Homeಕರ್ನಾಟಕಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ - ಬಿಜೆಪಿ ಶಾಸಕ ಹರೀಶ್ ಪೂಂಜಾ...

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

- Advertisement -
- Advertisement -

ಅಮೆರಿಕದ ಅಧ್ಯಕ್ಷ ಕೂಡಾ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಹೇಳಿರುವುದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದು ವ್ಯಾಪಕ ವ್ಯಂಗ್ಯಕ್ಕೀಡಾಗಿದ್ದಾರೆ.

ನವೆಂಬರ್‌ 18ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, “ನಮ್ಮ ದೇಶದ ಎಲ್ಲ ಜನರನ್ನು ಭಾರತೀಯರು ಅಂತ ತಿಳಿದುಕೊಂಡು ನರೇಂದ್ರ ಮೋದಿಯವರು ದೇಶದ ಆಡಳಿತವನ್ನು ನಡೆಸುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಮಾತ್ರ ಸೂಪರ್ ಪವರ್ ಭಾರತ ನಿರ್ಮಾಣವಾಗುತ್ತದೆ. ರಷ್ಯಾ-ಉಕ್ರೇನ್ ನಡುವೆ ಯುದ್ಧವಾದಾಗ ಅಮೆರಿಕದ ಅಧ್ಯಕ್ಷರನ್ನು ಕರೆಯಲಿಲ್ಲ. ಬದಲಾಗಿ, ಯುದ್ಧ ನಿಲ್ಲಿಸಲು ನರೇಂದ್ರ ಮೋದಿಯವರನ್ನು ಕರೆದಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೋದಿಯವರೇ, ನೀವು ಬನ್ನಿ, ಯುದ್ಧ ನಿಲ್ಲಿಸಿ ಅಂತ ಉಕ್ರೇನ್‌ನ ಅಧ್ಯಕ್ಷ ಮನವಿ ಮಾಡಿದ್ದರು. ಯಾಕೆಂದರೆ, ಭಾರತ ಅಷ್ಟೊಂದು ಸೂಪರ್ ಪವರ್” ಎಂದು ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಪ್ರತಿಪಾದಿಸಿದ್ದಾರೆ. ಅದಾಗ್ಯೂ, ವಿದೇಶಾಂಗ ಸಚಿವಾಲಯವು ಉಕ್ರೇನ್ ಮತ್ತು ರಷ್ಯಾ ಯುದ್ಧದ ವಿಚಾರವಾಗಿ ಈ ರೀತಿಯ ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿತ್ತು. ಅದರೂ ಬಿಜೆಪಿ ಅಭಿಮಾನಿಗಳು ಮತ್ತು ನಾಯಕರು ಅದನ್ನೆ ಪದೇ ಪದೇ ಹೇಳುತ್ತಾ ಸುಳ್ಳು ಹರಡುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪ್ಯಾಲೆಸ್ತೀನ್-ಇಸ್ರೇಲ್ ಯುದ್ಧವಾದಾಗಲೂ ಕೂಡ ನರೇಂದ್ರ ಮೋದಿಯವರನ್ನು ಯುದ್ಧ ನಿಲ್ಲಿಸಲು ಕರೆದಿದ್ದರು. ಅದೇ ರೀತಿ, ಅಮೆರಿಕದ ಅಧ್ಯಕ್ಷ ಕೂಡ ಇವತ್ತು ಯಾವುದೇ ನಿರ್ಧಾರ ಮಾಡುವುದಿದ್ದರೆ ಮೊದಲು ಯೋಚನೆ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು. ಮೋದಿಯವರನ್ನು ಕೇಳಿಯೇ ನಿರ್ಧಾರ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

“ಇದು ನಮಗೆ ಹೆಮ್ಮೆಯ ವಿಷಯವಾಗಬೇಕು. ನಮ್ಮನ್ನು ಕೇಳಿಯೇ ಅಲ್ಲಿ ಆಡಳಿತ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಂತಹ ದೇಶದಲ್ಲಿ ನಾವು ಬದುಕುತ್ತಿದ್ದೇವೆ ಎಂಬ ಹೆಮ್ಮೆ ನಮಗಿರಬೇಕು. ಇದಕ್ಕೆಲ್ಲ ಮೋದಿಯವರು ಕಾರಣ. 2030ರ ವೇಳೆಗೆ ಭಾರತ ಸೂಪರ್ ಪವರ್ ದೇಶವಾಗುತ್ತದೆ” ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

ಅವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದು, “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಈ ಹೇಳಿಕೆಯನ್ನು ಕೇಳಿ ನಗಬೇಕೊ ಆಳಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಅಮೆರಿಕ ದೇಶದಲ್ಲಿ ಯಾವುದೇ ನಿರ್ಧಾರ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯ ಮಾತು ಕೇಳಿಯಂತೆ. ಅಮೆರಿಕದ 1 ಡಾಲರ್ ಭಾರತದ 84 ರೂಪಾಯಿಗೆ ಸಮವಾಗಿದೆ. ಇದು ಕೂಡ ಮೋದಿಯ ಸಲಹೆಯಿಂದ ಆಗಿರಬಹುದು. ಮತ ನೀಡಿದ ಮತದಾರರ ಕಿವಿಗೆ ಹೂ ಇಡುವುದರಲ್ಲಿ ಬೆಳ್ತಂಗಡಿ ಶಾಸಕರು ನಿಸ್ಸೀಮರು” ಬಳಕೆದಾರರೊಬ್ಬರು ಹೇಳಿದ್ದಾರೆ.

ರಷ್ಯಾ ಉಕ್ರೇನ್ ಯುದ್ಧದ ಬಗ್ಗೆ ಬಿಜೆಪಿ ಹರಡಿದ ಸುಳ್ಳು!

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದಾಗ, ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ನೆರವಾಗಲೆಂದು ಪ್ರಧಾನಿ ನರೇಂದ್ರ ಮೋದಿ ಅವರ ಮನವಿಗೆ ಸ್ಪಂದಿಸಿ ಉಕ್ರೇನ್‌ನಲ್ಲಿ ರಷ್ಯಾ ಕೆಲಕಾಲ ದಾಳಿಯನ್ನು ಸ್ಥಗಿತಗೊಳಿಸಿತ್ತು ಎಂದು ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಸಂಘಪರಿವಾರದವರು ಸುದ್ದಿ ಹರಡಿದ್ದರು.

ಬಿಜೆಪಿ ಹರಡಿದ್ದ ಸುಳ್ಳನ್ನು ನಂಬಿ ಬಿಜೆಪಿ ಪರ ಮಾಧ್ಯಮಗಳು, ವರದಿ ಪ್ರಕಟಿಸಿತ್ತು. ಬಳಿಕ ಎಲ್ಲವೂ ಸುಳ್ಳು ಎಂದು ಗೊತ್ತಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಆಗಿನ ವಿದೇಶಾಂಗ ಇಲಾಖೆಯ ಅಧಿಕಾರಿ ಅರಿಂದಮ್ ಬಾಗ್ಚಿ, ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು.

“ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತರಲು ನಮಗೆ ಸೂಕ್ತ ಮಾರ್ಗಗಳನ್ನು ರಷ್ಯಾ ಹಾಗೂ ಉಕ್ರೇನ್ ಸರ್ಕಾರಗಳು ವಿವರಿಸಿದವು. ಹೀಗಾಗಿ, ನಾವು ಉಕ್ರೇನ್‌ನಲ್ಲಿ ಇರುವ ನಮ್ಮ ಪ್ರಜೆಗಳಿಗೆ ಈ ಮಾಹಿತಿಯನ್ನು ರವಾನಿಸಿ ಅವರನ್ನು ಉಕ್ರೇನ್‌ ದೇಶದ ಗಡಿ ದಾಟಿಸಿದೆವು. ಈ ರಕ್ಷಣಾ ಕಾರ್ಯಾಚರಣೆಗೆ ಸಹಕಾರ ನೀಡಿದ ದೇಶಗಳಿಗೆ ಧನ್ಯವಾದ ಹೇಳುತ್ತೇವೆ. ಇದು ನಮಗೆ ಖುಷಿ ತಂದಿದೆ” ಎಂದು ಅವರು ಹೇಳಿದ್ದರು.

“ನಮ್ಮ ಮನವಿಗೆ ಸೇನೆ ಸ್ಪಂದಿಸಿ ಭಾರತೀಯರ ತೆರವು ಕಾರ್ಯಾಚರಣೆ ವೇಳೆ ಬಾಂಬ್ ದಾಳಿ ನಿಲ್ಲಿಸಲಾಗಿತ್ತು ಎಂಬ ವಿಚಾರ ಸತ್ಯಕ್ಕೆ ದೂರವಾದ ವಿಚಾರ” ಎಂದು ಅರಿಂದಮ್ ಬಾಗ್ಚಿ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...