Homeಮುಖಪುಟಸಂಭಾಲ್‌ ಮಸೀದಿ ಸಮೀಕ್ಷೆ ಹಿಂಸಾಚಾರದಲ್ಲಿ ನಾಲ್ವರು ಸಾವು; ಇಂಟರ್ನೆಟ್ ಸ್ಥಗಿತ, ಶಾಲೆಗಳಿಗೆ ರಜೆ ಘೋಷಣೆ

ಸಂಭಾಲ್‌ ಮಸೀದಿ ಸಮೀಕ್ಷೆ ಹಿಂಸಾಚಾರದಲ್ಲಿ ನಾಲ್ವರು ಸಾವು; ಇಂಟರ್ನೆಟ್ ಸ್ಥಗಿತ, ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ಭಾನುವಾರ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ ನಂತರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಶಾಲೆಗಳನ್ನು ಮುಚ್ಚಲಾಗಿದೆ.

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದಾಗ ಭಾನುವಾರ ಬೆಳಿಗ್ಗೆ ಸಂಭಾಲ್‌ನಲ್ಲಿ ಗೊಂದಲವು ಉಂಟಾಯಿತು. ಮಸೀದಿಯನ್ನು ಹಿಂದೂ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ವಿವಾದಾತ್ಮಕ ಕಾನೂನು ಹೋರಾಟದಿಂದ ವಿವಾದ ಉಂಟಾಗಿದೆ.

ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರ ಮೇಲೆ ಕಲ್ಲು ಎಸೆದರು. ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿಗಳನ್ನು ಬಳಸಿದರು.

ಈ ಗಲಾಟೆಯಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ತಲೆಗೆ ಪೆಟ್ಟಾಗಿರುವ ಕಾನ್‌ಸ್ಟೆಬಲ್‌ ಸ್ಥಿತಿ ಚಿಂತಾಜನಕವಾಗಿದೆ.

ಮೂವರು ಮಹಿಳೆಯರು ಸೇರಿದಂತೆ 21 ಜನರನ್ನು ಬಂಧಿಸಿ ತನಿಖೆಯನ್ನು ಪ್ರಾರಂಭಿಸಲಾಗಿದೆ. ಹಿಂಸಾಚಾರದ ಆರೋಪಿಗಳನ್ನು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಇಬ್ಬರ ಸಾವಿಗೆ ಕಾರಣ ಸ್ಪಷ್ಟವಾಗಿದೆ, ಕಂಟ್ರಿಮೇಡ್ ಪಿಸ್ತೂಲ್‌ನಿಂದ ಗುಂಡಿನ ಗಾಯಗಳು. ಮೂರನೇ ವ್ಯಕ್ತಿಯ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಆದರೆ, ಮರಣೋತ್ತರ ಪರೀಕ್ಷೆಯ ನಂತರ ಕಾರಣ ಗೊತ್ತಾಗಲಿದೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಹೇಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಂಭಾಲ್ ತಹಸಿಲ್‌ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲಾಡಳಿತವು 12 ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ನವೆಂಬರ್ 25 ರಂದು ರಜೆ ಘೋಷಿಸಿದೆ.

ನವೆಂಬರ್ 30 ರವರೆಗೆ ಯಾವುದೇ ಹೊರಗಿನವರು, ಸಾಮಾಜಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಅಧಿಕಾರಿಗಳ ಆದೇಶವಿಲ್ಲದೆ ಸಂಭಾಲ್‌ಗೆ ಪ್ರವೇಶಿಸುವುದನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

ಕಳೆದ ಮಂಗಳವಾರದಿಂದ ಜಾಮಾ ಮಸೀದಿಯಲ್ಲಿ ಹರಿಹರ ದೇವಸ್ಥಾನವಿದೆ ಎಂಬ ಅರ್ಜಿಯ ಮೇರೆಗೆ ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ ಸಮೀಕ್ಷೆ ನಡೆಸಿದಾಗ ಸಂಭಾಲ್ ಉದ್ವಿಗ್ನವಾಗಿತ್ತು. ಮಂಗಳವಾರದಂದು ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಸಾಮಾನ್ಯವಾಗಿ ಮಧ್ಯಾಹ್ನ ನಡೆಯುವ ಪ್ರಾರ್ಥನೆಗಳಿಗೆ ಅಡ್ಡಿಯಾಗುವುದನ್ನು ತಪ್ಪಿಸಲು ಭಾನುವಾರ ಬೆಳಿಗ್ಗೆ ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂ ಪರ ವಕೀಲರು 1529 ರಲ್ಲಿ ಮೊಘಲ್ ಚಕ್ರವರ್ತಿ ಬಾಬರ್ ಈ ಸ್ಥಳದಲ್ಲಿ ಇದ್ದ ದೇವಾಲಯವನ್ನು ಕೆಡವಿದರು ಎಂದು ಪ್ರತಿಪಾದಿಸಿದರು.

ಸಮೀಕ್ಷೆಯ ಬೆಂಬಲಿಗರು ಐತಿಹಾಸಿಕ ಸತ್ಯಗಳನ್ನು ಬಯಲಿಗೆಳೆಯುವಲ್ಲಿ ಇದು ಅಗತ್ಯವಾದ ಹೆಜ್ಜೆ ಎಂದು ವಾದಿಸುತ್ತಾರೆ. ಆದರೆ, ವಿಮರ್ಶಕರು ಇದನ್ನು ಪೂಜಾ ಸ್ಥಳಗಳ ಕಾಯಿದೆ, 1991 ರ ಪ್ರಕಾರ ಧಾರ್ಮಿಕ ಸ್ಥಳಗಳ ಪಾವಿತ್ರ್ಯತೆಯನ್ನು ಉಲ್ಲಂಘಿಸುವ ಪ್ರಚೋದನೆ ಎಂದು ಪರಿಗಣಿಸುತ್ತಾರೆ.

ಹಿಂಸಾಚಾರದ ನಡುವೆಯೂ ಅಧಿಕಾರಿಗಳು ಯೋಜನೆಯಂತೆ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಪ್ರಕರಣದ ಅರ್ಜಿದಾರರಾಗಿರುವ ವಕೀಲ ವಿಷ್ಣು ಶಂಕರ್ ಜೈನ್, ನ್ಯಾಯಾಲಯದ ನಿರ್ದೇಶನದಂತೆ ಸಮೀಕ್ಷಾ ತಂಡವು ವೀಡಿಯೊಗ್ರಫಿ ಮತ್ತು ಛಾಯಾಗ್ರಹಣದ ಮೂಲಕ ಸೈಟ್‌ನ ವಿವರವಾದ ಪರೀಕ್ಷೆಯನ್ನು ನಡೆಸಿತು. ಸಮೀಕ್ಷಾ ವರದಿಯನ್ನು ನವೆಂಬರ್ 29 ರೊಳಗೆ ಸಲ್ಲಿಸಲು ನಿರ್ಧರಿಸಲಾಗಿದೆ.

ಜೈನ್ ಮತ್ತು ಅವರ ತಂದೆ ಹರಿ ಶಂಕರ್ ಜೈನ್ ಅವರು ಈ ಹಿಂದೆ ವಾರಣಾಸಿಯ ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಾಲಯ ವಿವಾದ ಸೇರಿದಂತೆ ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳಲ್ಲಿ ಪ್ರತಿನಿಧಿಸಿದ್ದಾರೆ.

ಇದನ್ನೂ ಓದಿ; ಸಂಭಾಲ್ ಹಿಂಸಾಚಾರದ ಹಿಂದೆ ಬಿಜೆಪಿ ಇದೆ; ಚುನಾವಣಾ ರಿಗ್ಗಿಂಗ್‌ ಗಮನ ಬೇರೆಡೆ ಸೆಳೆಯಲು ಬಯಸಿದೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...