Homeಕರ್ನಾಟಕಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ...

ಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ…

- Advertisement -
- Advertisement -

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿತ್ಯವೂ ಸೈಬರ್ ಸೆಂಟರ್ ಮತ್ತು ಶಾಲೆಗಳಿಗೆ ತಿರುಗುತ್ತಲೇ ಇದ್ದರು.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೂಡ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸುವಂತೆ ಸಮಯವನ್ನೂ ನೀಡಿತ್ತು. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಪ್ರತಿದಿನ ಎರಡ್ಮೂರು ಬಾರಿಯಾದರೂ ಸೈಬರ್ ಸೆಂಟರ್ ಮತ್ತು ಶಾಲೆಗಳಲ್ಲಿ ವಿಚಾರಿಸುತ್ತಲೇ ಇದ್ದರು. ಕೊನೆ ಗಳಿಗೆಯಲ್ಲಿ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೇ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತಕುಮಾರ್ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ ಎಂಬ ಆದೇಶ ನೀಡಿರುವುದು ಪೋಷಕರನ್ನು ಕೆರಳುವಂತೆ ಮಾಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಬರುತ್ತಿದೆ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿ ನೆರವು ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನಕ್ಕೂ ಕತ್ತರಿ ಹಾಕಿದೆ. ತಮ್ಮ ಮಗ/ಳ ಭವಿಷ್ಯಕ್ಕೆ ಸ್ವಲ್ಪ ಮಟ್ಟಿನ ದಾರಿಯಾಗಬಹುದು ಎಂಬ ಪೋಷಕರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ. ಆರಂಭದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಅವಧಿ ನೀಡಿ ಈಗ ದಿಢೀರ್ ರದ್ದುಪಡಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

ವಿದ್ಯಾರ್ಥಿಗಳ ಪೋಷಕರು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಭರ್ತಿ ಮಾಡಲು ಹೋದರೆ ಅಥವಾ ಭರ್ತಿ ಮಾಡಿಸಲು ಹೋದರೆ ಎಸ್.ಎಸ್.ಪಿ ಕರ್ನಾಟಕ ಡಾಟ್ ಕಾಮ್ ಪೋರ್ಟಲ್ ತೆರೆದುಕೊಳ್ಳುತ್ತಿತ್ತು. ವಿದ್ಯಾರ್ಥಿ ಲಾಗಿನ್ ಇಲ್ಲವೆ ಖಾತೆಯನ್ನು ಸೃಜಿಸಿ ಖಾತೆ ಓಪನ್ ಮಾಡಲು ಹೋದರೆ ವಿದ್ಯಾರ್ಥಿಗಳ ಮಾಹಿತಿಯೇ ಸ್ಕ್ರೀನ್ ಮೇಲೆ ಬರುತ್ತಿರಲಿಲ್ಲ. ಯಾಕೆಂದರೆ ಅರ್ಜಿಯನ್ನು ಬಿಟ್ಟಿದ್ದರೆ ತಾನೆ ಅದು ಸ್ಕ್ರೀನ್ ಮೇಲೆ ವಿದ್ಯಾರ್ಥಿಯ ಮಾಹಿತಿ ಬರುವುದು.. ಅದು ಮಾಹಿತಿ ಬರುತ್ತಿರಲಿಲ್ಲ. ಆದರೆ 2018-19ನೇ ಸಾಲಿನ ವಿದ್ಯಾರ್ಥಿ ವೇತನ ಪಡೆದಿರುವುದನ್ನು ಮಾತ್ರ ತೋರಿಸುತ್ತಿತ್ತು.

ಎಸ್.ಎಸ್.ಪಿಯಡಿಯಲ್ಲಿ ಮೆಟ್ರಿಕ್ ಪೂರ್ವ ಅಂದರೆ 1 ರಿಂದ 10ನೇ ತರಗತಿ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಈಗ ಅದಕ್ಕೂ ಕುತ್ತು ಬಂದಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗಿರುವ ವಿಷಯವನ್ನೇ ಅಪ್ ಡೇಟ್ ಮಾಡಿರಲಿಲ್ಲ. ಯಾವುದೇ ವಿದ್ಯಾರ್ಥಿಯ ಮಾಹಿತಿ ಹುಡುಕಿದರೆ ವಿದ್ಯಾರ್ಥಿಯ ಹಿಂದಿನ ವರ್ಷದ ಮಾಹಿತಿ ಮತ್ತು ಪಡೆದಿರುವ ಹಣ ಮಾತ್ರ ತೋರಿಸುತ್ತಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಅಪ್ ಡೇಟ್ ಮಾಡಬೇಕಾಗಿದ್ದ ಇಲಾಖೆ ಮೌನವಹಿಸಿತ್ತು. ಇಲಾಖೆಗೆ ಮೊದಲೇ ಈ ಬಾರಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುವುದಿಲ್ಲ ಎಂಬುದು ಗೊತ್ತಿತ್ತು. ಹೀಗಾಗಿ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮುಚ್ಚಿಟ್ಟು ಅರ್ಜಿ ಮಾತ್ರ ಆಹ್ವಾನಿಸುವ ನಾಟಕ ಮಾಡಿತು ಇಲಾಖೆ. ಇಲಾಖೆಯ ನಾಟಕದ ಪಾತ್ರಧಾರಿಗಳು ಕೊನೆಯವರೆಗೂ ರಂಗಕ್ಕೆ ಬರಲೇ ಇಲ್ಲ. ಆದರೆ ನಾಟಕ ಮಾತ್ರ ಮುಕ್ತಾಯವಾಗಿತ್ತು. ಹಣ ಬರುತ್ತದೆ. ವಿದ್ಯಾರ್ಥಿಗೆ ಯಾವುದಾದರೂ ಉಪಯೋಗಕ್ಕೆ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರನ್ನು ವಾರದ ಹಿಂದೆಯೇ ಸಂಪರ್ಕಿಸಲಾಗಿತ್ತು. ವಿದ್ಯಾರ್ಥಿಯ ಮಾಹಿತಿ ಅಪ್ ಡೇಟ್ ಆಗಿಲ್ಲ, ವಿದ್ಯಾರ್ಥಿಯ ಹೊಸ ಖಾತೆಯೂ ಸೃಜನೆಯಾಗುತ್ತಿಲ್ಲ. ವಿದ್ಯಾರ್ಥಿಯ ಲಾಗಿನ್ ಕೂಡ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರೆ ಅವರಿಂದ ಬಂದ ಉತ್ತರ ‘ಇನ್ನು ಎರಡು ಮೂರು ದಿನ ಕಾಯಿರಿ. ಅರ್ಜಿಯನ್ನು ಅಪ್ ಲೋಡ್ ಮಾಡಿಲ್ಲ’ ಎಂದು ಭರವಸೆಯನ್ನೂ ನೀಡಿದ್ದರು. ಆದರೆ ಆ ಅಧಿಕಾರಿ ಸುಳ್ಳು ಹೇಳಿದ್ದಾರೆ ಎಂಬುದು ಎರಡು ವಾರದ ನಂತರ ಈಗ ಗೊತ್ತಾಗಿದೆ. ಅಧಿಕಾರಿಗಳು ಹೀಗೆ ಮಾಹಿತಿ ಮುಚ್ಚಿಡುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಿಗೆ ವಂಚನೆ ಮಾಡಿದ್ದಾರೆ. ಮೊದಲೇ ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ಪೋಷಕರು ಶಾಲೆ, ಸೈಬರ್ ಸೆಂಟರ್ ಅಲೆಯುವುದು ತಪ್ಪುತ್ತಿತ್ತು. ಹೀಗೆ ದಿಢೀರ್ ವಿದ್ಯಾರ್ಥಿ ವೇತನ ರದ್ದುಪಡಿಸಲಾಗಿದೆ ಎಂದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ನೂರು ದಿನಗಳನ್ನು ಪೂರೈಸಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಿಂದುಳಿದ ವಿದ್ಯಾರ್ಥಿಗಳಿಗೆ  ದ್ರೋಹ ಎಸಗಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಿದೆ. ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿದರೆ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ. 1 ರಿಂದ 10 ತರಗತಿಯವರೆಗಿನ ಲಕ್ಷಾಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾಗುತ್ತಾರೆ. ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಇಲಾಖೆ ದ್ರೋಹ ಬಗೆದಿದೆ. ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ವಿದ್ಯಾರ್ಥಿ ವೇತನ ನಿಲ್ಲಿಸುವ ಮೂಲಕ ಸರ್ಕಾರ ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ವಿದ್ಯಾರ್ಥಿ ವೇತನ ನೀಡದಿದ್ದರೆ ಹೋರಾಟ ಸಂಘಟಿಸುತ್ತೇವೆ. ಸೋಮವಾರ ಇಲ್ಲವೇ ಮಂಗಳವಾರ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಡುತ್ತೇವೆ ಎನ್ನುತ್ತಾರೆ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯಾಧ್ಯಕ್ಷ ಗುರುರಾಜ್ ದೇಸಾಯಿ.

ಹಿಂದುಳಿದ ವರ್ಗಗಳ ಅದೆಷ್ಟೋ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನದ ಹಣದಿಂದ ಪುಸ್ತಕ, ಬಟ್ಟೆ ಮೊದಲಾದ ಸಾಮಗ್ರಿ ಗಳನ್ನು ಕೊಡಿಸುತ್ತಿದ್ದವು. ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ವೇತನ ಅನುಕೂಲವಾಗುತ್ತಿತ್ತು. ಆದರೆ ಈಗ ಸರ್ಕಾರ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿ ವೇತನ ನಿಲ್ಲಿಸಿರುವುದು ನಾಚಿಕೆಗೇಡಿನ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...