Homeಚಳವಳಿದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ...

ದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ ನೋಡಿ

ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ "ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ" ಎಂದು ಟ್ವೀಟ್‌ ಮಾಡಿದ್ದಾರೆ

- Advertisement -
- Advertisement -

ನಿನ್ನೆ ರಾತ್ರಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರ ಮೇಲೆ ನಾಲ್ಕೈದು ಜನರು ಮಾರಣಾಂತಿಕವಾಗಿ ಸಾಮೂಹಿಕ ಹಲ್ಲೆ ನಡೆಸಿರುವ ಘಟನೆ ಜರುಗಿದ್ದು ತೀವ್ರ ಖಂಡನೆ ವ್ಯಕ್ತವಾಗಿದೆ.

ಯುವಕನೊಬ್ಬನ ಬಟ್ಟೆ ಬಿಚ್ಚಿ ಹೊಡೆಯುತ್ತಿದ್ದು, ಅದನ್ನು ತಡೆಯಲು ಬಂದ ಮತ್ತೊಬ್ಬ ಯುವಕನಿಗೂ ಸಹ ಕಾಲಿನಿಂದ ಒದ್ದು ದರ್ಪ ಮೆರೆದಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ನಿಂದನೀಯ ಮಾತುಗಳು ಮತ್ತು ಹಿಂಸೆ ಎಂಬ ಟೈಟಲ್‌ ನೀಡಿ

“ನಿನ್ನೆ ರಾತ್ರಿ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರನ್ನು ಹತ್ಯೆ ಮಾಡಲು ಯತ್ನಿಸಿದ ಆರೋಪಿಗಳನ್ನು 24 ಗಂಟೆಗಳಲ್ಲಿ ಪೊಲೀಸರು ಬಂಧಿಸದಿದ್ದರೆ ನಾನು ಗುಜರಾತ್ ಬಂದ್‌ಗೆ ಕರೆ ನೀಡುತ್ತೇನೆ. ದಲಿತರು ಹೇಡಿಗಳು ಎಂದು ಭಾವಿಸಬೇಡಿ: ನಾವು ಸಂವಿಧಾನವನ್ನು ನಂಬುತ್ತೇವೆ!” ಎಂದಿದ್ದಾರೆ.

ನಾನು ಈ ಘಟನೆಯ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಲುಪಿಸಿದ್ದೇನೆ. ದಲಿತರ ವಿರುದ್ಧದ ಈ ದಾದಗಿರಿ ಸಹಿಸುವುದಿಲ್ಲ. ಇಂದೇ ಅವರನ್ನು ಬಂಧಿಸಿ, ಇಲ್ಲದಿದ್ದರೆ ನಾವು ಬೀದಿಗಳಲ್ಲಿ ಆಂದೋಲನ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ “ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆಯೇ ಸಹ ಗುಜರಾತ್‌ನ ಊನಾ ಎಂಬ ಊರಿನಲ್ಲಿ ಮೂರು ಜನ ದಲಿತ ಯುವಕರನ್ನು ಅರೆಬೆತ್ತಲೆಗೊಳಿಸಿ ಸಾಮೂಹಿಕ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್‌ ಆಗಿತ್ತು. ಇದರ ವಿರುದ್ಧ ತೀವ್ರ ಹೋರಾಟ ನಡೆಸಿದ್ದ ಜಿಗ್ನೇಶ್ ಮೇವಾನಿ ’ಊನಾ ಚಲೋ’ ನಡೆಸಿದ್ದರು. ಇದು ಗುಜರಾತ್‌ನಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

“ನಿಮ್ಮ ಸತ್ತ ದನ ನೀವೆ ಇಟ್ಟುಕೊಳ್ಳಿ, ನಮ್ಮ ಭೂಮಿ ನಮಗೆ ಕೊಡಿ” ಎಂದು ಜಿಗ್ನೇಶ್ ಮೇವಾನಿಯವರ ನೀಡಿದ ಕರೆಗೆ ದೇಶದ ದಲಿತ ಸಮುದಾಯ ಅಭೂತಪೂರ್ವವಾಗಿ ಸ್ಪಂದಿಸಿತ್ತು. ಅಲ್ಲಿಂದ ಮುಂದೆ ಜಿಗ್ನೇಶ್‌ ಮೇವಾನಿಯವರು ಯುವ ದಲಿತ ಹೋರಾಟಗಾರನಾಗಿ ಪ್ರವರ್ಧಮಾನಕ್ಕೆ ಬಂದಿದ್ದಲ್ಲದೇ ನಂತರ ಶಾಸಕರಾಗಿದ್ದು ಇತಿಹಾಸ.

ಈಗ ಮತ್ತೆ ನಡೆದಿರುವ ದಲಿತರ ಮೇಲಿನ ದೌರ್ಜನ್ಯದ ಪ್ರಕರಣ ಎಲ್ಲಿಗೆ ಹೋಗಿ ತಲುಪಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹಲ್ಲೆ ಖಂಡನಾರ್ಹ. ಇದನ್ನು ನಡೆಸಿರುವ ಪಾತಕಿಗಳನ್ನು ಈ ಕೂಡಲೇ ಬಂಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...