Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...