Homeಮುಖಪುಟಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಸದಸ್ಯರ ಮೇಲೆ ಗುಂಡು ಹಾರಿಸಿ ಹತ್ಯೆ - ವರದಿ

ಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಸದಸ್ಯರ ಮೇಲೆ ಗುಂಡು ಹಾರಿಸಿ ಹತ್ಯೆ – ವರದಿ

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳಿಂದ ಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಮೂವರನ್ನು ನದಿಗೆ ಎಸೆಯುವ ಮೊದಲು, ಅವರಿಗೆ ಹಲವು ಬಾರಿ ಗುಂಡು ಹಾರಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಗಳು ಸೂಚಿಸಿವೆ ಎಂದು ದಿ ಹಿಂದೂ ಭಾನುವಾರ ವರದಿ ಮಾಡಿದೆ.

ನವೆಂಬರ್ 11 ರಂದು, ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿ ಭುಗಿಲೆದ್ದ ಹಿಂಸಾಚಾರದ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 6 ಜನರು ಜಿರಿಬಾಮ್‌ನಿಂದ ನಾಪತ್ತೆಯಾಗಿದ್ದರು. ಆರು ವ್ಯಕ್ತಿಗಳನ್ನು ಶಸ್ತ್ರಸಜ್ಜಿತ ಹ್ಮಾರ್ ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಮೈತೇಯಿ ಗುಂಪುಗಳು ಆರೋಪಿಸಿದ್ದವು. ಅಪಹರಣಕ್ಕೊಳಗಾಗಿದ್ದ ಮೈತೇಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಶವಗಳು ನವೆಂಬರ್ 15 ಮತ್ತು ನವೆಂಬರ್ 18 ರ ನಡುವೆ ಜಿರಿ ಮತ್ತು ಬರಾಕ್ ನದಿಗಳಲ್ಲಿ ತೇಲುತ್ತಿದ್ದವು. ಮೂರು ವರ್ಷದ ಚಿಂಗ್‌ಖೀಂಗನ್‌ಬಾ ಸಿಂಗ್, ಅವರ ತಾಯಿ ಎಲ್ ಹೈಟೊನ್ಬಿ ದೇವಿ(25), ಮತ್ತು ಅಜ್ಜಿ ವೈ ರಾಣಿ ದೇವಿ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪ್ರತಿಯೊಬ್ಬರಿಗೂ ಗುಂಡು ಹಾರಿಸಲಾಗಿದೆ ಎಂದು ಸೂಚಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೂರು ವರ್ಷದ ಮಗು ಚಿಂಗ್‌ಖೀಂಗನ್‌ಬಾ ಸಿಂಗ್ ಅವರ ಗಲ್ಲದ ಮೇಲೆ ಗುಂಡಿನ ಗಾಯ ಇದೆ ಎಂದು ವರದಿಯು ಹೇಳಿದೆ. ಅವರ ತಾಯಿ ಹೈಟೋನ್ಬಿ ದೇವಿ ಅವರ ಬೆನ್ನಿನ ಮೇಲೆ ಎರಡು ಗುಂಡುಗಳ ಗಾಯಗಳಾಗಿದ್ದರೆ, ಅವರ ಅಜ್ಜಿ ವೈ ರಾಣಿ ದೇವಿ ಮೇಲೆ ಐದು ಬುಲೆಟ್‌ಗಳ ಗಾಯಗಳು ಆಗಿವೆ ಎಂದು ವರದಿಗಳು ತಿಳಿಸಿವೆ.

ಅವರನ್ನು ಅಪಹರಿಸಿದ ದಿನ, ಶಂಕಿತ ಕುಕಿ ಉಗ್ರಗಾಮಿಗಳು ಜಕುರಾಧೋರ್‌ನಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಫೋರ್ಸ್ ಪೋಸ್ಟ್‌ನ ಮೇಲೆ ದಾಳಿ ನಡೆಸಿದ್ದರು. ಇದರ ನಂತರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ತು ಶಂಕಿತ ಉಗ್ರರು ಕೊಲ್ಲಲ್ಪಟ್ಟಿದ್ದಾರೆ.

ಆದಾಗ್ಯೂ, ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು ಗ್ರಾಮದ ಸ್ವಯಂಸೇವಕರು ಎಂದು ಕುಕಿ ಸಂಘಟನೆಗಳು ಹೇಳಿಕೊಂಡಿವೆ. ಮೇ 2023 ರಲ್ಲಿ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಹಳ್ಳಿಗಳನ್ನು ಕಾವಲು ಕಾಯುತ್ತಿರುವ ಶಸ್ತ್ರಸಜ್ಜಿತ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ.

ನವೆಂಬರ್‌ನಲ್ಲಿ ಮಣಿಪುರದಲ್ಲಿ ಹಿಂಸಾಚಾರದಲ್ಲಿ ಏರಿಕೆ ಕಂಡುಬಂದಿದ್ದು, ನವೆಂಬರ್ 7 ರಿಂದ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ ಮೈತೇಯಿ ಮತ್ತು ಕುಕಿ-ಝೋ-ಹ್ಮಾರ್‌ಗಳ ನಡುವಿನ ಘರ್ಷಣೆಗಳಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...