Homeಮುಖಪುಟಸಂಭಾಲ್ ಮಸೀದಿ ಸಮೀಕ್ಷೆ ಹಿಂಸಾಚಾರ: ಯುಪಿ ಸರ್ಕಾರದ ವಿರುದ್ಧ ರಾಹುಲ್-ಪ್ರಿಯಾಂಕಾ ವಾಗ್ದಾಳಿ

ಸಂಭಾಲ್ ಮಸೀದಿ ಸಮೀಕ್ಷೆ ಹಿಂಸಾಚಾರ: ಯುಪಿ ಸರ್ಕಾರದ ವಿರುದ್ಧ ರಾಹುಲ್-ಪ್ರಿಯಾಂಕಾ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್ ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ನಾಲ್ವರು ನಾಗರೀಕರು ಜೀವ ಕಳೆದುಕೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯೋಗಿ ಆದಿತ್ಯನಾಥ್ ಸರ್ಕಾರವನ್ನು ಪಕ್ಷಪಾತವೆಂದು ವಾಗ್ದಾಳಿ ನಡೆಸಿದ್ದಾರೆ. ಸಮೀಕ್ಷೆಯ ‘ತರಾತುರಿ’ ವಿಧಾನವು ದುರದೃಷ್ಟಕರವಾಗಿದೆ ಎಂದು ಹೇಳಿದರು.

ವಯನಾಡು ನೂತನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಸೂಕ್ಷ್ಮ ವಿಷಯವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು.

ಮೊಘಲರ ಕಾಲದ ಜಾಮಾ ಮಸೀದಿಯನ್ನು ಬಾಬರ್ ಧ್ವಂಸ ಮಾಡುವ ಮೊದಲು ಹರಿಹರ ದೇವಸ್ಥಾನವಿತ್ತು ಎಂಬ ಅರ್ಜಿಯ ನಂತರ ಸ್ಥಳೀಯ ನ್ಯಾಯಾಲಯವು ಕಳೆದ ತಿಂಗಳು ಅದರ ಸಮೀಕ್ಷೆಗೆ ಆದೇಶಿಸಿತ್ತು. ನಂತರದ ಬೆಳವಣಿಗೆಯಲ್ಲಿ ಸಂಭಾಲ್ ಉದ್ವಿಗ್ನಗೊಂಡಿತು. ಮಂಗಳವಾರ ಒಂದು ಸುತ್ತಿನ ಸಮೀಕ್ಷೆ ನಡೆದಿದ್ದು, ಭಾನುವಾರ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಲಾಗಿತ್ತು. ಆದರೆ, ನಿನ್ನೆ ಸಮೀಕ್ಷಾ ತಂಡ ಕೆಲಸ ಆರಂಭಿಸಿದಾಗ ಮಸೀದಿ ಬಳಿ ಗುಂಪು ಗುಂಪಾಗಿ ಜಮಾಯಿಸಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಪೂರ್ಣ ಪ್ರಮಾಣದ ಘರ್ಷಣೆಗೆ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಬಲಪ್ರಯೋಗ ಮಾಡಬೇಕಾಯಿತು.

ಕೆಲವರು ಪೊಲೀಸರ ಮೇಲೆ ಕಲ್ಲು ತೂರಿದರು. ಆದರೆ, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆಸಿಯಾ ಹೇಳಿದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 400 ಜನರ ವಿರುದ್ಧ ಒಟ್ಟು ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, ಹಿಂಸಾಚಾರದಲ್ಲಿ ಸತ್ತವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಆಡಳಿತವು ಎಲ್ಲ ಬದಿಗಳನ್ನು ಕೇಳಲಿಲ್ಲ, ಸಂವೇದನಾರಹಿತವಾಗಿ ವರ್ತಿಸಿತು. ಇದು ವಾತಾವರಣವನ್ನು ಹಾಳುಮಾಡಿತು ಮತ್ತು ಸಾವುಗಳಿಗೆ ಕಾರಣವಾಯಿತು. ಅವರಿಗೆ ಬಿಜೆಪಿ ಹೊಣೆಯಾಗಿದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

ಬಿಜೆಪಿಯು ಹಿಂದೂ ಮತ್ತು ಮುಸ್ಲಿಮರ ನಡುವೆ ಬಿರುಕು ಮೂಡಿಸುತ್ತಿದೆ ಎಂದು ಆರೋಪಿಸಿದ ರಾಹುಲ್, ಇದು ರಾಜ್ಯ ಅಥವಾ ದೇಶದ ಹಿತಾಸಕ್ತಿಯಲ್ಲ ಎಂದು ಹೇಳಿದರು. “ಈ ವಿಷಯದಲ್ಲಿ ಶೀಘ್ರವಾಗಿ ಮಧ್ಯಪ್ರವೇಶಿಸುವಂತೆ ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ” ಎಂದು ಅವರು ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಿದರು.

ಹೊಸದಾಗಿ ಚುನಾಯಿತ ಲೋಕಸಭಾ ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಭಾಲ್‌ನಲ್ಲಿನ ಉದ್ವಿಗ್ನತೆಗೆ ರಾಜ್ಯ ಸರ್ಕಾರವನ್ನು ದೂಷಿಸಿದರು. ಮಧ್ಯಪ್ರವೇಶಿಸುವಂತೆ ತನ್ನ ಸಹೋದರನ ಮನವಿಯನ್ನು ಸುಪ್ರೀಂ ಕೋರ್ಟ್‌ಗೆ ಪ್ರತಿಧ್ವನಿಸಿದರು. “ಶಾಂತಿ ಕಾಪಾಡಿಕೊಳ್ಳಲು ನಾನು ಜನರಿಗೆ ಮನವಿ ಮಾಡುತ್ತೇನೆ” ಎಂದು ಅವರು ಹೇಳಿದರು.

400 ಜನರ ವಿರುದ್ಧ ಏಳು ಪ್ರಕರಣ ದಾಖಲು

ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ ನಂತರ ಕನಿಷ್ಠ 25 ಜನರನ್ನು ಬಂಧಿಸಲಾಗಿದೆ. 400 ಜನರ ವಿರುದ್ಧ ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಇಕ್ಬಾಲ್ ಮಹಮೂದ್ ಅವರ ಪುತ್ರ ನವಾಬ್ ಸುಹೇಲ್ ಇಕ್ಬಾಲ್ ಅವರ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯಲ್ಲಿ ಭಾನುವಾರ ಬೆಳಗ್ಗೆ ನ್ಯಾಯಾಲಯದ ಆದೇಶದ ಮೇರೆಗೆ ಸ್ಥಳೀಯರು ಮತ್ತು ಪೊಲೀಸರ ನಡುವೆ ಮಾರಣಾಂತಿಕ ಘರ್ಷಣೆಗೆ ಸಂಭಾಲ್ ಸಾಕ್ಷಿಯಾಗಿದೆ. ಮಸೀದಿಯನ್ನು ಹಿಂದೂ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ವಿವಾದಾತ್ಮಕ ಕಾನೂನು ಹೋರಾಟದ ಕೇಂದ್ರವಾಗಿದೆ.

ಇದನ್ನೂ ಓದಿ; ಸಂಭಾಲ್‌ ಮಸೀದಿ ಸಮೀಕ್ಷೆ ಹಿಂಸಾಚಾರದಲ್ಲಿ ನಾಲ್ವರು ಸಾವು; ಇಂಟರ್ನೆಟ್ ಸ್ಥಗಿತ, ಶಾಲೆಗಳಿಗೆ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...