Homeಮುಖಪುಟಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

- Advertisement -
- Advertisement -

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಅವರ ಕುಟುಂಬ ಸದಸ್ಯರು ಥಳಿಸಿ ಕೊಂದಿದ್ದಾರೆ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಕರಣದಲ್ಲಿ ಗ್ರಾಮದ ಸರಪಂಚ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಮಧ್ಯಪ್ರದೇಶ

ರಾಜ್ಯದ ಸುಭಾಷ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದರ್‌ಗಢ ಗ್ರಾಮದಲ್ಲಿ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಾದಿತ ಬೋರ್‌ವೆಲ್ ಕುರಿತು ಜಗಳ ನಡೆದ ನಂತರ ಗ್ರಾಮದ ಸರಪಂಚ್ ಪದಮ್ ಸಿಂಗ್ ಧಕಡ್ ಮತ್ತು ಅವರ ಕೆಲವು ಕುಟುಂಬ ಸದಸ್ಯರು ನಾರದ್ ಜಾತವ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆಗೀಡಾದ ನಾರದ್ ಅವರು ಗ್ವಾಲಿಯರ್ ಜಿಲ್ಲೆಯ ನಿವಾಸಿಯಾಗಿದ್ದು, ಅವರು ಇಂದರ್‌ಗಢದಲ್ಲಿರುವ ಅವರ ತಾಯಿಯ ಚಿಕ್ಕಪ್ಪ ವಿದ್ಯಾ ಜಾತವ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದಲ್ಲಿ ಪ್ರಧಾನ ಆರೋಪಿ ಪದಮ್ ಸಿಂಗ್ ಧಕಡ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ ಎಂದು ಶಿವಪುರಿ ಪೊಲೀಸ್ ಅಧೀಕ್ಷಕ ಅಮನ್ ಸಿಂಗ್ ರಾಥೋಡ್ ದಿ ಹಿಂದೂಗೆ ತಿಳಿಸಿದ್ದಾರೆ. “ತಲೆಮರೆಸಿಕೊಂಡಿರುವ ನಾಲ್ವರು ವ್ಯಕ್ತಿಗಳಿಗೆ ಬಹುಮಾನಗಳನ್ನು ಘೋಷಿಸಿದ್ದೇವೆ ಮತ್ತು ತಂಡಗಳು ಅವರನ್ನು ಹುಡುಕುತ್ತಿವೆ” ಎಂದು ಅವರು ಹೇಳಿದ್ದಾರೆ. ಒಟ್ಟು ಎಂಟು ಜನರ ವಿರುದ್ಧ ಕೊಲೆ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಥೋಡ್ ಅವರು  ಜಾತವ್ ಮತ್ತು ಧಾಕಡ್ ಕುಟುಂಬಗಳ ನಡುವೆ ನೀರಿನ ಮೂಲದ ಬಗ್ಗೆ ವಿವಾದ ನಡೆಯುತ್ತಿತ್ತು. ಬೋರ್‌ವೆಲ್‌ಗೆ ಹಣ ಕೂಡ ಹಾಕಿದ್ದರು ಎಂದು ಸಂತ್ರಸ್ತ ನಾರದ್ ಜಾತವ್ ಕುಟುಂಬಸ್ಥರು ಹೇಳಿಕೊಂಡಿದ್ದಾರೆ. “ನೀರನ್ನು ಹೊಲಗಳಿಗೆ ಬಳಸಲು ಎರಡು ಕಡೆಯವರು ಮೌಖಿಕ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಮಂಗಳವಾರ ನಡೆದ ವಾಗ್ವಾದವು ಹಿಂಸಾಚಾರಕ್ಕೆ ಕಾರಣವಾಯಿತು” ಎಂದು ಎಸ್ಪಿ ಹೇಳಿದ್ದಾರೆ.

ಘಟನೆಯ ವೀಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ದಷ್ಕರ್ಮಿಗಳ ಗುಂಪು ನಾರದ್ ಜಾತವ್ ಅವರನ್ನು ದೊಣ್ಣೆಗಳು ಮತ್ತು ಲಾಠಿಗಳಿಂದ ಥಳಿಸುತ್ತಿರುವುದು ದಾಖಲಾಗಿದೆ. ಘಟನೆಯ ನಂತರ ಸಂತ್ರಸ್ತ ನಾರದ್ ಅವರನ್ನು ಶಿವಪುರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ನಾರದ್ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಸಲಾಯಿತು. ಶವಸಂಸ್ಕಾರದ ನಂತರ ಮಾತನಾಡಿದ ಮೃತನ ತಂದೆ ವಿಷ್ಣು ಜಾತವ್, ತನ್ನ ಮಗನನ್ನು ಆರೋಪಿಗಳು ಅಮಾನುಷವಾಗಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ. “ಅವನು ಕೊಲ್ಲಲ್ಪಟ್ಟ ನಂತರ ನಾನು ಇಲ್ಲಿಗೆ ಬಂದೆ. ಅವನು ತನ್ನ ಚಿಕ್ಕಪ್ಪನನ್ನು ಭೇಟಿ ಮಾಡಲು ಮಾತ್ರ ಹೋಗಿದ್ದನು. ಅವರ ನಡುವಿನ ವಿವಾದ ಏನೆಂದು ನನಗೆ ತಿಳಿದಿಲ್ಲ. ಆದರೆ ಢಾಕಾಡ್‌ ಕುಟುಂಬಸ್ಥರು ಅವನನ್ನು ಹೊಡೆದು ಕೊಂದರು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಸ್ಥಳೀಯ ಪೊಲೀಸರು ಆರಂಭದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಷ್ಣು ಆರೋಪಿಸಿದ್ದಾರೆ. “ಘಟನೆಯ ಬಗ್ಗೆ ನನ್ನ ಸಂಬಂಧಿಕರು ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಆದರೆ ಅವರು ಅವರ ಮಾತನ್ನು ಕೇಳಲಿಲ್ಲ. (ನಾಲ್ವರು) ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಈಗ ಹೇಳುತ್ತಿದ್ದಾರೆ ಆದರೆ ಯಾರನ್ನೂ ಬಂಧಿಸಲಾಗಿಲ್ಲ. ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ, ”ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...