Homeಕರ್ನಾಟಕಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ - ಬಿಜೆಪಿ ಶಾಸಕ ಹರೀಶ್ ಪೂಂಜಾ...

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

- Advertisement -
- Advertisement -

ಅಮೆರಿಕದ ಅಧ್ಯಕ್ಷ ಕೂಡಾ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಹೇಳಿರುವುದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದು ವ್ಯಾಪಕ ವ್ಯಂಗ್ಯಕ್ಕೀಡಾಗಿದ್ದಾರೆ.

ನವೆಂಬರ್‌ 18ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, “ನಮ್ಮ ದೇಶದ ಎಲ್ಲ ಜನರನ್ನು ಭಾರತೀಯರು ಅಂತ ತಿಳಿದುಕೊಂಡು ನರೇಂದ್ರ ಮೋದಿಯವರು ದೇಶದ ಆಡಳಿತವನ್ನು ನಡೆಸುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಮಾತ್ರ ಸೂಪರ್ ಪವರ್ ಭಾರತ ನಿರ್ಮಾಣವಾಗುತ್ತದೆ. ರಷ್ಯಾ-ಉಕ್ರೇನ್ ನಡುವೆ ಯುದ್ಧವಾದಾಗ ಅಮೆರಿಕದ ಅಧ್ಯಕ್ಷರನ್ನು ಕರೆಯಲಿಲ್ಲ. ಬದಲಾಗಿ, ಯುದ್ಧ ನಿಲ್ಲಿಸಲು ನರೇಂದ್ರ ಮೋದಿಯವರನ್ನು ಕರೆದಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೋದಿಯವರೇ, ನೀವು ಬನ್ನಿ, ಯುದ್ಧ ನಿಲ್ಲಿಸಿ ಅಂತ ಉಕ್ರೇನ್‌ನ ಅಧ್ಯಕ್ಷ ಮನವಿ ಮಾಡಿದ್ದರು. ಯಾಕೆಂದರೆ, ಭಾರತ ಅಷ್ಟೊಂದು ಸೂಪರ್ ಪವರ್” ಎಂದು ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಪ್ರತಿಪಾದಿಸಿದ್ದಾರೆ. ಅದಾಗ್ಯೂ, ವಿದೇಶಾಂಗ ಸಚಿವಾಲಯವು ಉಕ್ರೇನ್ ಮತ್ತು ರಷ್ಯಾ ಯುದ್ಧದ ವಿಚಾರವಾಗಿ ಈ ರೀತಿಯ ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿತ್ತು. ಅದರೂ ಬಿಜೆಪಿ ಅಭಿಮಾನಿಗಳು ಮತ್ತು ನಾಯಕರು ಅದನ್ನೆ ಪದೇ ಪದೇ ಹೇಳುತ್ತಾ ಸುಳ್ಳು ಹರಡುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪ್ಯಾಲೆಸ್ತೀನ್-ಇಸ್ರೇಲ್ ಯುದ್ಧವಾದಾಗಲೂ ಕೂಡ ನರೇಂದ್ರ ಮೋದಿಯವರನ್ನು ಯುದ್ಧ ನಿಲ್ಲಿಸಲು ಕರೆದಿದ್ದರು. ಅದೇ ರೀತಿ, ಅಮೆರಿಕದ ಅಧ್ಯಕ್ಷ ಕೂಡ ಇವತ್ತು ಯಾವುದೇ ನಿರ್ಧಾರ ಮಾಡುವುದಿದ್ದರೆ ಮೊದಲು ಯೋಚನೆ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು. ಮೋದಿಯವರನ್ನು ಕೇಳಿಯೇ ನಿರ್ಧಾರ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

“ಇದು ನಮಗೆ ಹೆಮ್ಮೆಯ ವಿಷಯವಾಗಬೇಕು. ನಮ್ಮನ್ನು ಕೇಳಿಯೇ ಅಲ್ಲಿ ಆಡಳಿತ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಂತಹ ದೇಶದಲ್ಲಿ ನಾವು ಬದುಕುತ್ತಿದ್ದೇವೆ ಎಂಬ ಹೆಮ್ಮೆ ನಮಗಿರಬೇಕು. ಇದಕ್ಕೆಲ್ಲ ಮೋದಿಯವರು ಕಾರಣ. 2030ರ ವೇಳೆಗೆ ಭಾರತ ಸೂಪರ್ ಪವರ್ ದೇಶವಾಗುತ್ತದೆ” ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

ಅವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದು, “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಈ ಹೇಳಿಕೆಯನ್ನು ಕೇಳಿ ನಗಬೇಕೊ ಆಳಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಅಮೆರಿಕ ದೇಶದಲ್ಲಿ ಯಾವುದೇ ನಿರ್ಧಾರ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯ ಮಾತು ಕೇಳಿಯಂತೆ. ಅಮೆರಿಕದ 1 ಡಾಲರ್ ಭಾರತದ 84 ರೂಪಾಯಿಗೆ ಸಮವಾಗಿದೆ. ಇದು ಕೂಡ ಮೋದಿಯ ಸಲಹೆಯಿಂದ ಆಗಿರಬಹುದು. ಮತ ನೀಡಿದ ಮತದಾರರ ಕಿವಿಗೆ ಹೂ ಇಡುವುದರಲ್ಲಿ ಬೆಳ್ತಂಗಡಿ ಶಾಸಕರು ನಿಸ್ಸೀಮರು” ಬಳಕೆದಾರರೊಬ್ಬರು ಹೇಳಿದ್ದಾರೆ.

ರಷ್ಯಾ ಉಕ್ರೇನ್ ಯುದ್ಧದ ಬಗ್ಗೆ ಬಿಜೆಪಿ ಹರಡಿದ ಸುಳ್ಳು!

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದಾಗ, ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ನೆರವಾಗಲೆಂದು ಪ್ರಧಾನಿ ನರೇಂದ್ರ ಮೋದಿ ಅವರ ಮನವಿಗೆ ಸ್ಪಂದಿಸಿ ಉಕ್ರೇನ್‌ನಲ್ಲಿ ರಷ್ಯಾ ಕೆಲಕಾಲ ದಾಳಿಯನ್ನು ಸ್ಥಗಿತಗೊಳಿಸಿತ್ತು ಎಂದು ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಸಂಘಪರಿವಾರದವರು ಸುದ್ದಿ ಹರಡಿದ್ದರು.

ಬಿಜೆಪಿ ಹರಡಿದ್ದ ಸುಳ್ಳನ್ನು ನಂಬಿ ಬಿಜೆಪಿ ಪರ ಮಾಧ್ಯಮಗಳು, ವರದಿ ಪ್ರಕಟಿಸಿತ್ತು. ಬಳಿಕ ಎಲ್ಲವೂ ಸುಳ್ಳು ಎಂದು ಗೊತ್ತಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಆಗಿನ ವಿದೇಶಾಂಗ ಇಲಾಖೆಯ ಅಧಿಕಾರಿ ಅರಿಂದಮ್ ಬಾಗ್ಚಿ, ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು.

“ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತರಲು ನಮಗೆ ಸೂಕ್ತ ಮಾರ್ಗಗಳನ್ನು ರಷ್ಯಾ ಹಾಗೂ ಉಕ್ರೇನ್ ಸರ್ಕಾರಗಳು ವಿವರಿಸಿದವು. ಹೀಗಾಗಿ, ನಾವು ಉಕ್ರೇನ್‌ನಲ್ಲಿ ಇರುವ ನಮ್ಮ ಪ್ರಜೆಗಳಿಗೆ ಈ ಮಾಹಿತಿಯನ್ನು ರವಾನಿಸಿ ಅವರನ್ನು ಉಕ್ರೇನ್‌ ದೇಶದ ಗಡಿ ದಾಟಿಸಿದೆವು. ಈ ರಕ್ಷಣಾ ಕಾರ್ಯಾಚರಣೆಗೆ ಸಹಕಾರ ನೀಡಿದ ದೇಶಗಳಿಗೆ ಧನ್ಯವಾದ ಹೇಳುತ್ತೇವೆ. ಇದು ನಮಗೆ ಖುಷಿ ತಂದಿದೆ” ಎಂದು ಅವರು ಹೇಳಿದ್ದರು.

“ನಮ್ಮ ಮನವಿಗೆ ಸೇನೆ ಸ್ಪಂದಿಸಿ ಭಾರತೀಯರ ತೆರವು ಕಾರ್ಯಾಚರಣೆ ವೇಳೆ ಬಾಂಬ್ ದಾಳಿ ನಿಲ್ಲಿಸಲಾಗಿತ್ತು ಎಂಬ ವಿಚಾರ ಸತ್ಯಕ್ಕೆ ದೂರವಾದ ವಿಚಾರ” ಎಂದು ಅರಿಂದಮ್ ಬಾಗ್ಚಿ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...