Homeಮುಖಪುಟಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರದ ಆದೇಶ ಸಮಾನತೆಯ ವಿರೋಧಿ ಎಂದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.26) ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು, ಆದ್ಯತೆ ಹಂಚಿಕೆಯನ್ನು ಅನುಮತಿಸುವ ಸರ್ಕಾರದ ಆದೇಶ ‘ವಿಚಿತ್ರ ಮತ್ತು ತರ್ಕಬದ್ದವಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಇದು ಅಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಸಂವಿಧಾನದ 14ನೇ ವಿಧಿಯ (ಸಮಾನತೆ) ಉಲ್ಲಂಘನೆಯಾಗಿದೆ ಎಂದಿದೆ.

ಸಂಸದರು, ಶಾಸಕರು, ಅಖಿಲ ಭಾರತ ಸೇವಾ ಅಧಿಕಾರಿಗಳು, ರಾಜ್ಯ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಪತ್ರಕರ್ತರನ್ನು ಮೂಲ ದರದಲ್ಲಿ ಭೂ ಮಂಜೂರಾತಿಗೆ ಪ್ರತ್ಯೇಕ ವರ್ಗ ಎಂದು ವರ್ಗೀಕರಿಸಿ, ಆಗಿನ ಆಂಧ್ರ ಪ್ರದೇಶ ಸರ್ಕಾರ 2005ರಲ್ಲಿ ಹೊರಡಿಸಿದ್ದ ಜ್ಞಾಪಕ ಪತ್ರವನ್ನು ಬದಿಗೊತ್ತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಈ ವಿಭಾಗಗಳಿಗೆ ಮಂಜೂರು ಮಾಡಿ 2008ರಲ್ಲಿ ನೀಡಲಾದ ಆದೇಶವನ್ನೂ ಸರ್ಕಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಆದೇಶ ಒಂದು ಕೆಟ್ಟ ಕಾನೂನು ಮತ್ತು ಸಂವಿಧಾನದ ವಿಧಿ 14ರ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ.

2010ರಲ್ಲಿ ತೆಲಂಗಾಣ ಹೈಕೋರ್ಟ್ ಸರ್ಕಾರದ ಆದೇಶವನ್ನು ಭಾಗಶಃ ರದ್ದುಗೊಳಿಸಿತ್ತು. ಇದರ ವಿರುದ್ಧ ತೆಲಂಗಾಣ ಸರ್ಕಾರ, ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಾಲಯವು ವಜಾಗೊಳಿಸಿದೆ.

“ಸಮಾಜದ ಅರ್ಹ ವರ್ಗಗಳಿಗೆ ಭೂಮಿ ಮಂಜೂರು ಮಾಡುವುದಾಗಿ ಹೇಳಿಕೊಂಡು ನ್ಯಾಯಸಮ್ಮತತೆಯ ವೇಷದಲ್ಲಿ ನಡೆಸುತ್ತಿರುವ ನಿರಂಕುಶ ಆಡಳಿತದ ಒಂದು ಕ್ರಮವಾಗಿದ ಈ ಆದೇಶ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಸಮಾಜದ ಶ್ರೀಮಂತ ವರ್ಗಗಳಿಗೆ ಆದ್ಯತೆಯಲ್ಲಿ ಮನೆಗಳನ್ನು ನೀಡಲು ಉದ್ದೇಶಿಸಿರುವುದು ಅಧಿಕಾರದ ದುರುಪಯೋಗವಾಗಿದೆ. ಅಲ್ಲದೆ, ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದವರನ್ನು ದೂರವಿಡುವ ಮೂಲಕ, ಅವರ ಸಮಾನತೆಯ ಹಕ್ಕನ್ನು ನಿರಾಕರಿಸುವ ನಡೆಯಾಗಿದೆ. ಇದು ಆರ್ಥಿಕ-ಸಾಮಾಜಿಕ ನೆಲೆಗಟ್ಟಿನಲ್ಲಿ ಬಡವರು ಮತ್ತು ಶ್ರೀಮಂತರನ್ನು ಸಮಾಜದಲ್ಲಿ ಪ್ರತ್ಯೇಕಿಸುತ್ತದೆ” ಎಂದು ಹೇಳಿದೆ. ಈ ಮೂಲಕ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.

“ಸರ್ಕಾರಗಳು ಸವಲತ್ತು ಪಡೆದ ಕೆಲವರಿಗೆ ರಿಯಾಯಿತಿ ದರದಲ್ಲಿ ಭೂಮಿಯನ್ನು ಹಂಚಿದಾಗ, ಅದು ಅಸಮಾನತೆಯನ್ನು ಸೃಷ್ಟಿಸುತ್ತದೆ. ಇತರರು ಪ್ರವೇಶಿಸಲಾಗದ ಅನ್ಯಾಯದ ಪ್ರಯೋಜನವನ್ನು ಅವರಿಗೆ ನೀಡಿದಂತಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

“ಈ ಪ್ರಾಶಸ್ತ್ಯದ ಪರಿಗಣನೆಯು ಸಮಾಜದಲ್ಲಿ ಕೆಲವು ವ್ಯಕ್ತಿಗಳು ಮಾತ್ರ ಹೆಚ್ಚಿನದನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳು ಅವರು ಪಡೆಯುವ ಸೌಲಭ್ಯಗಳು ಸಮಾಜಕ್ಕೆ ಮಾಡಿದ ಕೆಲಸಗಳಿಗಲ್ಲ, ಅವರು ಹೊಂದಿರುವ ಸ್ಥಾನಮಾನ ದೊರೆತಿದೆ ಎಂಬ ಭಾವನೆಯನ್ನು ಮೂಡಿಸುತ್ತದೆ” ಎಂದಿದೆ.

“ಇಂತಹ ಕ್ರಮಗಳು ಸಾಮಾನ್ಯ ನಾಗರಿಕರಲ್ಲಿ ಅಸಮಾಧಾನ ಮತ್ತು ಭ್ರಮನಿರಸನವನ್ನು ಉಂಟುಮಾಡುತ್ತವೆ. ಇದನ್ನು ಅವರು ಭ್ರಷ್ಟಚಾರ ಅಥವಾ ಅನ್ಯಾಯವೆಂದು ನೋಡುತ್ತಾರೆ. ಅವರಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ದುರ್ಬಲಗೊಳ್ಳುತ್ತದೆ. ಒಗ್ಗಟ್ಟು ಮತ್ತು ಭ್ರಾತೃತ್ವವನ್ನು ಹಾಳು ಮಾಡುತ್ತದೆ. ಸಾಮಾಜದ ಶ್ರೇಣಿಕೃತ ವ್ಯವಸ್ಥೆಗಳನ್ನು ಕೆಡವುವ ಬದಲು, ಬಲಪಡಿಸುತ್ತದೆ” ಎಂದು ನ್ಯಾಯಾಲಯ ವಿವರಿಸಿದೆ.

“ಸರ್ಕಾರದ ಆದೇಶ ಪತ್ರ ಅಸಮಾನತೆಯನ್ನು ಪ್ರತಿಪಾದಿಸುತ್ತದೆ. ಸಂವಿಧಾನ ಸೂಚಿಸಿದ ಸಮಾನತೆ ಮತ್ತು ನ್ಯಾಯೋಚಿತ ಮಾನದಂಡಗಳನ್ನು ಪೂರೈಸುವುದಿಲ್ಲ” ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ನಿವೇಶನಕ್ಕಾಗಿ ಠೇವಣಿ ಮಾಡಿರುವ ಸಂಪೂರ್ಣ ಮೊತ್ತದ ವಾಪಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಹಣ ವಾಪಸ್ ನೀಡುವ ಬಗ್ಗೆ ತೆಲಂಗಾಣ ಸರ್ಕಾರ ಪರಿಶೀಲಿಸಿ ಹಂಚಿಕೆ ಮಾಡಬೇಕಿದೆ.

ಸೊಸೈಟಿಗಳು ಮತ್ತು ಅದರ ಸದಸ್ಯರ ಪರವಾಗಿ ರಾಜ್ಯ ಸರ್ಕಾರ ಕಾರ್ಯಗತಗೊಳಿಸಿದ ಗುತ್ತಿಗೆ ಕರಾರುಗಳನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...