Homeಕರ್ನಾಟಕರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ - ಸಚಿವ ಮುನಿಯಪ್ಪ ಭರವಸೆ

ರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ – ಸಚಿವ ಮುನಿಯಪ್ಪ ಭರವಸೆ

- Advertisement -
- Advertisement -

ಬಿಪಿಎಲ್‌ ಕಾರ್ಡ್‌ ಇರುವ ರಾಜ್ಯದ ಎಲ್ಲ ಅರ್ಹ ಪಡಿತರದಾರರಿಗೆ ನವೆಂಬರ್ 29 ರಿಂದ ಪಡಿತರ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಸೋಮವಾರ ತಿಳಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ರದ್ದಾಗಿರುವ ಕಾರ್ಡ್‌ಗಳನ್ನು ಪುನಃ ಸಕ್ರಿಯಗೊಳಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಅವರು ಮಾಧ್ಯಮದ ಜೊತೆಗೆ ಹೇಳಿದ್ದಾರೆ. ರದ್ದಾದ ಬಿಪಿಎಲ್‌ ಕಾರ್ಡ್‌

“ಒಂದೂವರೆ ತಿಂಗಳ ಹಿಂದೆ ರದ್ದುಪಡಿಸಿದ್ದ ಎಲ್ಲ ರೇಷನ್‌ ಕಾರ್ಡ್‌ಗಳನ್ನು ನವೆಂಬರ್ 28 ರೊಳಗೆ ಮರು ಸಕ್ರಿಯಗೊಳಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದು, ಆ ಕಾರ್ಯ ಭರದಿಂದ ನಡೆಯುತ್ತಿದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಯಾವುದೇ ಕಾರಣಕ್ಕೂ ಪಡಿತರ ತಪ್ಪಿಸುವುದಿಲ್ಲ. ರಾಜ್ಯ ಸರಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಕಾರ್ಡ್‌ ರದ್ದುಗೊಂಡಿದ್ದರಿಂದ ಕಳೆದ ಎರಡು ತಿಂಗಳಿಂದ ಸಿಗದೇ ಇರುವ ಎಲ್ಲ ಸೌಲಭ್ಯಗಳು ದೊರೆಯಲಿವೆ. ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ತಪ್ಪಿ ಹೋಗಬಾರದು. ಒಂದು ವೇಳೆ ತಪ್ಪಿ ಹೋಗಿದ್ದರೆ, ವಾಪಸ್‌ ಕೊಡಲಾಗುವುದು” ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ ಎಂದು ವಿಜಯ ಕರ್ನಾಟಕ ಪತ್ರಿಕೆ ವರದಿ ಮಾಡಿದೆ. ರದ್ದಾದ ಬಿಪಿಎಲ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಕಾರ್ಡ್‌ ರದ್ದಾದ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಫಲಾನುಭವಿಗಳಿಗೆ ಹೊಸ ಕಾರ್ಡ್‌ಗಳನ್ನು ವಿತರಿಸುವ ಬದಲಿಗೆ ಹಳೇ ಕಾರ್ಡ್‌ ನಂಬರ್‌ ನಮೂದಿಸಿ ಪಡಿತರ ಪಡೆಯಬಹುದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಎಂದಿನಂತೆ ಬಿಪಿಎಲ್‌ ಕಾರ್ಡ್‌ ಹೊಂದಿದ ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ ಸೇರಿದಂತೆ ಇತರೆ ಎಲ್ಲ ಸೌಲಭ್ಯಗಳು ದೊರೆಯಲಿವೆ. ಸದ್ಯ, ಅಕ್ರಮವಾಗಿ ಕಾರ್ಡ್‌ಗಳನ್ನು ಹೊಂದಿದ ಸರಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ಧಾರ ಮಾಡಿಲ್ಲ. ಮೊದಲು ರದ್ದಾದ ಅರ್ಹರ ಪಡಿತರ ಕಾರ್ಡ್‌ಗಳನ್ನು ಮರು ಸಕ್ರಿಯಗೊಳಿಸುದೇ ಸರಕಾರದ ಗುರಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ನಡುವೆ, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್‌ಗಳ ರದ್ದತಿಯ ಸುತ್ತ ನಡೆಯುತ್ತಿರುವ ಗೊಂದಲವನ್ನು ಪರಿಹರಿಸಲು ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದಾಯ ತೆರಿಗೆ ಪಾವತಿದಾರರು ಅಥವಾ ಸರ್ಕಾರಿ ನೌಕರರಾಗಿರುವ ವ್ಯಕ್ತಿಗಳ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದುಪಡಿಸುವುದನ್ನು ಖಾತ್ರಿಪಡಿಸಿಕೊಂಡು, ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಆಹಾರ ಇಲಾಖೆಗೆ ಸೂಚನೆ ನೀಡಲಾಗಿದೆ.

ಇತರ ಎಲ್ಲ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಬಾರದು ಎಂದು ಸರ್ಕಾರ ಒತ್ತಿ ಹೇಳಿದೆ. ಪ್ರಕ್ರಿಯೆಯಲ್ಲಿ ಯಾವುದೇ ತಪ್ಪುಗಳು ಕಂಡುಬಂದಲ್ಲಿ, ರದ್ದುಪಡಿಸಿದ ಕಾರ್ಡ್‌ಗಳನ್ನು ಮರು ವಿತರಿಸಲು ಆಹಾರ ಇಲಾಖೆಗೆ ಸೂಚಿಸಲಾಗಿದೆ. ಈ ಕ್ರಮಗಳನ್ನು ದಿನದ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಆದೇಶವು ಕಡ್ಡಾಯಗೊಳಿಸಿದ್ದು, ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಬಗ್ಗೆ ಒತ್ತಿ ಹೇಳಿದೆ.

ಅರ್ಹರು ತಮ್ಮ ಕಾರ್ಡ್‌ಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಮತ್ತೆ ಮತ್ತೆ ಭರವಸೆ ನೀಡಿದ್ದಾರೆ. “ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದುಗೊಳಿಸಿದರೆ, ಅವುಗಳನ್ನು ತಕ್ಷಣವೇ ಮರುಸ್ಥಾಪಿಸಬೇಕು” ಎಂದು ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...