Homeಮುಖಪುಟಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ...

ಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ ಸೂಚನೆ

- Advertisement -
- Advertisement -

2021ರ ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರದ ಮಾಜಿ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮಿಶ್ರಾ ಅವರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು ಆರೋಪಗಳನ್ನು ನಿರಾಕರಿಸಿದ ನಂತರ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ಅಫಿಡವಿಟ್ ಸಲ್ಲಿಸುವಂತೆ ಕೇಳಿದ್ದಾರೆ.

ಆರಂಭದಲ್ಲಿ, ಪ್ರಕರಣದ ದೂರುದಾರರೊಬ್ಬರ ಪರವಾಗಿ ಹಾಜರಾದ ವಕೀಲರು ನ್ಯಾಯಾಲಯಕ್ಕೆ ಈ ಬಗ್ಗೆ ತಿಳಿಸಿದ್ದು, ಮಿಶ್ರಾ ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಅವರು ಅರ್ಜಿ ಸಲ್ಲಿಸಿದ್ದಾರೆ. ಮಿಶ್ರ ಪರ ವಕೀಲ ದವೆ ಈ ಆರೋಪಗಳನ್ನು ನಿರಾಕರಿಸಿದ್ದು, ಇದು “ಅಂತ್ಯವಿಲ್ಲದ ಪ್ರಕ್ರಿಯೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ನಾಲ್ಕು ವಾರಗಳಲ್ಲಿ ಆರೋಪಗಳನ್ನು ನಿರಾಕರಿಸಿ ಅಫಿಡವಿಟ್ ಸಲ್ಲಿಸುವಂತೆ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಹೇಳಿತು. ಜುಲೈ 22 ರಂದು, ನ್ಯಾಯಾಲಯವು ಆಶಿಶ್ ಮಿಶ್ರಾಗೆ ಜಾಮೀನು ನೀಡಿದ್ದು, ದೆಹಲಿ ಅಥವಾ ಲಕ್ನೋಗೆ ಅವರು ಸಂಚಾರ ಮಾಡದಂತೆ ನಿರ್ಬಂಧಿಸಿದೆ. ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಆಶಿಶ್ ಮಿಶ್ರಾ ಅವರ ಮಧ್ಯಂತರ ಜಾಮೀನನ್ನು ವಿಸ್ತರಿಸಿತ್ತು. ಲಖಿಂಪುರ ಖೇರಿ ಹಿಂಸಾಚಾರದ

ಕಳೆದ ವರ್ಷ ಜನವರಿ 25 ರಂದು, ಘೋರ ಘಟನೆಯ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ನಾಲ್ವರು ರೈತರಾದ ಗುರುವಿಂದರ್ ಸಿಂಗ್, ಕಮಲ್ಜೀತ್ ಸಿಂಗ್, ಗುರುಪ್ರೀತ್ ಸಿಂಗ್ ಮತ್ತು ವಿಚಿತ್ರಾ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಅಕ್ಟೋಬರ್ 3, 2021 ರಂದು ಸಂಭವಿಸಿದ ಈ ದುರ್ಘಟನೆಯಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಕೊಲ್ಲಲ್ಪಟ್ಟರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಹಿಂಸಾಚಾರ ಭುಗಿಲೆದ್ದಿತ್ತು.

ಸ್ಪೋರ್ಟ್ಸ್ ಯುಟಿಲಿಟಿ ವಾಹನದಿಂದ ನಾಲ್ವರು ರೈತರನ್ನು ಅಡಿಗೆ ಹಾಕಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ಉದ್ರಿಕ್ತಗೊಂಡ ರೈತರ ಗುಂಪು ಒಬ್ಬ ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತನೂ ಸಾವನ್ನಪ್ಪಿದ್ದಾರೆ.

ಕಳೆದ ವರ್ಷ ಜನವರಿ 25 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನಿನ ಅವಧಿಯಲ್ಲಿ ಆಶಿಶ್ ಮಿಶ್ರಾ ಉತ್ತರ ಪ್ರದೇಶ ಅಥವಾ ದೆಹಲಿಯಲ್ಲಿ ಉಳಿಯಬಾರದು ಎಂದು ಹೇಳಿತ್ತು. ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವುದನ್ನು ತಪ್ಪಿಸುವ ಉದ್ದೇಶದಿಂದ ಇದನ್ನು ಮಾಡಲಾಗಿತ್ತು. ನಂತರ, ಸೆಪ್ಟೆಂಬರ್ 26 ರಂದು, ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಮತ್ತು ಅವರ ಮಗಳ ಚಿಕಿತ್ಸೆಗಾಗಿ ದೆಹಲಿಗೆ ಭೇಟಿ ನೀಡಲು ಮತ್ತು ಉಳಿಯಲು ಅನುವು ಮಾಡಿಕೊಡಲು ಅವರ ನೀಡಿದ್ದ ಜಾಮೀನಿನ ಷರತ್ತುಗಳನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿತ್ತು.

ಇದನ್ನೂ ಓದಿ: ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ

ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...