Homeಅಂತರಾಷ್ಟ್ರೀಯಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

- Advertisement -
- Advertisement -

ಟೆಲ್‌ ಅವಿವ್‌: ಇಸ್ರೇಲ್‌-ಲೆಬನಾನ್‌ ನ ಹಿಜ್ಬುಲ್ಲಾಗಳ ಯುದ್ಧದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇಸ್ರೇಲ್‌ನ ಭದ್ರತಾ ಸಚಿವಾಲಯವು ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ  ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 7:30 ರಿಂದ ಜಾರಿಗೆ ಬರಲಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದನ್ನು ಔಪಚಾರಿಕವಾಗಿ ಘೋಷಿಸಿದ್ದಾರೆ. ಇಸ್ರೇಲ್ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಮಧ್ಯಪ್ರಾಚ್ಯದ ಮುಖವನ್ನು ಬದಲಾಯಿಸುತ್ತಿದ್ದೇವೆ. ಉತ್ತಮ ಒಪ್ಪಂದವು ಕಾರ್ಯಗತಗೊಳಿಸಬಹುದಾದವುಗಳಲ್ಲಿ ಒಂದಾಗಿದೆ. ಕದನ ವಿರಾಮಕ್ಕೆ ಪ್ರಾಥಮಿಕ ಕಾರಣವೆಂದರೆ ಹಮಾಸ್ ಅನ್ನು ಪ್ರತ್ಯೇಕಿಸುವುದು ಮತ್ತು ಒತ್ತೆಯಾಳುಗಳನ್ನು ಹಿಂದಿರುಗಿಸುವುದು ಎಂದು ನೆತನ್ಯಾಹು ಹೇಳಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಸಂಜೆ ಟೆಲ್ ಅವಿವ್‌ನಲ್ಲಿ ತಮ್ಮ ವಾರ್ ಕ್ಯಾಬಿನೆಟ್ ಸಭೆಯನ್ನು ಕರೆದಿದ್ದರು. ಇದರಲ್ಲಿ ಲೆಬನಾನಿನ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ಜೊತೆ 60 ದಿನಗಳ ಕದನ ವಿರಾಮದ ಕುರಿತು ಚರ್ಚಿಸಲಾಯಿತು. ಇಸ್ರೇಲಿ ವಾರ್ ಕ್ಯಾಬಿನೆಟ್, ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಜೊತೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಅಮೆರಿಕದ ಸುದ್ದಿ ವೆಬ್‌ಸೈಟ್ ದಿ ಹಿಲ್ ವರದಿ ಮಾಡಿದೆ.  ಈ ಕದನ ವಿರಾಮ ಇಂದು ಬೆಳಿಗ್ಗೆ ಪ್ರಾರಂಭವಾಗಲಿದೆ. ಇದಕ್ಕೂ ಮೊದಲು, ಲೆಬನಾನಿನ ಅಲ್ ಜದೀದ್ ವರದಿಯ ಪ್ರಕಾರ, ಅಮೆರಿಕ ಮತ್ತು ಫ್ರಾನ್ಸ್ ರಾತ್ರಿ 10 ಗಂಟೆಗೆ (ಸ್ಥಳೀಯ ಕಾಲಮಾನ) ಕದನ ವಿರಾಮವನ್ನು ಘೋಷಿಸುತ್ತವೆ ಮತ್ತು ಈ ಕದನ ವಿರಾಮ ಒಪ್ಪಂದವು ಬೆಳಿಗ್ಗೆ 10 ಗಂಟೆಗೆ ಜಾರಿಗೆ ಬರಲಿದೆ ಎಂದು ವರದಿ ಮಾಡಿತ್ತು.

ಕದನವಿರಾಮ ಘೋಷಣೆಯಾದರೆ ಅದನ್ನು ಜಾರಿಗೊಳಿಸಲು 60 ದಿನಗಳವರೆಗೆ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಹಿಬ್ಬುಲ್ಲಾದ ಹಿಡಿತದಲ್ಲಿರುವ ಲೆಬನಾನ್‌ನ ದಕ್ಷಿಣ ಭಾಗದಲ್ಲಿ ನಿಯೋಜನೆಗೊಂಡಿರುವ ಸೇನೆಯನ್ನು ಇಸ್ರೇಲ್ ವಾಪಸ್ ಕರೆಸಿಕೊಳ್ಳಬೇಕು. ಜೊತೆಗೆ, ಈ ಪ್ರದೇಶದಲ್ಲಿ ಲೆಬನಾನ್ ತನ್ನ ಸೈನ್ಯ ನಿಯೋಜನೆಗೊಳ್ಳಬೇಕು. ಜೊತೆಗೆ, ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯೂ ಇರಲಿದೆ ಎನ್ನಲಾಗಿದೆ.

ಕದನವಿರಾಮ ಕುರಿತು ನಿಗಾ ಇರಿಸಲು ಅಮೆರಿಕ ಅಧ್ಯಕ್ಷತೆಯ ಅಂತರರಾಷ್ಟ್ರೀಯ ಸಮಿತಿಯೊಂದನ್ನು ರಚಿಸಲಾಗುತ್ತದೆ ಎಂದು ಹೇಳಲಾಗಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್ ದಾಳಿಗೆ ಲೆಬನಾನ್‌ 3,750 ಮಂದಿ ಮೃತಪಟ್ಟಿದ್ದಾರೆ ಹಾಗೂ 10 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ...ಪಾಕಿಸ್ತಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ : 6 ಮಂದಿ ಸಾವು, ಕಂಡಲ್ಲಿ ಗುಂಡು ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...