Homeಮುಖಪುಟ'ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ' | ಸಿಧು ಪ್ರತಿಪಾದನೆ ನಿರಾಕರಿಸಿದ ಕ್ಯಾನ್ಸರ್ ತಜ್ಞರು

‘ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ’ | ಸಿಧು ಪ್ರತಿಪಾದನೆ ನಿರಾಕರಿಸಿದ ಕ್ಯಾನ್ಸರ್ ತಜ್ಞರು

- Advertisement -
- Advertisement -

ಬೇವು, ನಿಂಬೆ ರಸ, ಅರಿಶಿನ ಮತ್ತು ದಾಲ್ಚಿನ್ನಿಯಂತಹ ಪದಾರ್ಥಗಳನ್ನು ಸೇವಿಸಿದ ಕಾರಣಕ್ಕೆ ತಮ್ಮ ಪತ್ನಿಯ ಸ್ತನ ಕ್ಯಾನ್ಸರ್ ಗುಣವಾಗಿದೆ ಎಂದಿದ್ದ ಮಾಜಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಹೇಳಿಕೆಗೆ ಆಂಕೊಲಾಜಿಸ್ಟ್‌ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯವಾಗಿ ಸಾಬಿತಾಗದ ಪರಿಹಾರಗಳನ್ನು ಅವಲಂಬಿಸಬೇಡಿ ಎಂದು ದೇಶದ ಹಲವಾರು ಉನ್ನತ ವೈದ್ಯರು ಟಿಪ್ಪಣಿ ಬಿಡುಗಡೆ ಮಾಡಿದ್ದಾರೆ. ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ

ಕಳೆದ ವಾರ ಮಾಧ್ಯಮಗೋಷ್ಠಿಯಲ್ಲಿ ಸಿಧು ಈ ಹೇಳಿಕೆ ನೀಡಿದ್ದರು. ಇದರ ನಂತರ, ದೇಶದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಯಾಗಿರುವ ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ)ಯ 262 ಕ್ಕೂ ಹೆಚ್ಚು ಹಾಲಿ ಮತ್ತು ಮಾಜಿ ಆಂಕೊಲಾಜಿಸ್ಟ್‌ಗಳು ಸಿಧು ಅವರ ಪ್ರತಿಪಾದನೆಗೆ ಯಾವುದೇ ಆಧಾರಗಳಿಲ್ಲ ಎಂದು ಪ್ರತ್ಯೇಕ ಹೇಳಿಕೆಗಳಲ್ಲಿ ತಿಳಿಸಿದ್ದಾರೆ. ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಂಭವನೀಯ ಕ್ಯಾನ್ಸರ್‌ನ ಲಕ್ಷಣಗಳು ಕಂಡುಬಂದಲ್ಲಿ ಸೂಕ್ತ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿ. ಕ್ಯಾನ್ಸರ್ ರೋಗ ಆಗಿರುವುದು ಕಂಡುಬಂದರೆ, ತರಬೇತಿ ಪಡೆದ ವೈದ್ಯರು ಸಲಹೆ ನೀಡಿದ ಸಾಕ್ಷ್ಯ ಆಧಾರಿತ ಚಿಕಿತ್ಸೆಯನ್ನು ತೆಗೆದುಕೊಳ್ಳುವಂತೆ ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ” ಎಂದು ಟಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

“ಈ ಉತ್ಪನ್ನಗಳ ಬಗ್ಗೆ ಕೆಲವು ಸಂಶೋಧನೆಗಳು ನಡೆಯುತ್ತಿದೆ. ಅವುಗಳನ್ನು ಕ್ಯಾನ್ಸರ್ ವಿರೋಧಿ ಚಿಕಿತ್ಸೆಯಲ್ಲಿ ಬಳಸುವಂತೆ ಶಿಫಾರಸು ಮಾಡಲು ಯಾವುದೇ ವೈದ್ಯಕೀಯ ಆಧಾರ ಇಲ್ಲ. ಸಾಬೀತಾಗದ ಪರಿಹಾರಗಳನ್ನು ಅನುಸರಿಸುವ ಮೂಲಕ ರೋಗಿಗಳ ಚಿಕಿತ್ಸೆಯನ್ನು ವಿಳಂಬ ಮಾಡದಂತೆ ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ. ಅದರ ಬದಲಿಗೆ ವೈದ್ಯರನ್ನು ಸಂಪರ್ಕಿಸಿ, ಮೇಲಾಗಿ ಕ್ಯಾನ್ಸರ್ ತಜ್ಞರನ್ನು ಸಂಪರ್ಕಿಸಿ,” ಎಂದು ಟಿಎಂಸಿಯ ಹಳೆ ವಿದ್ಯಾರ್ಥಿಗಳ ಹೇಳಿಕೆಯು ಸಾರ್ವಜನಿಕರನ್ನು ಎಚ್ಚರಿಸಿದೆ.

ಸಕ್ಕರೆ, ಹಾಲಿನ ಉತ್ಪನ್ನಗಳು, ಸಂಸ್ಕರಿಸಿದ ಎಣ್ಣೆ, ಗೋಧಿ ಮತ್ತು ಸಂಸ್ಕರಿಸಿದ ಗೋಧಿ, ನಿಂಬೆ ರಸ, ಅರಿಶಿನ, ದಾಲ್ಚಿನ್ನಿ, ಬೇವಿನ ಎಲೆಗಳು, ಗೂಸ್್ಬೆರ್ರಿಸ್ ಮತ್ತು ಕ್ವಿನೋವಾ ಬಳಕೆ ಸೇರಿದಂತೆ ಆಹಾರದ ಬದಲಾವಣೆಗಳು ತಮ್ಮ ಪತ್ನಿ ನಾಲ್ಕನೇ ಹಂತದ ಕ್ಯಾನ್ಸರ್ ಅನ್ನು ಗುಣಪಡಿಸಿದೆ ಎಂದು ಸಿಧು ಈ ಹಿಂದೆ ಹೇಳಿದ್ದರು.

ತಮ್ಮ ಹೇಳಿಕೆಗಳನ್ನು ವಿರೋಧಿಸಿ ವೈದ್ಯಕೀಯ ಸಂಘಟನೆಗಳು ಮುನ್ನಲೆಗೆ ಬಂದ ನಂತರ ಸೋಮವಾರ (ನವೆಂಬರ್ 25) X ನಲ್ಲಿ ಸಿಧು ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಡಯಟ್ ಯೋಜನೆಯನ್ನು” ಚಿಕಿತ್ಸೆಯ ಅನುಕೂಲತೆಯಾಗಿ ನೋಡಬೇಕು ಮತ್ತು ವೈದ್ಯರೊಂದಿಗೆ ಸಮಾಲೋಚಿಸಿದ ನಂತರ ಅದನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ.

ಅದಾಗ್ಯೂ, ಸ್ವತಃ ವೈದ್ಯೆಯಾಗಿರುವ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರು ಆಹಾರದ ಬದಲಾವಣೆಯಿಂದ ನಾನು ಪ್ರಯೋಜನ ಪಡೆದಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...