Homeಮುಖಪುಟಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

ಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದ ಅಧಿಕಾರಿಗಳು ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಲಂಚದ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದ್ದು, ಹಾಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವರ್ಷದ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದ ಕಲಾಪವನ್ನು ಮುಂದೂಡಲಾಗಿದೆ. “ಈ ನೋಟಿಸ್‌ಗಳು ಪೀಠವು ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿಲ್ಲ” ಎಂದು ಧಂಖರ್ ನೋಟಿಸ್‌ಗಳನ್ನು ತಿರಸ್ಕರಿಸಿದ್ದಾರೆ. ಅದಾನಿ – ಮಣಿಪುರ

ಅದಾನಿ ಗ್ರೂಪ್‌ನ ಆಪಾದಿತ ಭ್ರಷ್ಟಾಚಾರ, ಲಂಚ ಮತ್ತು ಹಣಕಾಸು ಅಕ್ರಮಗಳ ಕುರಿತು ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಸಂಸದರಿಂದ 13 ನೋಟಿಸ್‌ಗಳು ಬಂದಿವೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಐವರು ಸಂಸದರ ಸಂತಾಪ ಸೂಚನೆಗಳನ್ನು ಓದಿದರು ಮತ್ತು ಸದನವು ಒಂದು ನಿಮಿಷ ಮೌನ ಆಚರಿಸಿತು. ಅದಾನಿ – ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರ ಮತ್ತು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚೆಗಳು ಮತ್ತು ಈ ವರ್ಷದ ಆರಂಭದಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ನೆರವು ಕೋರಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿವಾದದ ಬಗ್ಗೆ ಚರ್ಚೆಯೊಂದಿಗೆ ಸಂಸತ್ತಿನ ಅಧಿವೇಶನವನ್ನು ಪ್ರಾರಂಭಿಸಬೇಕು. ಈ ವಿವಾದವೂ ಭಾರತದ ಜಾಗತಿಕ ಚಿತ್ರಣಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ. ಕೋಟಿಗಟ್ಟಲೆ ಚಿಲ್ಲರೆ ಹೂಡಿಕೆದಾರರ ಕಷ್ಟಪಟ್ಟು ಗಳಿಸಿದ ಹೂಡಿಕೆಗಳು ಅಪಾಯದಲ್ಲಿದೆ ಎಂದು ಇಂಡಿಯಾ ಒಕ್ಕೂಟದ ಪಕ್ಷಗಳು ಇಂದು ಬೇಡಿಕೆ ಇಟ್ಟಿವೆ ಎಂದು ಖರ್ಗೆ ಹೇಳಿದ್ದಾರೆ.

“ಈ ದೇಶವನ್ನು ನಡೆಸಲು ನಮಗೆ ಏಕಸ್ವಾಮ್ಯ ಮತ್ತು ಕಾರ್ಟೆಲ್‌ಗಳ ಅಗತ್ಯವಿಲ್ಲ. ನಮಗೆ ಖಾಸಗಿ ವಲಯದಲ್ಲಿ ಆರೋಗ್ಯಕರ ಮಾರುಕಟ್ಟೆ ಚಾಲಿತ ಸ್ಪರ್ಧೆಯ ಅಗತ್ಯವಿದೆ. ಹೀಗಿದ್ದಾಗ ಸಮಾನ ಅವಕಾಶಗಳು, ಉದ್ಯೋಗ ಮತ್ತು ಸಂಪತ್ತಿನ ಸಮಾನ ವಿತರಣೆಯನ್ನು ಸುಗಮಗೊಳಿಸುತ್ತದೆ. ಭಾರತದ ಅಂತರ್ಗತ ಉದ್ಯಮಶೀಲತಾ ಮನೋಭಾವವನ್ನು ಪೂರೈಸುತ್ತದೆ” ಎಂದು ಅವರು ಖರ್ಗೆ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅಮೆರಿಕದಲ್ಲಿ ಗೌತಮ್ ಅದಾನಿ ಅವರ ದೋಷಾರೋಪಣೆಯ ಕುರಿತು ಚರ್ಚೆಯನ್ನು ಕೋರಿದ್ದು, ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಿಜೆಪಿ ಸಂಸದೆ ಸಂಧ್ಯಾ ರೇ ಅವರ ಅಧ್ಯಕ್ಷತೆಯಲ್ಲಿ ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷಗಳು ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿನ ಸೋಲಿಗೆ ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷನದಲ್ಲಿ ಆರೋಪಿಸಿದ್ದಾರೆ. ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಗುರಿಯನ್ನು ಸಾಧಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ. “ಹೊಸ ಆಲೋಚನೆಗಳು ಮತ್ತು ಉತ್ಸಾಹ ಹೊಂದಿರುವ ಸಂಸತ್ತಿನ ಹೊಸ ಮತ್ತು ಯುವ ಸದಸ್ಯರು ಮಾತನಾಡಲು ಸಾಧ್ಯವಾಗುವುದಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 20 ರಂದು, ಅಮೆರಿಕದ ಅಧಿಕಾರಿಗಳು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಹು-ಬಿಲಿಯನ್ ಡಾಲರ್ ಲಂಚ ಮತ್ತು ವಂಚನೆ ಯೋಜನೆಯಲ್ಲಿ ದೋಷಾರೋಪಣೆಯನ್ನು ಘೋಷಿಸಿದ್ದಾರೆ. ಅದಾನಿ ಗ್ರೂಪ್‌ನ ಸಂಸ್ಥಾಪಕ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿಗೆ ಕೂಡಾ ನ್ಯಾಯಾಧೀಶರು ಬಂಧನ ವಾರಂಟ್‌ಗಳನ್ನು ಹೊರಡಿಸಿದ್ದಾರೆ.

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಸೇರಿದಂತೆ ಇತರ ಏಳು ಜನರು ಸುಮಾರು 20 ವರ್ಷಗಳಲ್ಲಿ 2 ಬಿಲಿಯನ್ ಡಾಲರ್‌ ಅಥವಾ 16,880 ಕೋಟಿ ರೂಗಳು ಲಾಭವಿರುವ ವ್ಯಾಪಾರಿ ಒಪ್ಪಂದವನ್ನು ಒಪ್ಪಿಕೊಳ್ಳಲು 2020 ಮತ್ತು 2024 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡುವ ಬಗ್ಗೆ ಒಪ್ಪಿಕೊಂಡಿದ್ದರು ಎಂದು ಅಮೆರಿಕಾದ ಅಟಾರ್ನಿ ಕಚೇರಿಯಿಂದ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಈ ದೋಷಾರೋಪಣೆಯು ಭಾರತದಲ್ಲಿ ರಾಜಕೀಯವಾಗಿ ಕೋಲಾಹಲ ಉಂಟಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...