HomeUncategorizedಬುರುಡೆ ಜ್ಯೋತಿಷಿಗಳ ಖತರ್ನಾಕ್ ಸೂತ್ರ

ಬುರುಡೆ ಜ್ಯೋತಿಷಿಗಳ ಖತರ್ನಾಕ್ ಸೂತ್ರ

- Advertisement -
- Advertisement -

ಮನುಷ್ಯನಿಗೆ ಅನೂಹ್ಯವಾದ ಬ್ರಹ್ಮಾಂಡದ ಭಯ ಹಿಂದಿನಿಂದಲೂ ಇತ್ತು. ಆ ಹಿನ್ನೆಲೆಯಲ್ಲಿ ಆತ ಹಲವಾರು ದೇವರುಗಳನ್ನು, ಶಕ್ತಿಗಳನ್ನು ನಂಬುತ್ತಾ ಬಂದ. ಕಾಲಾನುಕ್ರಮದಲ್ಲಿ ಈ ದೇವರುಗಳಲ್ಲಿ ಬದಲಾವಣೆಗಳಾಗಿವೆ. ವೈದಿಕ ಧರ್ಮಕ್ಕೆ ಸಂಬಂಧಿಸಿ ಹೇಳುವುದಾದರೆ, ಋಗ್ವೇದದಲ್ಲಿ ಇಂದ್ರನೇ ಪರಮ ದೇವರಾಗಿದ್ದ. ನಂತರದಲ್ಲಿ ಹೊಸಹೊಸ ದೇವರುಗಳ ಆವಿಷ್ಕಾರಗಳಾಗಿವೆ. ಆವಿಷ್ಕಾರ ಇಂದಿಗೂ ಮುಂದುವರಿದಿದೆ. ಹಾಗೆಯೇ ಮನುಷ್ಯನ ಈ ಭಯವನ್ನೇ ಬಂಡವಾಳ ಮಾಡಿಕೊಂಡು ಲಾಭ ಮಾಡಿಕೊಳ್ಳುವವರ ಸಂತಾನ ಇಂದೂ ಎಲ್ಲಾ ಧರ್ಮಗಳಲ್ಲಿ ಹುಲುಸಾಗಿ ಜೀವಿಸುತ್ತಿದೆ.
ಅದರೆ, ಕೆಲವು ಉಜ್ವಲ ಮೆದುಳುಗಳು ಈ ರಹಸ್ಯವನ್ನು ಭೇದಿಸುವ ಕೆಲಸವನ್ನು ಸಾವಿರಾರು ವರ್ಷಗಳಿಂದ ಮಾಡಿವೆ. ಫಲವಾಗಿ ಖಗೋಳಶಾಸ್ತ್ರ ಹುಟ್ಟಿಕೊಂಡಿತು. ಅದು ಭೂಮಿಯ ಸುತ್ತ ತಿರುಗುತ್ತಿದ್ದ ಸೂರ್ಯನನ್ನು ನಿಲ್ಲಿಸಿ ಭೂಮಿಯನ್ನೇ ಸೂರ್ಯನ ಸುತ್ತ ತಿರುಗಿಸುವ ಧರ್ಮದ್ರೋಹ ಮಾಡಿತು! ಚಪ್ಪಟೆಯಾಗಿದ್ದ ಭೂಮಿಯನ್ನು ಉಂಡೆಕಟ್ಟಿ ಗುಂಡಗೂ ಮಾಡಿತು! ಆದರೆ ಆ ಮಹಾನ್ ಶಾಸ್ತ್ರದ ಹೆಸರಿನಲ್ಲಿ ಜನರನ್ನು ಬೆದರಿಸಿ ಹೊಟ್ಟೆಹೊರೆಯುವ ವರ್ಗವು ಗ್ರಹ, ನಕ್ಷತ್ರ, ದೇವರಿಗೆ ಮತ್ತು ಮನುಷ್ಯನ ಭವಿಷ್ಯಕ್ಕೆ ಸಂಬಂಧ ಕಲ್ಪಿಸಿ, ಒಂದು ಕಾಲ್ಪನಿಕ ಬುರುಡೆ ಶಾಸ್ತ್ರವನ್ನು ಸೃಷ್ಟಿಸಿತು. ಅದರ ಹೆಸರೇ ಜ್ಯೋತಿಷ್ಯ ‘ಶಾಸ್ತ್ರ’!
ಭಾರತವೂ ಖಗೋಳ ಶಾಸ್ತ್ರದಲ್ಲಿ ಮುಂಚೂಣಿಯಲ್ಲಿತ್ತು. ನಮ್ಮಲ್ಲಿ ಯಾಜ್ಞವಲ್ಕ್ಯ (ಸುಮಾರು ಕ್ರಿ.ಪೂ. 1800), ಲಗಧ (ಸುಮಾರು ಕ್ರಿ.ಪೂ. 1350), ಆರ್ಯಭಟ (ಕ್ರಿ.ಶ. 500), ಬ್ರಹ್ಮಗುಪ್ತ (ಕ್ರಿ.ಶ. 598-668), ಭಾಸ್ಕರ (ಕ್ರಿ.ಶ. 1114-1185) ಮುಂತಾದ ಮಹಾನ್ ಖಗೋಳಶಾಸ್ತ್ರಜ್ಞರು ಆಗಿಹೋಗಿದ್ದಾರೆ. ನಮ್ಮ ಪೂರ್ವಜರು ಗ್ರಹಗತಿಗಳನ್ನು, ಗ್ರಹಣಗಳನ್ನು ನಿಖರವಾಗಿ ಲೆಕ್ಕಹಾಕಲು ಕಲಿತಿದ್ದರು. ಗ್ರಹಗತಿಗಳ ಹೆಸರಿನಲ್ಲಿ ಇಂದಿಗೂ ಚಲಾವಣೆಯಲ್ಲಿರುವ ಪುರೋಹಿತಶಾಹಿಗೆ ಇಂತಹ ಮಹಾನುಭಾವರ ಒಂದು ಕೂದಲಿನ ಯೋಗ್ಯತೆಯೂ ಇಲ್ಲ. ಆದರೆ ಆ ಮಹಾನ್ ವಿಜ್ಞಾನಿಗಳನ್ನು ತಮ್ಮದೇ ಪುರಾತನ ಪರಂಪರೆಯವರೆಂದು ಸುಳ್ಳು ಕ್ಲೈಮ್ ಮಾಡಿಕೊಂಡಿದ್ದು ಮಾತ್ರ ಇವರ ವಿಶೇಷ ಪ್ರತಿಭೆ. ಹೀಗೆ ಸುಳ್ಳುಗಳ ಮೇಲೆ ಸುಳ್ಳು ಹೇಳುತ್ತಲೇ ದೇವರು, ಧರ್ಮಗಳ ಹೆಸರಿನಲ್ಲಿ ಮೂಢನಂಬಿಕೆಗಳನ್ನು ಹರಡಿ ಜನರನ್ನು ಸುಲಿಯುತ್ತಿದ್ದಾರೆ. ನಮ್ಮ ಮುಖ್ಯವಾಹಿನಿಯ ಮಾಧ್ಯಮಗಳು ಅವರ ಪಾಲುದಾರರಾಗಿ ಕೆಲಸ ಮಾಡುತ್ತಿರುವುದು ದುರಂತ!
ಮೇಲೆ ಹೆಸರಿಸಿದ ಮಹಾನುಭಾವರು ಮತ್ತು ಅವರ ಅಪ್ರತಿಮ ಆವಿಷ್ಕಾರಗಳಿಗೆ ವಂದಿಸುತ್ತಲೇ, ಈ ನಕಲಿಗಳ ಮಹಾನ್ ಆವಿಷ್ಕಾರಗಳನ್ನು ನೋಡೋಣ.
ಮನುಷ್ಯ ಹುಟ್ಟುತ್ತಲೇ ಈ ನಕಲಿಗಳು ಆತನನ್ನು ಸುತ್ತಿಕೊಳ್ಳುತ್ತವೆ. ಒಂದು ಶತಮಾನ ಹಿಂದಕ್ಕೆ ಹೋದರೆ, ಮಕ್ಕಳು ಹುಟ್ಟುತ್ತಲೇ ಜನರು ಪುರೋಹಿತರ ಬಳಿ ಹೆಸರಿಗಾಗಿ ಓಡುತ್ತಿದ್ದರು. ನಕ್ಷತ್ರಕ್ಕೆ ಅನುಗುಣವಾಗಿ ಬರುವ ಕೆ, ಕು, ಚು, ಚಿ… ಇತ್ಯಾದಿಯಾಗಿ ಪಂಚಾಂಗದಲ್ಲಿ ಇರುವ ಹೆಸರೇ ಇಡಲಾಗದ ಅಕ್ಷರಗಳಿಗೆ ಪುರೋಹಿತರು ಒಂದು ಹೆಸರು ಹೊಸೆದು ಸೂಚಿಸುತ್ತಿದ್ದರು. ಅದರೆ, ಹೆಚ್ಚಿನವರಿಗೆ ಹುಟ್ಟಿದ ದಿನಾಂಕ, ಜಾತಕ ಇತ್ಯಾದಿ ಬರೆದುಕೊಡುತ್ತಿರಲಿಲ್ಲ. ಅನಕ್ಷರಸ್ಥರಿಗೆ ಅವೆಲ್ಲಾ ಯಾಕೆ ಅಲ್ಲವೆ?! ಬೇಕಾದರೆ ಮುಂದೆ ಅವರು ತಮ್ಮ ಬಳಿಯೇ ಬರಬೇಕಲ್ಲ! ಇವುಗಳ ಹಿಂದಿರುವ ರಾಜಕೀಯ ಮತ್ತು ವ್ಯಾಪಾರಿ ಬುದ್ಧಿಯ ಆವಿಷ್ಕಾರಗಳನ್ನು ಗಮನಿಸೋಣ.
ಹೆಸರು ಹೇಳಿದ ಕೂಡಲೇ ವ್ಯಕ್ತಿ ಮುಂದೊಮ್ಮೆ ಪೂಜೆ, ದೋಷ, ಪರಿಹಾರ ಎಂದು ಬಂದಾಗ ಮೇಲ್ಜಾತಿಯವನೋ, ಕೆಳಜಾತಿಯವನೋ, ಮೇಲ್ಜಾತಿಯವನಾಗಿದ್ದರೆ, ಸ್ಥಿತಿವಂತನೋ ಬಡವನೋ, ಅಥವಾ ದಲಿತ ಸಮುದಾಯದವನೋ ಎಂದು ಗೊತ್ತಾಗಬೇಕು. ಇಲ್ಲಿ ಪುಲ್ಲಿಂಗ ಮಾತ್ರ ಬಳಸಿರುವುದು ಉದ್ದೇಶಪೂರ್ವಕವಾಗಿಯೇ! ಪೂಜೆಗಳಲ್ಲಿ ಹೆಣ್ಣುಗಳಿಗೆ ಸ್ಥಾನ ಇಲ್ಲದುದರಿಂದ ಅವರ ಹೆಸರುಗಳಿಗೆ ಹೆಚ್ಚು ಮಹತ್ವವಿರಲಿಲ್ಲ. ಅಪ್ಪ ಇದ್ದಲ್ಲಿ ಅಮ್ಮ ಮಾಡಿದರೆ ಆಯಿತು.
ಕರಾವಳಿಯ ಮಟ್ಟಿಗೆ ಹೇಳುವುದಾದರೆ, ಬಡ ಶೂದ್ರರಾದರೆ ಚೊಂಗ, ಪೋಂಕ, ಮುದರ ಎಂಬ ಹೆಸರುಗಳು; ಸ್ವಲ್ಪ ಸ್ಥಿತಿವಂತ ಶೂದ್ರರಾದರೆ ಚೆನ್ನಪ್ಪ, ಸಂಕಪ್ಪ, ವಾಸಪ್ಪ ಇತ್ಯಾದಿ ಹೆಸರುಗಳು! ಅವೇ ಹೆಸರುಗಳು ಬ್ರಾಹ್ಮಣರಿಗಾದರೆ ಚೆನ್ನಕೇಶವ, ಶಂಕರನಾರಾಯಣ, ವಾಸುದೇವ ಮುಂತಾದ ಘನ ಹೆಸರುಗಳಾಗುತ್ತಿದ್ದವು! ಈ ಶೂದ್ರರು ಸಾಕಷ್ಟು ಸ್ಥಿತಿವಂತರಾಗಿದ್ದರೆ, ಅಥವಾ ವಿದ್ಯಾವಂತರಾಗಿದ್ದರೆ ಅಶೋಕ, ಲಕ್ಷಣ, ದೇವದಾಸ ಇತ್ಯಾದಿ ಹೆಸರುಗಳು ಪ್ರಾಪ್ತವಾಗುತ್ತಿದ್ದವು.
ಅದರೆ, ಸಮಾಜದ ಕೆಳಸ್ತರದ ಶೋಷಿತ ಜನಾಂಗಗಳ ಮಕ್ಕಳಿಗೆ ಹೆಸರಿಡುವಾಗ ಪಂಚಾಂಗ ನೋಡುವ ಕಷ್ಟವನ್ನೂ ಯಾರೂ ತೆಗೆದುಕೊಳ್ಳುತ್ತಿರಲಿಲ್ಲ! ವಾರದ ದಿನಗಳ ಹೆಸರುಗಳಿಗೆ ಅನುಗುಣವಾಗಿ ಐತಾರ ಅಂದರೆ ಆದಿತ್ಯವಾರ ಹುಟ್ಟಿದವರಿಗೆ ಐತಾರ, ಸೋಮಾರದವರಿಗೆ ಚೋಮ, ಅಂಗಾರೆಯವರಿಗೆ ಅಂಗಾರ, ಬುದಾರದವರಿಗೆ ಬೂದ, ಗುರುವಾರದವರಿಗೆ ಗುರುವ, ಸುಕ್ರಾರದವರಿಗೆ ತುಕ್ರ, ಸನಿವಾರದವರಿಗೆ ತನಿಯ ಮುಂತಾದ ಹೆಸರುಗಳನ್ನು ಬಿಸಾಕಲಾಗುತ್ತಿತ್ತು! ಹೆಣ್ಣು ಮಕ್ಕಳಿಗೆ ಹೆಸರಿಡಲೂ ಒದ್ದಾಡಬೇಕಾಗಿರಲಿಲ್ಲ! ಐತನನ್ನು ಐತೆ, ಚೋಮನನ್ನು ಚೋಮು ಮಾಡಿದರೆ ಮುಗಿಯಿತು! ಇದೇ ಹೆಸರುಗಳಿಗೆ ಎಂದಿಗೂ ಪೂಜೆ ಮಾಡಲು ಬರದ ದಂಡಪಿಂಡ ಸೂದ್ರಮುಂಡೇವಕ್ಕೆ ಇದೇ ಹೆಸರುಗಳನ್ನು ಅಪ್ಪ ಸೇರಿಸಿ ಇಟ್ಟರಾಯಿತು!
ಪುರೋಹಿತ ಕಂ ಜ್ಯೋತಿಷಿಗಳ ಲೆಕ್ಕಾಚಾರವೆಂದರೆ, ಈ ಶೂದ್ರರು ಜೀವನದಲ್ಲಿ ಮುಂದೆ ಒಂದಲ್ಲ ಒಂದು ದಿನ ತಮ್ಮ ಬಳಿಗೆ ಬರಲೇಬೇಕು. ಬರದಿದ್ದರೆ ಬರುವಂತೆ ಮಾಡುವ ಆವಿಷ್ಕಾರಗಳಿವೆ! ಪೂಜೆ ಮಾಡಿಸುವಾಗ ಹುಟ್ಟಿದ ನಕ್ಷತ್ರಗಳ ಹೆಸರು ಹೇಳಲೇಬೇಕು. ಇದೊಂದು ಯುನೀಕ್ ಐಡೆಂಟಿಫಿಕೇಶನ್ ನಂಬರ್ ಇದ್ದಂತೆ! ಇಲ್ಲದಿದ್ದಲ್ಲಿ ಸಂಬಂಧಪಟ್ಟ ದೇವರುಗಳು ಅರ್ಜಿಗಳನ್ನು ಸ್ವೀಕರಿಸುವುದಿಲ್ಲ! ದಡ್ಡ ಶೂದ್ರರಿಗೆ ಅದು ನೆನಪಿಡುವುದು ಬಿಡಿ, ಉಚ್ಛರಿಸಲೂ ಬರುವುದಿಲ್ಲ! ಆಧಾರ್ ಕಾರ್ಡ್ ಮರೆತಂತೆ ಮರೆತು ಬಿಡುತ್ತಾರೆ. ಅದಕ್ಕೆ ಅವರನ್ನು ಈ ಕಷ್ಟದಿಂದ ಪಾರುಮಾಡಲು ಈ ಮಹಾನ್ ಆವಿಷ್ಕಾರ ಮಾಡಲಾಗಿತ್ತು! ಒಬ್ಬ ಮನುಷ್ಯ ಎಷ್ಟೇ ದಡ್ಡನಾಗಿದ್ದರೂ ಸ್ವಂತ ಮತ್ತು ತನ್ನ ಹೆಂಡತಿ ಮಕ್ಕಳ ಹೆಸರನ್ನು ಮರೆತುಬಿಡುವುದು ಸಾಧ್ಯವಿಲ್ಲವಾದುದರಿಂದ ಹೆಸರು ಹೇಳಿದರೆ ಸಾಕು ಭಟ್ಟರು ಕಂಪ್ಯೂಟರಿಗಿಂತ ಬೇಗ ನಕ್ಷತ್ರವನ್ನು ಕಂಡುಹಿಡಿದುಬಿಡುತ್ತಾರೆ! ಆದುದರಿಂದ ಸ್ವಲ್ಪ ಮಂದ ಭಟ್ಟರಿಗೆ ಅನುಕೂಲವಾಗಲೆಂದು ಹುಡುಕಾಟದ ವ್ಯಾಪ್ತಿ (ಸರ್ಚ್ ಫೀಲ್ಡ್) ಕಿರಿದುಗೊಳಿಸಲಾಗಿತ್ತು. ಹೆಸರುಗಳ ಸಂಖ್ಯೆ ಕಡಿಮೆ ಇದ್ದಷ್ಟು ಅವರ ಮಸ್ತಿಷ್ಕದ ಭಾರ ಕಡಿಮೆಯಾಗುತ್ತಿತ್ತು! ಆದುದರಿಂದಲೇ ಊರಿನಲ್ಲಿ ಹತ್ತಿಪ್ಪತ್ತು ಸಂಕಪ್ಪ ವೆಂಕಪ್ಪರು ಕಂಡುಬರುತ್ತಿದ್ದು, ಗುರುತಿಗಾಗಿ ಅವರಿಗೆ ಕುಂಟ, ಪೆದ್ದ, ದೋಂಟಿ, ಕಳ್ಳ ಇತ್ಯಾದಿ ಅಡ್ಡ ಹೆಸರುಗಳು ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜೀವನದುದ್ದಕ್ಕೂ ಅಂಟಿಕೊಳ್ಳುತ್ತಿದ್ದವು!
ಇಂತಹ ಒಂದು ಸರಳವಾದ, ‘ವೈಜ್ಞಾನಿಕ’ವಾದ ‘ಹ್ಯೂಮನ್ ಕಾಸ್ಟ್ ಎಂಡ್ ಸ್ಟೇಟಸ್ ರೆಕಗ್ನಿಶನ್ ಸಿಸ್ಟಮ್’ ಭಾರತೀಯ ಪುರೋಹಿತಶಾಹಿಗಳ ಮಹಾನ್ ಆವಿಷ್ಕಾರಗಳಲ್ಲಿ ಒಂದು! ಪ್ರಪಂಚದಲ್ಲಿ ಯಾರೂ ಇಂಥ ಸಾಧನೆ ಮಾಡಿಲ್ಲ!
ಇದರಲ್ಲೂ ಇನ್ನೊಂದು ವ್ಯವಸ್ಥೆಯನ್ನು ಅಳವಡಿಸಲಾಗಿತ್ತು! ಈ ಆವಿಷ್ಕಾರದ ಹೆಸರೇ ‘ಹ್ಯೂಮನ್ ಫಿಲ್ತ್ ಸೆಪರೇಷನ್ ಸಿಸ್ಟಮ್’ ಅಂತ! ಇದನ್ನು ವಿದೇಶಗಳಲ್ಲಿ ಬಣ್ಣ ಮತ್ತು ಜನಾಂಗೀಯ ನೆಲೆಗಳಲ್ಲಿ ಮಾಡುತ್ತಿದ್ದರೆ ನಮ್ಮ ಪುರೋಹಿತರು ಅದಕ್ಕಿಂತಲೂ ಹಿಂದೆಯೇ ಅದಕ್ಕಿಂತಲೂ ಸೂಕ್ಷ್ಮವಾದ ಜಾತಿ ಆಧರಿತ ವೈಜ್ಞಾನಿಕ ವ್ಯವಸ್ಥೆ ಕಂಡುಹಿಡಿದಿದ್ದರು! ಅದುವೇ ದಲಿತರಲ್ಲಿ ದಲಿತರನ್ನು ಹೆಸರಿನಿಂದಲೇ ಗುರುತಿಸಿ ಪ್ರತ್ಯೇಕಿಸುವ, ದೂರವಿಡುವ ವ್ಯವಸ್ಥೆಯಿದು!
ಇಂತಹ ಹುಲು ಮಾನವರನ್ನು ಮಾನವರೆಂದೇ ಪರಿಗಣಿಸಬಾರದು ಎಂದು ಅಂತವರಿಗೆ ಪಿಜಿನ (ಇರುವೆ) ಬೊಗ್ಗು, ಬೊಗುರ ಮತ್ತು ಬೊಗ್ಗಿ (ನಾಯಿಗಳು), ನಕ್ಕುರ (ಎರೆಹುಳ), ಕಜವು (ಕಸ), ನಾದೆಲ (ಕೊಳಕು ವಾಸನೆಯವ), ಸೀಂಕ್ರ (ಕಸಬರಿಕೆಯ ಕಡ್ಡಿ), ಮೈಪು (ಕಸಬರಿಕೆ) ಮುಂತಾದ ಪವಿತ್ರ ಹೆಸರುಗಳನ್ನು ದಯಪಾಲಿಸಲಾಗುತ್ತಿತ್ತು! ಇವರಲ್ಲಿ ಇಂದು ನಕ್ಕುರ (ಎರೆಹುಳ) ಮಾತ್ರ ಮೇಲ್ಜಾತಿಯವರ ಮನಸ್ಸಿನಲ್ಲಿ ಸಾವಯವ ಕೃಷಿಯ ಹೆಸರಿನಲ್ಲಿ ಸ್ವಲ್ಪ ಸ್ಥಾನಮಾನ ಪಡೆದಿದ್ದಾನೆ!
ಕಾಲ ಬದಲಾದಂತೆ ಸಾಫ್ಟ್‍ವೇರ್ ಅಪ್‍ಗ್ರೇಡ್ ಆಗುತ್ತಲೇ ಇದೆ. ಮೊದಲಿಗೆ ಮೇಲ್ಜಾತಿಯ ಹೆಸರುಗಳು ಕೆಳಕ್ಕೂ ಇಳಿಯಲಾರಂಭಿಸಿದವು. ದಲಿತರಲ್ಲಿಯೂ ಶಂಕರ, ರಾಮರು ಕಾಣಿಸಿಕೊಳ್ಳಲಾರಂಭಿಸಿದರು. ಎಲ್ಲರಿಗೂ ಅನುಕೂಲವಾಗಲಿ ಎಂದು ಪಂಚಾಂಗಗಳಲ್ಲಿಯೇ ನಕ್ಷತ್ರಗಳ ಮುಂದೆ ಹೆಸರುಗಳ ಆರಂಭದ ಅಕ್ಷರಗಳನ್ನು ಕೊಡಲಾಯಿತು. ಆಧುನಿಕ ಹೆಸರುಗಳು ಬಂದಂತೆ ಜನರು ತಮ್ಮ ಹುಟ್ಟಿದ ನಕ್ಷತ್ರಗಳನ್ನು ನೆನಪಿಡಲು ಆರಂಭಿಸಿದುದರಿಂದ ದೊಡ್ಡ ಪ್ರಮಾದಗಳೇನೂ ಆಗುತ್ತಿಲ್ಲ. ಅರ್ಥಿಕ ನಷ್ಟವೂ ಆಗುತ್ತಿಲ್ಲ. ಜನರು ಅವರದ್ದೇ ಸಿಸ್ಟಮ್ ಕಂಡುಹಿಡಿದಿದ್ದಾರೆ. ಹೆಚ್ಚಿನವರು ವಾಡಿಕೆ ಹೆಸರು, ಜಾತಕದ ಹೆಸರು ಎಂದು ಎರಡೆರಡು ಹೆಸರು ಇಟ್ಟುಕೊಂಡಿರುತ್ತಾರೆ!
ಆರ್ಥಿಕ ನಷ್ಟ ಇಲ್ಲ ಯಾಕೆಂದರೆ, ಪುರೋಹಿತರು ಎಂತೆಂತಹಾ ಮಹಾನ್ ಆವಿಷ್ಕಾರಗಳನ್ನು ಮಾಡಿದ್ದಾರೆಂದರೆ ಒಂದೊಂದೂ ಲಕ್ಷಗಟ್ಟಲೆ ವರಮಾನ ತರುತ್ತವೆ. ಹೀಗೆ ಲಕ್ಷಗಟ್ಟಲೆ ಸಂಪಾದನೆಯ ಹೊಸಹೊಸ ಕ್ರಿಯಾಕರ್ಮಗಳ ನಡುವೆ ಜುಜುಬಿ ಚಿಲ್ಲರೆ ದಕ್ಷಿಣೆಯ ನಾಮಕರಣ ಮಾಡುತ್ತಾ ಕೂರಲು ಪುರುಸೊತ್ತಾದರೂ ಯಾರಿಗಿದೆ!? ಇನ್ನಷ್ಟು ಇಂತಹ ಮಹಾನ್ ವೈಜ್ಞಾನಿಕ ಆವಿಷ್ಕಾರಗಳನ್ನು ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...