Homeಮುಖಪುಟ'ಲ್ಯಾಟರಲ್ ಎಂಟ್ರಿ' ಪರಿಶೀಲನೆ ನಡೆಸಲಿರುವ ಸಂಸದೀಯ ಸಮಿತಿ

‘ಲ್ಯಾಟರಲ್ ಎಂಟ್ರಿ’ ಪರಿಶೀಲನೆ ನಡೆಸಲಿರುವ ಸಂಸದೀಯ ಸಮಿತಿ

- Advertisement -
- Advertisement -

2024-25ರ ಅವಧಿಯಲ್ಲಿ ನಾಗರಿಕ ಸೇವೆಗಳಿಗೆ ಆಗುವ ಲ್ಯಾಟರಲ್ ಎಂಟ್ರಿ ಬಗ್ಗೆ ಸಂಸದೀಯ ಸ್ಥಾಯಿ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಪಿಟಿಐ ಭಾನುವಾರ ವರದಿ ಮಾಡಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯಾಂಗ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಇದನ್ನು ಪರಿಶೀಲನೆ ನಡೆಸಲಿದೆ ಎಂದು ವರದಿಗಳು ಹೇಳಿವೆ.

ಗುತ್ತಿಗೆ ಆಧಾರದ ಮೇಲೆ ಲ್ಯಾಟರಲ್ ಎಂಟ್ರಿ ಮೂಲಕ 24 ಕೇಂದ್ರ ಸಚಿವಾಲಯಗಳ ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳ 45 ಹುದ್ದೆಗಳಿಗೆ ಖಾಸಗಿ ವಲಯದಿಂದ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗ ಜಾಹೀರಾತು ನೀಡಿತ್ತು. ಕೇಂದ್ರ ಸರ್ಕಾರದ ಈ ನೀತಿಯು ಮೀಸಲಾತಿ ವಿರೋಧಿಯಾಗಿದ್ದು, ಮೀಸಲಾತಿ ನೀಡುವ ಬದಲು ಮತ್ತೆ ಬಲಿಷ್ಠ ಸಮುದಾಯಗಳಿಗೆ ಮಣೆ ಹಾಕಲು ಹೀಗೆ ಮಾಡುತ್ತಿದೆ ಎಂದು ವಿಪಕ್ಷಗಳು ಆರೋಪಿಸಿತ್ತು. ಆಗಸ್ಟ್ 17ರಂದು ಈ ಜಾಹೀರಾತು ಪ್ರಕಟವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಜಾಹೀರಾತು ಭಾರಿ ವಿವಾದವಾಗಿ ವಿಪಕ್ಷಗಳು ಸೇರಿದಂತೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಅಷ್ಟೆ ಅಲ್ಲದೆ, ಆಡಳಿತರೂಢ ಎನ್‌ಡಿಎಯ ಮಿತ್ರಪಕ್ಷವಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಕೂಡಾ ಇದನ್ನು ವಿರೋಧಿಸಿತು. ಸರ್ಕಾರದ ಈ ನಿರ್ಧಾರವು ಸಂವಿಧಾನವು ಖಾತರಿಪಡಿಸುವ ಮೀಸಲಾತಿ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಆರೋಪಿಸಿತ್ತು.

ಲ್ಯಾಟರಲ್ ಎಂಟ್ರಿ ಮೂಲಕ ಸಾರ್ವಜನಿಕ ಸೇವಕರನ್ನು ನೇಮಿಸಿಕೊಳ್ಳುವ ನಿರ್ಧಾರವು “ದೇಶ ವಿರೋಧಿ ಹೆಜ್ಜೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ತಳಮಟ್ಟದ ಸಮುದಾಯಗಳ ಮೀಸಲಾತಿಗಳನ್ನು ಈ ಮೂಲಕ “ಬಹಿರಂಗವಾಗಿ ಕಸಿದುಕೊಳ್ಳಲಾಗುತ್ತಿದೆ” ಎಂದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೇಂದ್ರ ಲೋಕಸೇವಾ ಆಯೋಗ ಅಡಿಯಲ್ಲಿ ಕೇಂದ್ರ ಸರ್ಕಾರದ ಪ್ರಮುಖ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ನೇಮಿಸುವುದು “ಸಂಪೂರ್ಣವಾಗಿ ತಪ್ಪು” ಹೆಜ್ಜೆಯಾಗಿದೆ ಎಂದು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಹೇಳಿದೆ. ಪಕ್ಷದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಈ ಬಗ್ಗೆ ಪ್ರತಿಕ್ರಿಯಿಸಿ ತಮ್ಮ ಪಕ್ಷವು ಅಂತಹ ನೇಮಕಾತಿಗಳ ಪರವಾಗಿಲ್ಲ ಎಂದು ಹೇಳಿದ್ದರು.

ತೀವ್ರ ವಿವಾದದ ನಂತರ ಆಗಸ್ಟ್ 20 ರಂದು, ಕೇಂದ್ರ ಲೋಕಸೇವಾ ಆಯೋಗವು ತನ್ನ ಜಾಹೀರಾತನ್ನು ಹಿಂತೆಗೆದುಕೊಂಡಿತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಆಯೋಗದ ಅಧ್ಯಕ್ಷೆ ಪ್ರೀತಿ ಸುದನ್ ಅವರಿಗೆ ಪತ್ರ ಬರೆದ ಕೆಲವೇ ಗಂಟೆಗಳ ನಂತರ ನೇಮಕಾತಿ ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಲ್ಯಾಟರಲ್ ಎಂಟ್ರಿ ಪ್ರಕ್ರಿಯೆಯು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳೊಂದಿಗೆ, ವಿಶೇಷವಾಗಿ ಮೀಸಲಾತಿಯ ನಿಯಮಗಳಿಗೆ ಅನುಗುಣವಾಗಿರಬೇಕು ಎಂದು ಪ್ರಧಾನಿ ನಂಬುತ್ತಾರೆ ಎಂದು ಜೀತೇಂದ್ರ ಸಿಂಗ್ ಪತ್ರದಲ್ಲಿ ತಿಳಿಸಿದ್ದರು.

ಸಿವಿಲ್ ಸರ್ವೀಸ್ ಪರೀಕ್ಷೆಯ ಮೂಲಕ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದರೂ, ನಿರ್ದಿಷ್ಟ ಹುದ್ದೆಗಳಿಗಾಗಿ 2018 ರಿಂದ ಕೇಂದ್ರ ಸರ್ಕಾರದಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ವಿಷಯ ತಜ್ಞರನ್ನು ಖಾಸಗಿ ಸೇರಿದಂತೆ ಇತರ ಮೂಲಗಳಿಂದ ನೇಮಿಸಿಕೊಳ್ಳಲಾಗಿದೆ.

ಇಲ್ಲಿಯವರೆಗೆ, 63 ಲ್ಯಾಟರಲ್ ನೇಮಕಾತಿಗಳನ್ನು ಮಾಡಲಾಗಿದ್ದು, ಅದರಲ್ಲಿ 35 ನೇಮಕವನ್ನು ಖಾಸಗಿ ವಲಯದಿಂದ ಮಾಡಲಾಗಿವೆ ಎಂದು ಪಿಟಿಐ ವರದಿ ಮಾಡಿದೆ. ಪ್ರಸ್ತುತ, ಲ್ಯಾಟರಲ್ ಎಂಟ್ರಿ ಮೂಲಕ ನೇಮಕಗೊಂಡ 57 ಅಧಿಕಾರಿಗಳು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಹುದ್ದೆಗಳನ್ನು ಹೊಂದಿದ್ದಾರೆ ಎಂದು ವರದಿಗಳಿವೆ.

ಇದನ್ನೂ ಓದಿ: ‘ಇಂಡಿಯಾ ಮಿತ್ರಪಕ್ಷಗಳು ಪರಸ್ಪರ ಸಹಕರಿಸಲಿಲ್ಲ..’; ‘ಮಹಾ’ ಸೋಲಿನ ಕುರಿತು ಪರಮೇಶ್ವರ್ ಪ್ರತಿಕ್ರಿಯೆ

‘ಇಂಡಿಯಾ ಮಿತ್ರಪಕ್ಷಗಳು ಪರಸ್ಪರ ಸಹಕರಿಸಲಿಲ್ಲ..’; ‘ಮಹಾ’ ಸೋಲಿನ ಕುರಿತು ಪರಮೇಶ್ವರ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...