Homeಮುಖಪುಟ'ಮಹಾ' ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ...

‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿದರೂ, ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

‘ಮಹಾಯುತಿ’ ಮೈತ್ರಿಕೂಟದ ಪ್ರಮುಖ ಪಕ್ಷ ಶಿವಸೇನೆಯ ಮುಖ್ಯಸ್ಥ ಹಾಗೂ ನಿರ್ಗಮಿತ ಸಿಎಂ ಏಕನಾಥ್ ಶಿಂದೆ, ಆರಂಭದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಗೇರುವ ಉತ್ಸಾಹದಲ್ಲಿದ್ದರು. ಆದರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ, “ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿ ನಿರ್ಧಾರಕ್ಕೆ ಬದ್ದ” ಎಂದು ನಿನ್ನೆ (ನ.27) ಹೇಳಿದ್ದಾರೆ. ಈ ಮೂಲಕ ಶಿಂದೆ ಶಸ್ತ್ರ ತ್ಯಜಿಸಿದ್ದಾರೆ. ಏಕನಾಥ್ ಶಿಂದೆಯ ಎನ್‌ಸಿಪಿ 288 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದಿದೆ.

ಸಿಎಂ ಸ್ಥಾನದ ರೇಸ್‌ನಲ್ಲಿರುವ ಮತ್ತೊಬ್ಬ ನಾಯಕ ಬಿಜೆಪಿಯ ದೇವೇಂದ್ರ ಫಡ್ನವಿಸ್. ಈ ಹಿಂದೆ ಸಿಎಂ, ಪ್ರತಿಪಕ್ಷ ನಾಯಕರಾಗಿದ್ದ ಫಡ್ನವಿಸ್, ಕಳೆದ ಅವಧಿಯ ಶಿಂದೆ ಸರ್ಕಾರದಲ್ಲಿ ಅಜಿತ್ ಪವಾರ್ ಜೊತೆ ಉಪ ಮುಖ್ಯಮಂತ್ರಿಯಾಗಿದ್ದರು.

ಏಕನಾಥ್ ಶಿಂದೆ ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಲು ಮುಂದಾದಾಗ ಫಡ್ನವಿಸ್ ಸಿಎಂ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಸರ್ಕಾರ ರಚನೆಗೆ ಕಾರಣರಾದ ಏಕನಾಥ್ ಶಿಂದೆಗೆ ಸಿಎಂ ಹುದ್ದೆ ಕೊಡುವ ಸಲುವಾಗಿ ಬಿಜೆಪಿ ಹೈಕಮಾಂಡ್ ಫಡ್ನವಿಸ್‌ ಅನ್ನು ಡಿಸಿಎಂ ಹುದ್ದೆಗೆ ಒಪ್ಪಿಸಿತ್ತು. ಒಲ್ಲದ ಮನಸ್ಸಿನಿಂದ ಆ ಹುದ್ದೆಯಲ್ಲಿ ಮುಂದುವರೆದ ಫಡ್ನವಿಸ್, ಈ ಬಾರಿ ಸಿಎಂ ರೇಸ್‌ನ ಮುಂಚೂಣಿಯಲ್ಲಿದ್ದಾರೆ. ಅದಕ್ಕೆ ಬೆಂಬಲವಾಗಿ ಬಿಜೆಪಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನೂ ಪಡೆದಿದೆ.

ಏಕನಾಥ್ ಶಿಂದೆ ಸಿಎಂ ಆಯ್ಕೆ ಬಿಜೆಪಿಗೆ ಬಿಟ್ಟ ಮೇಲೆ ಫಡ್ನವಿಸ್ ಹಾದಿ ಸುಗಮವಾಗಿದೆ. ಇನ್ನೇನು ಸಿಎಂ ಹುದ್ದೆ ಫಿಕ್ಸ್ ಎಂಬ ಹಂತದಲ್ಲಿ ಫಡ್ನವಿಸ್ ಇದ್ದಾರೆ. ಆದರೆ, ಈ ನಡುವೆ ಅವರಿಗೊಂದು ತಡೆ ಎದುರಾಗಿದೆ.

ಹೊಸ ಮುಖ ಹುಡುಕಾಟದಲ್ಲಿ ಬಿಜೆಪಿ

ವರದಿಗಳ ಪ್ರಕಾರ, ಮಹಾರಾಷ್ಟ್ರದ ಸಿಎಂ ಹುದ್ದೆಗೆ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈಗಾಗಲೇ ಬಿಜೆಪಿ ಈ ಪ್ರಯೋಗ ಮಾಡಿದೆ. ಈ ವಿಷಯ ನಿಜವಾದರೆ ಫಡ್ನವಿಸ್ ಸಿಎಂ ಕನಸು ಭಗ್ನವಾಗಲಿದೆ. ಅನಿವಾರ್ಯವಾಗಿ ಹೈಕಮಾಂಡ್ ಮುಂದೆ ತಲೆಬಾಗಬೇಕಿದೆ.

ಸಿಎಂ ಹುದ್ದೆಗೆ ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ನಾಯಕರನ್ನೇ ಹೆಕ್ಕಿ ತರುವ ಸಂಪ್ರದಾಯ ಕೊನೆಗೊಳಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಮಹಾಯುತಿಗೆ ದೊಡ್ಡ ಮಟ್ಟದ ಬೆಂಬಲ ನೀಡಿದ ಉತ್ತರ ಮಹಾರಾಷ್ಟ್ರಕ್ಕೆ ಪ್ರಾಶಸ್ತ್ಯ ನೀಡುವ ಯೋಚನೆಯಲ್ಲಿದೆ. ಉತ್ತರ ಮಹಾರಾಷ್ಟ್ರದ 47 ಸ್ಥಾನಗಳ ಪೈಕಿ ಮಹಾಯುತಿ 44 ಅನ್ನು ಗೆದ್ದುಕೊಂಡಿದೆ. ಈ ಲೆಕ್ಕಾಚಾರಗಳ ಪ್ರಕಾರ ನೋಡುವುದಾದರೆ ಮಹಾರಾಷ್ಟ್ರ ಸಿಎಂ ಕುರ್ಚಿಯಲ್ಲಿ ಹೊಸ ಮುಖವನ್ನು ಕಾಣುವ ಸಾಧ್ಯತೆ ಇದೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತ ಮಾಜಿ ಸಚಿವ ಗಿರೀಶ್ ಮಹಾಜನ್, ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ನಾಯಕರಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿ, ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಕೆಲ ಮಹಿಳಾ ನಾಯಕರು ಹೊಸ ಮುಖಗಳ ಆಯ್ಕೆ ಪಟ್ಟಿಯಲ್ಲಿ ಇದ್ದಾರೆ ಎಂದೂ ವರದಿಯಾಗಿದೆ.

ಪ್ರಸ್ತುತ ಶಿವಸೇನೆ (ಶಿಂದೆ ಬಣ) ಏಕನಾಥ್ ಶಿಂದೆ ಅವರನ್ನು ಮತ್ತು ಎನ್‌ಸಿಪಿ (ಅಜಿತ್ ಬಣ) ಅಜಿತ್ ಪವಾರ್ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ತಮ್ಮ ನಾಯಕ ಯಾರೆಂದು ಅಂತಿಮಗೊಳಿಸಿಲ್ಲ. ಎಲ್ಲಾ ಸರಿಯಾದರೆ ಹೊಸ ಸಿಎಂ ನವೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಬಹುದು.

ಇದನ್ನೂ ಓದಿ : ಅಜ್ಮೀರ್ ದರ್ಗಾ ಶಿವ ದೇವಾಲಯವೆಂದು ಅರ್ಜಿ : ವಿಚಾರಣೆಗೆ ಒಪ್ಪಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...