Homeಮುಖಪುಟಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರದ ಆದೇಶ ಸಮಾನತೆಯ ವಿರೋಧಿ ಎಂದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.26) ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು, ಆದ್ಯತೆ ಹಂಚಿಕೆಯನ್ನು ಅನುಮತಿಸುವ ಸರ್ಕಾರದ ಆದೇಶ ‘ವಿಚಿತ್ರ ಮತ್ತು ತರ್ಕಬದ್ದವಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಇದು ಅಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಸಂವಿಧಾನದ 14ನೇ ವಿಧಿಯ (ಸಮಾನತೆ) ಉಲ್ಲಂಘನೆಯಾಗಿದೆ ಎಂದಿದೆ.

ಸಂಸದರು, ಶಾಸಕರು, ಅಖಿಲ ಭಾರತ ಸೇವಾ ಅಧಿಕಾರಿಗಳು, ರಾಜ್ಯ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಪತ್ರಕರ್ತರನ್ನು ಮೂಲ ದರದಲ್ಲಿ ಭೂ ಮಂಜೂರಾತಿಗೆ ಪ್ರತ್ಯೇಕ ವರ್ಗ ಎಂದು ವರ್ಗೀಕರಿಸಿ, ಆಗಿನ ಆಂಧ್ರ ಪ್ರದೇಶ ಸರ್ಕಾರ 2005ರಲ್ಲಿ ಹೊರಡಿಸಿದ್ದ ಜ್ಞಾಪಕ ಪತ್ರವನ್ನು ಬದಿಗೊತ್ತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಈ ವಿಭಾಗಗಳಿಗೆ ಮಂಜೂರು ಮಾಡಿ 2008ರಲ್ಲಿ ನೀಡಲಾದ ಆದೇಶವನ್ನೂ ಸರ್ಕಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಆದೇಶ ಒಂದು ಕೆಟ್ಟ ಕಾನೂನು ಮತ್ತು ಸಂವಿಧಾನದ ವಿಧಿ 14ರ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ.

2010ರಲ್ಲಿ ತೆಲಂಗಾಣ ಹೈಕೋರ್ಟ್ ಸರ್ಕಾರದ ಆದೇಶವನ್ನು ಭಾಗಶಃ ರದ್ದುಗೊಳಿಸಿತ್ತು. ಇದರ ವಿರುದ್ಧ ತೆಲಂಗಾಣ ಸರ್ಕಾರ, ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಾಲಯವು ವಜಾಗೊಳಿಸಿದೆ.

“ಸಮಾಜದ ಅರ್ಹ ವರ್ಗಗಳಿಗೆ ಭೂಮಿ ಮಂಜೂರು ಮಾಡುವುದಾಗಿ ಹೇಳಿಕೊಂಡು ನ್ಯಾಯಸಮ್ಮತತೆಯ ವೇಷದಲ್ಲಿ ನಡೆಸುತ್ತಿರುವ ನಿರಂಕುಶ ಆಡಳಿತದ ಒಂದು ಕ್ರಮವಾಗಿದ ಈ ಆದೇಶ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಸಮಾಜದ ಶ್ರೀಮಂತ ವರ್ಗಗಳಿಗೆ ಆದ್ಯತೆಯಲ್ಲಿ ಮನೆಗಳನ್ನು ನೀಡಲು ಉದ್ದೇಶಿಸಿರುವುದು ಅಧಿಕಾರದ ದುರುಪಯೋಗವಾಗಿದೆ. ಅಲ್ಲದೆ, ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದವರನ್ನು ದೂರವಿಡುವ ಮೂಲಕ, ಅವರ ಸಮಾನತೆಯ ಹಕ್ಕನ್ನು ನಿರಾಕರಿಸುವ ನಡೆಯಾಗಿದೆ. ಇದು ಆರ್ಥಿಕ-ಸಾಮಾಜಿಕ ನೆಲೆಗಟ್ಟಿನಲ್ಲಿ ಬಡವರು ಮತ್ತು ಶ್ರೀಮಂತರನ್ನು ಸಮಾಜದಲ್ಲಿ ಪ್ರತ್ಯೇಕಿಸುತ್ತದೆ” ಎಂದು ಹೇಳಿದೆ. ಈ ಮೂಲಕ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.

“ಸರ್ಕಾರಗಳು ಸವಲತ್ತು ಪಡೆದ ಕೆಲವರಿಗೆ ರಿಯಾಯಿತಿ ದರದಲ್ಲಿ ಭೂಮಿಯನ್ನು ಹಂಚಿದಾಗ, ಅದು ಅಸಮಾನತೆಯನ್ನು ಸೃಷ್ಟಿಸುತ್ತದೆ. ಇತರರು ಪ್ರವೇಶಿಸಲಾಗದ ಅನ್ಯಾಯದ ಪ್ರಯೋಜನವನ್ನು ಅವರಿಗೆ ನೀಡಿದಂತಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

“ಈ ಪ್ರಾಶಸ್ತ್ಯದ ಪರಿಗಣನೆಯು ಸಮಾಜದಲ್ಲಿ ಕೆಲವು ವ್ಯಕ್ತಿಗಳು ಮಾತ್ರ ಹೆಚ್ಚಿನದನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳು ಅವರು ಪಡೆಯುವ ಸೌಲಭ್ಯಗಳು ಸಮಾಜಕ್ಕೆ ಮಾಡಿದ ಕೆಲಸಗಳಿಗಲ್ಲ, ಅವರು ಹೊಂದಿರುವ ಸ್ಥಾನಮಾನ ದೊರೆತಿದೆ ಎಂಬ ಭಾವನೆಯನ್ನು ಮೂಡಿಸುತ್ತದೆ” ಎಂದಿದೆ.

“ಇಂತಹ ಕ್ರಮಗಳು ಸಾಮಾನ್ಯ ನಾಗರಿಕರಲ್ಲಿ ಅಸಮಾಧಾನ ಮತ್ತು ಭ್ರಮನಿರಸನವನ್ನು ಉಂಟುಮಾಡುತ್ತವೆ. ಇದನ್ನು ಅವರು ಭ್ರಷ್ಟಚಾರ ಅಥವಾ ಅನ್ಯಾಯವೆಂದು ನೋಡುತ್ತಾರೆ. ಅವರಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ದುರ್ಬಲಗೊಳ್ಳುತ್ತದೆ. ಒಗ್ಗಟ್ಟು ಮತ್ತು ಭ್ರಾತೃತ್ವವನ್ನು ಹಾಳು ಮಾಡುತ್ತದೆ. ಸಾಮಾಜದ ಶ್ರೇಣಿಕೃತ ವ್ಯವಸ್ಥೆಗಳನ್ನು ಕೆಡವುವ ಬದಲು, ಬಲಪಡಿಸುತ್ತದೆ” ಎಂದು ನ್ಯಾಯಾಲಯ ವಿವರಿಸಿದೆ.

“ಸರ್ಕಾರದ ಆದೇಶ ಪತ್ರ ಅಸಮಾನತೆಯನ್ನು ಪ್ರತಿಪಾದಿಸುತ್ತದೆ. ಸಂವಿಧಾನ ಸೂಚಿಸಿದ ಸಮಾನತೆ ಮತ್ತು ನ್ಯಾಯೋಚಿತ ಮಾನದಂಡಗಳನ್ನು ಪೂರೈಸುವುದಿಲ್ಲ” ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ನಿವೇಶನಕ್ಕಾಗಿ ಠೇವಣಿ ಮಾಡಿರುವ ಸಂಪೂರ್ಣ ಮೊತ್ತದ ವಾಪಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಹಣ ವಾಪಸ್ ನೀಡುವ ಬಗ್ಗೆ ತೆಲಂಗಾಣ ಸರ್ಕಾರ ಪರಿಶೀಲಿಸಿ ಹಂಚಿಕೆ ಮಾಡಬೇಕಿದೆ.

ಸೊಸೈಟಿಗಳು ಮತ್ತು ಅದರ ಸದಸ್ಯರ ಪರವಾಗಿ ರಾಜ್ಯ ಸರ್ಕಾರ ಕಾರ್ಯಗತಗೊಳಿಸಿದ ಗುತ್ತಿಗೆ ಕರಾರುಗಳನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...