Homeಕರ್ನಾಟಕರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ - ಸಚಿವ ಮುನಿಯಪ್ಪ ಭರವಸೆ

ರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ – ಸಚಿವ ಮುನಿಯಪ್ಪ ಭರವಸೆ

- Advertisement -
- Advertisement -

ಬಿಪಿಎಲ್‌ ಕಾರ್ಡ್‌ ಇರುವ ರಾಜ್ಯದ ಎಲ್ಲ ಅರ್ಹ ಪಡಿತರದಾರರಿಗೆ ನವೆಂಬರ್ 29 ರಿಂದ ಪಡಿತರ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಸೋಮವಾರ ತಿಳಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ರದ್ದಾಗಿರುವ ಕಾರ್ಡ್‌ಗಳನ್ನು ಪುನಃ ಸಕ್ರಿಯಗೊಳಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಅವರು ಮಾಧ್ಯಮದ ಜೊತೆಗೆ ಹೇಳಿದ್ದಾರೆ. ರದ್ದಾದ ಬಿಪಿಎಲ್‌ ಕಾರ್ಡ್‌

“ಒಂದೂವರೆ ತಿಂಗಳ ಹಿಂದೆ ರದ್ದುಪಡಿಸಿದ್ದ ಎಲ್ಲ ರೇಷನ್‌ ಕಾರ್ಡ್‌ಗಳನ್ನು ನವೆಂಬರ್ 28 ರೊಳಗೆ ಮರು ಸಕ್ರಿಯಗೊಳಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದು, ಆ ಕಾರ್ಯ ಭರದಿಂದ ನಡೆಯುತ್ತಿದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಯಾವುದೇ ಕಾರಣಕ್ಕೂ ಪಡಿತರ ತಪ್ಪಿಸುವುದಿಲ್ಲ. ರಾಜ್ಯ ಸರಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಕಾರ್ಡ್‌ ರದ್ದುಗೊಂಡಿದ್ದರಿಂದ ಕಳೆದ ಎರಡು ತಿಂಗಳಿಂದ ಸಿಗದೇ ಇರುವ ಎಲ್ಲ ಸೌಲಭ್ಯಗಳು ದೊರೆಯಲಿವೆ. ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ತಪ್ಪಿ ಹೋಗಬಾರದು. ಒಂದು ವೇಳೆ ತಪ್ಪಿ ಹೋಗಿದ್ದರೆ, ವಾಪಸ್‌ ಕೊಡಲಾಗುವುದು” ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ ಎಂದು ವಿಜಯ ಕರ್ನಾಟಕ ಪತ್ರಿಕೆ ವರದಿ ಮಾಡಿದೆ. ರದ್ದಾದ ಬಿಪಿಎಲ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಕಾರ್ಡ್‌ ರದ್ದಾದ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಫಲಾನುಭವಿಗಳಿಗೆ ಹೊಸ ಕಾರ್ಡ್‌ಗಳನ್ನು ವಿತರಿಸುವ ಬದಲಿಗೆ ಹಳೇ ಕಾರ್ಡ್‌ ನಂಬರ್‌ ನಮೂದಿಸಿ ಪಡಿತರ ಪಡೆಯಬಹುದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಎಂದಿನಂತೆ ಬಿಪಿಎಲ್‌ ಕಾರ್ಡ್‌ ಹೊಂದಿದ ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ ಸೇರಿದಂತೆ ಇತರೆ ಎಲ್ಲ ಸೌಲಭ್ಯಗಳು ದೊರೆಯಲಿವೆ. ಸದ್ಯ, ಅಕ್ರಮವಾಗಿ ಕಾರ್ಡ್‌ಗಳನ್ನು ಹೊಂದಿದ ಸರಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ಧಾರ ಮಾಡಿಲ್ಲ. ಮೊದಲು ರದ್ದಾದ ಅರ್ಹರ ಪಡಿತರ ಕಾರ್ಡ್‌ಗಳನ್ನು ಮರು ಸಕ್ರಿಯಗೊಳಿಸುದೇ ಸರಕಾರದ ಗುರಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ನಡುವೆ, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್‌ಗಳ ರದ್ದತಿಯ ಸುತ್ತ ನಡೆಯುತ್ತಿರುವ ಗೊಂದಲವನ್ನು ಪರಿಹರಿಸಲು ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದಾಯ ತೆರಿಗೆ ಪಾವತಿದಾರರು ಅಥವಾ ಸರ್ಕಾರಿ ನೌಕರರಾಗಿರುವ ವ್ಯಕ್ತಿಗಳ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದುಪಡಿಸುವುದನ್ನು ಖಾತ್ರಿಪಡಿಸಿಕೊಂಡು, ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಆಹಾರ ಇಲಾಖೆಗೆ ಸೂಚನೆ ನೀಡಲಾಗಿದೆ.

ಇತರ ಎಲ್ಲ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಬಾರದು ಎಂದು ಸರ್ಕಾರ ಒತ್ತಿ ಹೇಳಿದೆ. ಪ್ರಕ್ರಿಯೆಯಲ್ಲಿ ಯಾವುದೇ ತಪ್ಪುಗಳು ಕಂಡುಬಂದಲ್ಲಿ, ರದ್ದುಪಡಿಸಿದ ಕಾರ್ಡ್‌ಗಳನ್ನು ಮರು ವಿತರಿಸಲು ಆಹಾರ ಇಲಾಖೆಗೆ ಸೂಚಿಸಲಾಗಿದೆ. ಈ ಕ್ರಮಗಳನ್ನು ದಿನದ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಆದೇಶವು ಕಡ್ಡಾಯಗೊಳಿಸಿದ್ದು, ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಬಗ್ಗೆ ಒತ್ತಿ ಹೇಳಿದೆ.

ಅರ್ಹರು ತಮ್ಮ ಕಾರ್ಡ್‌ಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಮತ್ತೆ ಮತ್ತೆ ಭರವಸೆ ನೀಡಿದ್ದಾರೆ. “ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದುಗೊಳಿಸಿದರೆ, ಅವುಗಳನ್ನು ತಕ್ಷಣವೇ ಮರುಸ್ಥಾಪಿಸಬೇಕು” ಎಂದು ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...