅಭಿಯಾನವನ್ನು ಆರಂಭಿಸಿದರು. ಉತ್ಪಾದಕ ಕಂಪನಿಗಳಿಗೇ ಅವರ ಪ್ಲಾಸ್ಟಿಕ್ ಕಸವನ್ನು ಪೋಸ್ಟ್ ಮಾಡುವ ವಿಶಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ಹೆಗ್ಗಡನಳ್ಳಿ ಮಕ್ಕಳು ರಾಜ್ಯವ್ಯಾಪಿ ಗಮನ ಸೆಳೆಯುತ್ತಿದ್ದಾರೆ. ಇದು ಇಡೀ ದೇಶಕ್ಕೆ ಮಾದರಿಯಾಗಿದೆ.

ಸಂತೋಷ್ ಒಳ್ಳೆಯ ಕಥೆಗಾರ ಕೂಡ. ಅವರ ‘ಕೊರಬಾಡು’ ಕಥಾಸಂಕಲನ ಭಿನ್ನ ಪ್ರಯೋಗ. ಅಷ್ಟು ಚರ್ಚೆಗೆ ಬಾರದ ಈ ಸಂಕಲನದಲ್ಲಿ ದೇವನೂರು ಮಾದರಿಯ ಕಥನ ಶೈಲಿಯನ್ನು ಅನುಕರಿಸುತ್ತಲೇ ಅದನ್ನು ಮೀರಲು ಪ್ರಯತ್ನಿಸಲಾಗಿದೆ. ಬಹುಶಃ ದೇವನೂರೋತ್ತರ ನಂಜನಗೂಡಿನ ಜನರ ನುಡಿಗಟ್ಟನ್ನು ಸಂತೋಷ್ ಅವರ ಕತೆಗಳಲ್ಲಿ ಕಾಣಬಹುದು. ಕಥನ ಶೈಲಿಯಲ್ಲಿಯೂ ದೇವನೂರರ ಮಾದರಿಯನ್ನು ಹೊಸದಾಗಿ ವಿಸ್ತರಿಸಲು ಪ್ರಯತ್ನಿಸಿದ್ದಾರೆ. ಸಂತೋಷ್ ನಾಟಕದ ಹಿನ್ನೆಲೆಯವರಾದ ಕಾರಣ ಈ ಕತೆಗಳಲ್ಲಿನ ನಾಟಕೀಯ ಗುಣ ವಿಶಿಷ್ಟವಾಗಿ ಮೂಡಿಬಂದಿದೆ. ಹೊಸ ತಲೆಮಾರಿನ ಬರಹಗಾರರು ಓದಲೇಬೇಕಾದ ಕಥಾ ಸಂಕಲನವಿದು. ಹೀಗೆ ಸಂತೋಷ್ ತನ್ನದೇ ಲೋಕದಲ್ಲಿ ನಡೆಸುತ್ತಿರುವ ಕ್ರಿಯಾಶೀಲ ಚಟುವಟಿಕೆಗಳು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಮ್ಮೂರ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಹೆಮ್ಮೆಯೆನಿಸುತ್ತದೆ. ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...