ಭಾರತದ ಸಂವಿಧಾನದ ಪೀಠಿಕೆಯಲ್ಲಿ ಇರುವ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಕನಿಷ್ಠ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ರಾಷ್ಟ್ರೀಯ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಾಗ 42ನೇ ತಿದ್ದುಪಡಿಯ ಮೂಲಕ 1976ರಲ್ಲಿ ಈ ಪದಗಳನ್ನು ಮುನ್ನುಡಿಗೆ ಸೇರಿಸಲಾಗಿತ್ತು.
ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರ ಪೀಠಿಕೆಗೂ ಅನ್ವಯವಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಾಜಿ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಮತ್ತು ಆರೆಸ್ಸೆಸ್ ಪರ ವಕೀಲ ಅಶ್ವಿನಿ ಉಪಾಧ್ಯಾಯ ಮತ್ತು ಬಲರಾಮ್ ಸಿಂಗ್ ಅವರು ಪದಗಳನ್ನು ಕಿತ್ತು ಹಾಕುವಂತೆ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ಮತ್ತು ರಾಜ್ಯಸಭಾ ಸದಸ್ಯ ಬಿನೋಯ್ ವಿಶ್ವಂ ಅವರು ವಕೀಲ ಶ್ರೀರಾಮ್ ಪರಕ್ಕಟ್ ಮೂಲಕ ವಿರೋಧಿಸಿದ್ದರು.
“ರಿಟ್ ಅರ್ಜಿಗಳಿಗೆ ಹೆಚ್ಚಿನ ಚರ್ಚೆ ಮತ್ತು ತೀರ್ಪು ಅಗತ್ಯವಿಲ್ಲ. ಸಂವಿಧಾನದ ಮೇಲೆ ಸಂಸತ್ತಿನ ತಿದ್ದುಪಡಿ ಅಧಿಕಾರವು ಪೀಠಿಕೆಗೆ ಅನ್ವಯವಾಗುತ್ತದೆ. ಹಲವು ವರ್ಷಗಳ ನಂತರ ಪ್ರಕ್ರಿಯೆಯನ್ನು ರದ್ದು ಮಾಡುವುದಿಲ್ಲ ಎಂದು ನಾವು ವಿವರಿಸಿದ್ದೇವೆ. ತಿದ್ದಪಡಿ ಮಾಡಲಾದ ದಿನಾಂಕವು 368 ನೇ ವಿಧಿಯ ಅಡಿಯಲ್ಲಿ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ”ಎಂದು ನ್ಯಾಯಾಲಯ ಹೇಳಿದೆ.
ಭಾರತೀಯ ಸನ್ನಿವೇಶದಲ್ಲಿ ಸಮಾಜವಾದ ಮತ್ತು ಜಾತ್ಯತೀತತೆಯ ಅರ್ಥವೇನು ಮತ್ತು ಅದರ ಬಗ್ಗೆ ಸರ್ಕಾರವು ಹೇಗೆ ನೀತಿಯನ್ನು ರೂಪಿಸುತ್ತದೆ ಎಂಬುದನ್ನು ಇದು ಜಾಹೀರು ಮಾಡಿದೆ ಎಂದು ಪೀಠ ಹೇಳಿದೆ. “ನಂತರ ನಾವು ಸಮಾಜವಾದ ಮತ್ತು ಜಾತ್ಯತೀತತೆ ಎಂದರೇನು ಮತ್ತು ಅದನ್ನು ಸರ್ಕಾರ ಹೇಗೆ ತೆಗೆದುಕೊಳ್ಳಬೇಕು ಎಂಬುವುದಕ್ಕೆ ಮುಕ್ತವಾಗಿದೆ, ಅದೇ ನೀತಿಯನ್ನು ಹೇಗೆ ಅನುಸರಿಸಬೇಕು ಎಂದು ನಾವು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.
ಭಾರತದ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಿದ ಭಾರತದ ಸಂವಿಧಾನದ 42 ನೇ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನವೆಂಬರ್ 22 ರಂದು, ಈ ಪ್ರಕರಣದಲ್ಲಿ ತನ್ನ ಆದೇಶವನ್ನು ಇಂದು ಪ್ರಕಟಿಸುವುದಾಗಿ ಅದು ಸೂಚಿಸಿತ್ತು.
ಅದೇ ಸಮಯದಲ್ಲಿ, ಜಾತ್ಯತೀತತೆಯು ಸಂವಿಧಾನದ ಮೂಲ ರಚನೆಯ ಭಾಗವಾಗಿದ್ದು, ಈ 42 ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಈ ಹಿಂದೆಯೂ ಪರೀಕ್ಷಿಸಿ ಎತ್ತಿಹಿಡಿದಿದೆ ಎಂದು ಅರ್ಜಿದಾರರಿಗೆ ನೆನಪಿಸಿತ್ತು.
ಜಾತ್ಯತೀತತೆಯು ಸಂವಿಧಾನದ ಪ್ರಮುಖ ಲಕ್ಷಣವಾಗಿದ್ದು, ಭಾರತೀಯ ಸಂವಿಧಾನದ ಪೀಠಿಕೆಯಲ್ಲಿನ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಪಾಶ್ಚಿಮಾತ್ಯ ದೃಷ್ಟಿಕೋನದಿಂದ ನೋಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಹೇಳಿತ್ತು.
ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ
ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ


