Homeಮುಖಪುಟಬಿಜೆಪಿ ಸೇರಿದರೆ ನನ್ನ ಮೇಲಿನ ಅಮಾನತು ತೆರವಾಗಬಹುದು : ಬಜರಂಗ್ ಪುನಿಯಾ

ಬಿಜೆಪಿ ಸೇರಿದರೆ ನನ್ನ ಮೇಲಿನ ಅಮಾನತು ತೆರವಾಗಬಹುದು : ಬಜರಂಗ್ ಪುನಿಯಾ

- Advertisement -
- Advertisement -

“ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳ್ಳಲಿದೆ” ಎಂದು ಒಲಿಂಪಿಕ್ ಪದಕ ವಿಜೇತ ಭಾರತೀಯ ಕುಸ್ತಿಪಟು ಬಜರಂಗ್ ಪುನಿಯಾ ಹೇಳಿದ್ದಾರೆ.

ಉದ್ದೀಪನ ಮದ್ದು ಪರೀಕ್ಷೆಗೆ (ಡೋಪ್ ಟೆಸ್ಟ್‌) ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳ ಅವಧಿಗೆ ಮಾನತುಗೊಂಡ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಮಾರ್ಚ್ 10ರಂದು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಟ್ರಯಲ್ಸ್‌ ಸಂದರ್ಭದಲ್ಲಿ ಮಾದರಿ ನೀಡಲು ನಿರಾಕರಿಸುವ ಮೂಲಕ ಬಜರಂಗ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಹೇಳಿದೆ.

ಇದೇ ಆರೋಪದಲ್ಲಿ ಏಪ್ರಿಲ್ 23ರಂದು ಬಜರಂಗ್ ಅವರನ್ನು ನಾಡಾ ಅಮಾನತು ಮಾಡಿತ್ತು. ಅದರಂತೆ ವಿಶ್ವ ಕುಸ್ತಿ ಒಕ್ಕೂಟವೂ (ಯುಡಬ್ಲ್ಯುಡಬ್ಲ್ಯು) ಅಮಾನತು ಮಾಡಿತ್ತು.

“ನನಗೆ ಆಘಾತವಾಗಿಲ್ಲ. ಕಳೆದೆ ಒಂದು ವರ್ಷದಿಂದ ವಿವಾದದ ಕುರಿತು ಚರ್ಚೆ ನಡೆಯುತ್ತಿದೆ. ನಾಡಾಗೆ ಮಾದರಿ ನೀಡಲು ನಾನು ನಿರಾಕರಿಸಿಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಉದ್ದೀಪನ ಮದ್ದು ಪರೀಕ್ಷೆ ನಡೆಸಲು ಅವಧಿ ಮುಗಿದ ಕಿಟ್‌ನೊಂದಿಗೆ (2023, ಡಿಸೆಂಬರ್) ನನ್ನ ಮನೆಗೆ ಭೇಟಿ ನೀಡಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲೂ ನಾನು ಪೋಸ್ಟ್ ಹಂಚಿದ್ದೇನೆ” ಎಂದು ಅವರು ಹೇಳಿದ್ದಾರೆ.

‘ಅವಧಿ ಮುಗಿದ ಕಿಟ್ ಆಟಗಾರನಿಗೆ ನೀಡುವಂತಿಲ್ಲ. ನನ್ನ ತಂಡದ ಗಮನಕ್ಕೂ ಬಂದಿದೆ. 2020, 2021, 2022ರ ಅವಧಿ ಮುಗಿದ ಕಿಟ್ ನೀಡಲಾಗಿತ್ತು. ನಾನು ಪರೀಕ್ಷೆಗೆ ಮೂತ್ರದ ಮಾದರಿಯನ್ನು ನೀಡಿದ್ದೇನೆ. ಆದರೆ, ನನ್ನ ತಂಡವು ಕಿಟ್ ಪರಿಶೀಲಿಸಿದಾಗ ಅವಧಿ ಮುಗಿದಿದೆ ಎಂದು ವಿಚಾರ ತಿಳಿದು ಬಂದಿದೆ. ಆದ್ದರಿಂದ ಕಿಟ್‌ನ ವಿಡಿಯೋ ಮಾಡಿ ನಾಡಾಗೆ ಮೇಲ್ ಮಾಡಿದ್ದೇವೆ. ಅವರ ತಪ್ಪಿನ ಬಗ್ಗೆ ಮಾಹಿತಿ ನೀಡಿದ್ದೇವೆ. ಆದರೆ, ತಪ್ಪು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ” ಎಂದು ಪುನಿಯಾ ತಿಳಿಸಿದ್ದಾರೆ.

“ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಗೆ ನಾವು ಬೆಂಬಲ ನೀಡಿದ್ದರಿಂದ ಸರ್ಕಾರ ನನ್ನ ಮೇಲೆ ಸೇಡು ತೀರಿಸಲು ಯತ್ನಿಸುತ್ತಿದೆ” ಎಂದು ಪುನಿಯಾ ಆರೋಪ ಮಾಡಿದ್ದಾರೆ.

“ನಾನು ಕಳೆದ 10-12 ವರ್ಷಗಳಿಂದ ಸ್ಪರ್ಧಿಸುತ್ತಿದ್ದೇನೆ. ಎಲ್ಲಾ ಪಂದ್ಯಾವಳಿಗಳಿಗೂ ಮುನ್ನ ಮಾದರಿಯನ್ನು ನೀಡಿದ್ದೇನೆ. ಆದರೆ, ಸರ್ಕಾರದ ಉದ್ದೇಶವು ನಮ್ಮನ್ನು ಒಡೆಯುವುದು, ಅವರಿಗೆ ತಲೆ ಬಾಗುವಂತೆ ಮಾಡುವುದು. ನಾನು ಬಿಜೆಪಿಗೆ ಸೇರಿದರೆ ನನ್ನ ವಿರುದ್ದದ ಎಲ್ಲಾ ಅಮಾನತು ಆದೇಶವನ್ನು ತೆಗೆದು ಹಾಕಬಹುದು ಎಂಬುದಾಗಿ ಭಾವಿಸುತ್ತೇನೆ” ಎಂದು ಬಜರಂಗ್ ಪುನಿಯಾ ಹೇಳಿದ್ದಾರೆ.

ಅಮಾನತು ಆದೇಶದಂತೆ ಬಜರಂಗ್ ಪುನಿಯಾ 2028ರ ಏಪ್ರಿಲ್‌ವರೆಗೆ ಸ್ಪರ್ಧಾತ್ಮಕ ಕುಸ್ತಿಗೆ ಮರಳುವಂತಿಲ್ಲ. ಅಲ್ಲದೆ ವಿದೇಶದಲ್ಲಿ ತರಬೇತುದಾರ ಕೆಲಸ ವಹಿಸಲು ಸಾಧ್ಯವಿಲ್ಲ ಎಂದು ವರದಿಯಾಗಿದೆ.

ಕುಸ್ತಿಪಟುಗಳಾದ ಸಾಕ್ಷ್ಮಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಪೋಗಟ್ ಕಳೆದ ವರ್ಷ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಭಾರತೀಯ ಕುಸ್ತಿ ಫೆಡರೇಶನ್‌ನ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆ ಬಳಿಕ ಅವರು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಿಂಗಳ ಹಿಂದೆ ನಡೆದ ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ ಸೇರಿದ್ದಾರೆ. ವಿನೇಶ್ ಪೋಗಟ್‌ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕಿಯಾಗಿದ್ದಾರೆ. ಬಜರಂಗ್ ಪುನಿಯಾ ಈಗ ಅಮಾನತುಗೊಂಡಿದ್ದಾರೆ. ಮತ್ತೊಬ್ಬರು ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ : ದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...