Homeಮುಖಪುಟಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಇನ್ನು ಸರ್ಕಸ್‌ನಲ್ಲಿ: BJP V/s ಶಿವಸೇನೆ, NCP ಮತ್ತು ಕಾಂಗ್ರೆಸ್‌?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಅಧಿಕಾರ ಹಗ್ಗ-ಜಗ್ಗಾಟ ಮಾತ್ರ ನಿಂತಿಲ್ಲ. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ಒಳ ಬೇಗುದಿ, ಸಿಎಂ ಕುರ್ಚಿಗಾಗಿ ಇರುಸುಮುರಿಸು ನಡೆಯುತ್ತಲೇ ಇದೆ. ಜಪ್ಪಯ್ಯ ಅಂದ್ರೂ ಶಿವಸೇನೆಗೆ ಸಿಎಂ ಗಾದಿ ಬಿಟ್ಟು ಕೊಡುವುದಿಲ್ಲ ಎನ್ನುತ್ತಿದೆ ಬಿಜೆಪಿ. ಇತ್ತ ಶಿವಸೇನೆ ಕೂಡ ಚುನಾವಣಾ ಪೂರ್ವ ಮೈತ್ರಿಗೆ ಬಿಜೆಪಿ ಬದ್ಧವಾಗಿರಬೇಕು. 50:50 ಸೂತ್ರದ ಪ್ರಕಾರ, ಎರಡೂವರೆ ವರ್ಷ ಸಿಎಂ ಹುದ್ದೆಯನ್ನು ಶಿವಸೇನೆಗೆ ಬಿಟ್ಟು ಕೊಡಬೇಕು ಎಂದು ಪಟ್ಟು ಹಿಡಿದಿದೆ.

ಈ ಮಧ್ಯೆ ಶಿವಸೇನೆಯನ್ನು ಬದಿಗಿರಿಸಿ, ಬಿಜೆಪಿ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಇತ್ತ ಸೂತ್ರವಿಲ್ಲದ ಪಟದಂತೆ ಶಿವಸೇನೆ, ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ರಣತಂತ್ರ ರೂಪಿಸುತ್ತಿದೆ.

ಯಾರು ಏನೇ ತಂತ್ರ ರೂಪಿಸಿದರೂ ಈಗ ಪಕ್ಷಗಳಿಗೆ ಇರುವ ಹಾದಿ ಒಂದೇ. ಅದು ಕಾಂಗ್ರೆಸ್ ಮತ್ತು ಎನ್ ಸಿ ಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದು. ಇದರ ಹೊರತು ಬಿಜೆಪಿ ಮತ್ತು ಶಿವಸೇನೆಗೆ ಯಾವುದೇ ಹಾದಿಯಿಲ್ಲ. ಅದರಂತೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರದಂತೆ ತಡೆಯಲು ಮುಂದಾಗಿರುವ ಶಿವಸೇನೆ, ಎನ್ ಸಿ ಪಿ ಮನಸ್ಸು ಮಾಡಿದರೆ ಸರ್ಕಾರ ರಚನೆ ಮಾಡಬಹುದು ಎಂಬ ನಿರೀಕ್ಷಿತ ಹೇಳಿಕೆ ನೀಡಿದೆ. ಭಿನ್ನ ಸಿದ್ಧಾಂತ, ಭಿನ್ನ ನೈತಿಕ ನೆಲೆಗಟ್ಟು ಹೊಂದಿರುವ ಎರಡೂ ಪಕ್ಷಗಳು ಒಗ್ಗೂಡಿ, ಬಿಜೆಪಿಯನ್ನು ಮಣಿಸುತ್ತವಾ..? ಇದಕ್ಕೆ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಳ್ಳುತ್ತಾರಾ..? ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಯಾಕಂದ್ರೆ ಈಗಾಗಲೇ ಶಿವಸೇನೆ ವಕ್ತಾರ ಸಂಜಯ್ ರಾವತ್, ಎನ್ ಸಿ ಪಿ ಜತೆಗಿನ ಮೈತ್ರಿ ಬಗ್ಗೆ ವಿಶ್ವಾಸದ ಮಾತನಾಡಿದ್ದಾರೆ. ಆದರೆ ಎನ್ ಸಿ ಪಿ ಕಡೆಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಅಧಿಕಾರ ಚುಕ್ಕಾಣಿ ಹಿಡಿಯಲು ನಡೆಸುತ್ತಿರುವ ಶೀತಲ ಸಮರವನ್ನು ಸುಮ್ಮನೇ ನೋಡುತ್ತಿದೆ. ಇನ್ನು ಈ ಮೈತ್ರಿಗೆ ಕಾಂಗ್ರೆಸ್ ಮನವೊಲಿಸಲು ಎನ್‌ಸಿಪಿ ಮುಂದಾಗಿದೆ. ಅದಕ್ಕಾಗಿ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕರೆ ಮಾಡಿ, ಮೈತ್ರಿಯ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ. ಹೀಗೆ ಕರೆ ಬಂದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಸಂಜಯ್ ರಾವತ್ ಮಾತನಾಡಿ, ನಾವು ಮನಸ್ಸು ಮಾಡಿದರೆ ರಾಜ್ಯದಲ್ಲಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಇನ್ನು ಎನ್ ಸಿ ಪಿ ನಾಯಕ ಅಜಿತ್ ಪವಾರ್ ಮಾತನಾಡಿ, ಶಿವಸೇನೆ ನೀಡುತ್ತಿರುವ ಆಹ್ವಾನವನ್ನು ತಳ್ಳಿ ಹಾಕದೇ, ಸರ್ಕಾರ ರಚಿಸುವ ಮನಸ್ಸು ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೇರದಂತೆ ತಡೆಯಲು ಇದೊಂದು ಸೂತ್ರ ಅನುಸರಿಸುವುದು ಸೂಕ್ತ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರು ಶಿವಸೇನೆ ಜತೆಗೆ ಯಾವುದೇ ರೀತಿಯ ಸಂಬಂಧ ಒಳ್ಳೆಯದಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಂಗ್ರೆಸ್ ನ ಮಾಜಿ ಸಿಎಂ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್ ಅವರು ಶಿವಸೇನೆ ತಾನಾಗೇ, ಮೈತ್ರಿಗೆ ಆಹ್ವಾನ ನೀಡಿದರೆ ಒಪ್ಪಿಕೊಳ್ಳುವುದು ಸೂಕ್ತ ಎಂದಿದ್ದಾರೆ. ಇತ್ತ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮಾ, ಶಿವಸೇನೆ ಜತೆಗಿನ ಮೈತ್ರಿ ಮಾತು ಮತ್ತು ಶಿವಸೇನೆಗೆ ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ನಾಟಕವಾಡುತ್ತಿವೆ. ಎರಡೂ ಪಕ್ಷಗಳ ನಾಟಕದಿಂದ ಕಾಂಗ್ರೆಸ್ ಅಂತರ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ಸೂಚಿಸುವುದು ಬೇಡ ಎಂದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಗುದ್ದಾಟ, ಇತರೆ ಪಕ್ಷಗಳಿಗೆ ಯಾವ ರೀತಿ ಅನುಕೂಲವಾಗಲಿದೆ. ಕಾಂಗ್ರೆಸ್ ಮತ್ತು ಎನ್ ಸಿ ಪಿ ಪಕ್ಷದೊಳಗಿನ ನಾಯಕರ ಪರ-ವಿರೋಧದ ಮಾತುಗಳ ನಡುವೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ..? ಎನ್ನುವುದೇ ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...