Homeಮುಖಪುಟಸಂವಿಧಾನದ ಪೀಠಿಕೆಯ 'ಜಾತ್ಯತೀತ' ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ - ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಲ್ಲಿ ಇರುವ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಕನಿಷ್ಠ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ರಾಷ್ಟ್ರೀಯ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಾಗ 42ನೇ ತಿದ್ದುಪಡಿಯ ಮೂಲಕ 1976ರಲ್ಲಿ ಈ ಪದಗಳನ್ನು ಮುನ್ನುಡಿಗೆ ಸೇರಿಸಲಾಗಿತ್ತು.

ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರ ಪೀಠಿಕೆಗೂ ಅನ್ವಯವಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಮತ್ತು ಆರೆಸ್ಸೆಸ್‌ ಪರ ವಕೀಲ ಅಶ್ವಿನಿ ಉಪಾಧ್ಯಾಯ ಮತ್ತು ಬಲರಾಮ್ ಸಿಂಗ್ ಅವರು ಪದಗಳನ್ನು ಕಿತ್ತು ಹಾಕುವಂತೆ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ಮತ್ತು ರಾಜ್ಯಸಭಾ ಸದಸ್ಯ ಬಿನೋಯ್ ವಿಶ್ವಂ ಅವರು ವಕೀಲ ಶ್ರೀರಾಮ್ ಪರಕ್ಕಟ್ ಮೂಲಕ ವಿರೋಧಿಸಿದ್ದರು.

“ರಿಟ್ ಅರ್ಜಿಗಳಿಗೆ ಹೆಚ್ಚಿನ ಚರ್ಚೆ ಮತ್ತು ತೀರ್ಪು ಅಗತ್ಯವಿಲ್ಲ. ಸಂವಿಧಾನದ ಮೇಲೆ ಸಂಸತ್ತಿನ ತಿದ್ದುಪಡಿ ಅಧಿಕಾರವು ಪೀಠಿಕೆಗೆ ಅನ್ವಯವಾಗುತ್ತದೆ. ಹಲವು ವರ್ಷಗಳ ನಂತರ ಪ್ರಕ್ರಿಯೆಯನ್ನು ರದ್ದು ಮಾಡುವುದಿಲ್ಲ ಎಂದು ನಾವು ವಿವರಿಸಿದ್ದೇವೆ. ತಿದ್ದಪಡಿ ಮಾಡಲಾದ ದಿನಾಂಕವು 368 ನೇ ವಿಧಿಯ ಅಡಿಯಲ್ಲಿ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ”ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ಸನ್ನಿವೇಶದಲ್ಲಿ ಸಮಾಜವಾದ ಮತ್ತು ಜಾತ್ಯತೀತತೆಯ ಅರ್ಥವೇನು ಮತ್ತು ಅದರ ಬಗ್ಗೆ ಸರ್ಕಾರವು ಹೇಗೆ ನೀತಿಯನ್ನು ರೂಪಿಸುತ್ತದೆ ಎಂಬುದನ್ನು ಇದು ಜಾಹೀರು ಮಾಡಿದೆ ಎಂದು ಪೀಠ ಹೇಳಿದೆ. “ನಂತರ ನಾವು ಸಮಾಜವಾದ ಮತ್ತು ಜಾತ್ಯತೀತತೆ ಎಂದರೇನು ಮತ್ತು ಅದನ್ನು ಸರ್ಕಾರ ಹೇಗೆ ತೆಗೆದುಕೊಳ್ಳಬೇಕು ಎಂಬುವುದಕ್ಕೆ ಮುಕ್ತವಾಗಿದೆ, ಅದೇ ನೀತಿಯನ್ನು ಹೇಗೆ ಅನುಸರಿಸಬೇಕು ಎಂದು ನಾವು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ಭಾರತದ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಿದ ಭಾರತದ ಸಂವಿಧಾನದ 42 ನೇ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನವೆಂಬರ್ 22 ರಂದು, ಈ ಪ್ರಕರಣದಲ್ಲಿ ತನ್ನ ಆದೇಶವನ್ನು ಇಂದು ಪ್ರಕಟಿಸುವುದಾಗಿ ಅದು ಸೂಚಿಸಿತ್ತು.

ಅದೇ ಸಮಯದಲ್ಲಿ, ಜಾತ್ಯತೀತತೆಯು ಸಂವಿಧಾನದ ಮೂಲ ರಚನೆಯ ಭಾಗವಾಗಿದ್ದು, ಈ 42 ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಈ ಹಿಂದೆಯೂ ಪರೀಕ್ಷಿಸಿ ಎತ್ತಿಹಿಡಿದಿದೆ ಎಂದು ಅರ್ಜಿದಾರರಿಗೆ ನೆನಪಿಸಿತ್ತು.

ಜಾತ್ಯತೀತತೆಯು ಸಂವಿಧಾನದ ಪ್ರಮುಖ ಲಕ್ಷಣವಾಗಿದ್ದು, ಭಾರತೀಯ ಸಂವಿಧಾನದ ಪೀಠಿಕೆಯಲ್ಲಿನ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಪಾಶ್ಚಿಮಾತ್ಯ ದೃಷ್ಟಿಕೋನದಿಂದ ನೋಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...