Homeಮುಖಪುಟದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ...

ದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯಡಿ ಉದ್ಯೋಗ ಪಡೆಯಲು ಹಿಂದೂ ಧರ್ಮಕ್ಕೆ ಮತಾಂತರವಾದ ಕ್ರೈಸ್ತ ಮಹಿಳೆಯ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ನ.26) ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಸಿ ಸೆಲ್ವರಾಣಿ ಎಂಬವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಆರ್. ಮಹದೇವನ್ ಅವರ ಪೀಠ “ಮೀಸಲಾತಿ ಪ್ರಯೋಜನಗಳನ್ನು ಪಡೆಯುವ ಉದ್ದೇಶದಿಂದಲೇ ಮತಾಂತರಗೊಂಡರೆ ಅಥವಾ ಮರು ಮತಾಂತರವಾದರೆ, ಅದನ್ನು ಅನುಮತಿಸಲಾಗದು” ಎಂದಿದೆ.

ವರದಿಗಳ ಪ್ರಕಾರ, ಸೆಲ್ವರಾಣಿ ಹಿಂದೂ ಧರ್ಮದ ವಲ್ಲುವನ್ ಜಾತಿಗೆ ಸೇರಿದವರು ಎಂದು ಹೇಳಿಕೊಂಡು ಪರಿಶಿಷ್ಟ ಜಾತಿಯಡಿ ಮೀಸಲಾತಿ ಕೋರಿ ಗುಮಾಸ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರ ಅರ್ಜಿ ಪರಿಶೀಲಿಸಿದಾಗ, ಆಕೆ ಹುಟ್ಟಿನಿಂದ ಕ್ರೈಸ್ತ ಧರ್ಮಕ್ಕೆ ಸೇರಿದವರು ಎಂದು ತಿಳಿದು ಬಂದಿತ್ತು. ಆಕೆಯ ಪೋಷಕರ ವಿವಾಹವನ್ನು ಭಾರತೀಯ ಕ್ರೈಸ್ತ ವಿವಾಹ ಕಾಯ್ದೆಯಡಿ ನೋಂದಾಯಿಸಲಾಗಿದೆ. ಆಕೆಯ ಬ್ಯಾಪ್ಟಿಸಮ್ ಮತ್ತು ಚರ್ಚ್ ಹಾಜರಾತಿಯ ದಾಖಲೆಗಳು ಆಕೆ ಕ್ರೈಸ್ತ ಸಮುದಾಯಕ್ಕೆ ಸೇರಿದವರು ಎನ್ನುವುದಕ್ಕೆ ಪುರಾವೆ ನೀಡಿದ್ದವು.

ಗುಮಾಸ್ತೆ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಲಾಗಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ತಮಿಳುನಾಡು ಸರ್ಕಾರದ ಕ್ರಮವನ್ನು ಮದ್ರಾಸ್ ಹೈಕೋರ್ಟ್ 2023ರ ಜನವರಿಯಲ್ಲಿ ಎತ್ತಿಹಿಡಿದಿತ್ತು. ಅದನ್ನು ಪ್ರಶ್ನಿಸಿ ಸೆಲ್ವರಾಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. “ಸೆಲ್ವರಾಣಿ ಅವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

“ಧರ್ಮವನ್ನು ಅಳವಡಿಸಿಕೊಳ್ಳದೇ, ಕೇವಲ ಮೀಸಲಾತಿಯ ಉದ್ದೇಶಕ್ಕಾಗಿ ಮತಾಂತರವಾಗುವುದನ್ನು ಅನುಮತಿಸಲಾಗುವುದಿಲ್ಲ. ಈ ರೀತಿಯ ಮೀಸಲಾತಿಯಿಂದ ಸಾಮಾಜಿಕ ನೀತಿಗೆ ಹಿನ್ನಡೆಯಾಗಲಿದೆ. ಸಾಂವಿಧಾನಿಕವಾಗಿ ಇದು ವಂಚನೆಗೆ ಕಾರಣವಾಗಲಿದೆ” ಎಂದು ಪೀಠವು ಉಲ್ಲೇಖಿಸಿದೆ.

“ಸೆಲ್ವರಾಣಿ ಅವರು ಹಿಂದೂ ಧರ್ಮಕ್ಕೆ ಮರುಮತಾಂತರಗೊಂಡಿದ್ದಕ್ಕೆ ಸಂಬಂಧಿಸಿದ ಯಾವುದೇ ಪುರಾವೆಗಳು ಪ್ರಕರಣದಲ್ಲಿ ಕಂಡುಬಂದಿಲ್ಲ. ಮರು ಮತಾಂತರವಾಗಬೇಕಾದರೆ ಸಮಾರಂಭಗಳು, ಸಾರ್ವಜನಿಕವಾಗಿ ಪ್ರಚಾರಗಳು ಅಥವಾ ಆರ್ಯ ಸಮಾಜದಂತಹ ಸಂಸ್ಥೆಗಳೊಂದಿಗೆ ಸಂಬಂಧದ ಅಗತ್ಯವಿದೆ. ಈ ಪ್ರಕರಣದಲ್ಲಿ ಅದು ಯಾವುದೂ ನಡೆದಂತಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

“ಭಾರತದ ಜಾತ್ಯತೀತ ಚೌಕಟ್ಟಿನಲ್ಲಿ, ಪ್ರತಿಯೊಬ್ಬ ನಾಗರಿಕರಿಗೂ ಅವರ ಆಯ್ಕೆಯ ಧರ್ಮವನ್ನು ಆಚರಿಸಲು ಮತ್ತು ಪ್ರತಿಪಾದಿಸಲು ಹಕ್ಕಿದೆ. ಆದರೆ, ಧರ್ಮದ ಮೇಲಿನ ದ್ವಂದ್ವ ಆಯ್ಕೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಮೇಲ್ಮನವಿದಾರರು ಬ್ಯಾಪ್ಟಿಸಮ್ ಅನುಸರಿಸಿದ ನಂತರ ಮೀಸಲಾತಿ ಪ್ರಯೋಜನಗಳಿಗಾಗಿ ಹಿಂದೂ ಎಂದು ಗುರುತಿಸಲು ಆಗುವುದಿಲ್ಲ” ಎಂದು ಪೀಠವು ಹೇಳಿದೆ.

ಸೆಲ್ವರಾಣಿ ಪರ ಹಿರಿಯ ವಕೀಲ ಎನ್.ಎಸ್ನ ಪ್ಪಿನೈ, ವಕೀಲರಾದ ವಿ.ಬಾಲಾಜಿ, ಅಸೈತಂಬಿ ಎಂ.ಎಸ್ಎಂ ಮತ್ತಿತರರು ವಾದ ಮಂಡಿಸಿದ್ದರು. ತಮಿಳುನಾಡು ಸರ್ಕಾರದ ಪರ ವಕೀಲರಾದ ಅರವಿಂದ್ ಎಸ್, ಅಕ್ಷಯ್ ಗುಪ್ತಾ, ಅಬ್ಬಾಸ್ ಬಿ ಮತ್ತು ಥರಾಣೆ ಎಸ್. ಹಾಜರಾಗಿದ್ದರು.

ಇದನ್ನೂ ಓದಿ : ‘ಸನಾತನ ಧರ್ಮ ಸಂರಕ್ಷಣಾ ಮಂಡಳಿ’ ಸ್ಥಾಪನೆಗೆ ಅರ್ಜಿ : ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...