HomeUncategorizedಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ 'ಗಿರ್ಮಿಟ್'

ಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ ‘ಗಿರ್ಮಿಟ್’

- Advertisement -
- Advertisement -

ಬಿಡುಗಡೆಗೂ ಮುನ್ನವೇ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್’ ಐಎಂಡಿಬಿ ನೀಡಿದ ಭಾರತದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಐಎಂಡಿಬಿ ನಿರೀಕ್ಷಿತ ಚಿತ್ರಗಳ ಅಗ್ರಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್, ಭಾರತೀಯ ಚಿತ್ರಗಳ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ.

ಭಾರತೀಯ ಚಿತ್ರರಂಗದಲ್ಲೇ ಮೊಟ್ಟ ಮೊದಲ ಮಕ್ಕಳ ವಾಣಿಜ್ಯಾತ್ಮಕ ಚಿತ್ರವೆಂಬ ಕೀರ್ತಿಗೆ ಪಾತ್ರವಾಗಿದೆ. ರವಿ ಬಸ್ರೂರು ಮತ್ತು ತಂಡದ ಪರಿಶ್ರಮದಲ್ಲಿ ನಿರ್ಮಾಣವಾದ ಗಿರ್ಮಿಟ್ ಚಿತ್ರ, ಚಲನಚಿತ್ರಗಳ ಮಾನದಂಡ ಸಂಸ್ಥೆಯಾದ ಐಎಂಡಿಬಿ ಬಹು ನಿರೀಕ್ಷಿತ ಭಾರತೀಯ ಚಿತ್ರಗಳ ಪೈಕಿ 5 ನೇ ಸ್ಥಾನ ಪಡೆದಿದೆ.

ಐಎಂಡಿಬಿ ಪಟ್ಟಿಯಲ್ಲಿ ಬಾಲಿವುಡ್ ನ ‘ಮರ್ಜಾವಾನ್’ ಚಿತ್ರವು ಮೊದಲ ಸ್ಥಾನ ಪಡೆದಿದೆ. ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಈ ಚಿತ್ರವನ್ನು ಶೇ.22.8 ರಷ್ಟು ಮಂದಿ ನೋಡುವ ನಿರೀಕ್ಷೆಯಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್ 3’ ಇದ್ದು, ಶೇ. 21.9 ರಷ್ಟು ಮಂದಿ ನೋಡಲು ಕಾತರರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ‘ಬಾಲಾ’ ಚಿತ್ರವಿದ್ದು, ಶೇ.20.6 ರಷ್ಟು ಜನರ ಬೇಡಿಕೆ ಚಿತ್ರವಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಪಾಗಲ್ ಪಂತಿ’ ಚಿತ್ರವಿದ್ದು, ಶೇ.17 ರಷ್ಟು, 5 ನೇ ಸ್ಥಾನದಲ್ಲಿ ಕನ್ನಡದ ಗಿರ್ಮಿಟ್ ಚಿತ್ರವಿದ್ದು, ಶೇ.11.1 ರಷ್ಟು ಜನರು ನೋಡುವ ನಿರೀಕ್ಷೆಯಲ್ಲಿದ್ದಾರೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡುವ ಅಂಕಿ ಅಂಶಗಳ ಮಾಹಿತಿಯು ಕನ್ನಡ ಸಿನಿಮಾಗಳ ಹಿರಿಮೆಯನ್ನು ಹೆಚ್ಚಿಸುತ್ತಿದೆ. ಬಸ್ರೂರು ಅವರ ಹೊಸ ಶೈಲಿಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರರಾಗಿದ್ದಾರೆ. ಹಾಗಾದ್ರೆ ಜಾಲತಾಣ ಮಾನದಂಡ ಅನ್ನೋದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಏನಿದು ಜಾಲತಾಣ ಮಾನದಂಡ..?

ಐಎಂಡಿಬಿ ಎಂದರೆ ಇಂಟರ್ನೆಟ್ ಮೂವಿ ಡೇಟಾ ಬೇಸ್ ಎಂದರ್ಥ. ಅಂದರೆ ಚಲನಚಿತ್ರಗಳ ಬಗ್ಗೆ ಜಾಲತಾಣಿಗರು ವ್ಯಕ್ತಪಡಿಸುವ ಅಭಿಪ್ರಾಯ, ವಿಮರ್ಶಿಸುವ ಒಂದು ಮಾನದಂಡ ಸಂಸ್ಥೆ ಆಗಿದೆ. ಇದು ಚಲನಚಿತ್ರಗಳಿಗೆ ಮಾತ್ರವಲ್ಲದೇ ದೂರದರ್ಶನದ ಕಾರ್ಯಕ್ರಮಗಳು, ವಿಡಿಯೋ ಗೇಮ್ ಗೆ ಸಂಬಂಧಿಸಿದ ಅಭಿಪ್ರಾಯ ಸಂಗ್ರಹಿಸಿ, ದತ್ತಾಂಶ ಕಲೆ ಹಾಕಲು ಸಹಕಾರಿಯಾಗಿದೆ.

ಇನ್ನು ಅಕ್ಟೋವರ್‌ 26 ರಂದು ಬಿಡುಗಡೆಯಾದ ಗಿರ್ಮಿಟ್ ಚಿತ್ರದ ಟ್ರೇಲರ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿ ಮೂಡಿ ಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದ್ದು, ನ.೮ ರಂದು ಪ್ರಪಂಚದಾದ್ಯಂತ ತೆರೆ ಕಾಣಲಿದೆ.

ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮತ್ತು ಮುಖ್ಯ ಭೂಮಿಕೆಯಲ್ಲಿ ಮಕ್ಕಳೇ ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಭಿನ್ನ ಚಿತ್ರ ಇದಾಗಿದೆ. ರಾಕಿಂಗ್ ಸ್ಟಾರ್ ಯಶ್, ನಟಿ ರಾಧಿಕಾ ಪಂಡಿತ್ ಸೇರಿದಂತೆ ಹಿರಿಯ ಕಲಾವಿದರು, ಮಕ್ಕಳ ಪಾತ್ರಗಳಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...