Homeಮುಖಪುಟ'ಪಿಎಂ ವಿಶ್ವಕರ್ಮ ಯೋಜನೆ' ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

‘ಪಿಎಂ ವಿಶ್ವಕರ್ಮ ಯೋಜನೆ’ ಜಾತಿ ಆಧಾರಿತ ಉದ್ಯೋಗ ಉತ್ತೇಜಿಸುತ್ತದೆ, ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ : ತಮಿಳುನಾಡು ಸಿಎಂ

- Advertisement -
- Advertisement -

‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ'(PMVS) ಜಾತಿ ಆಧಾರಿತ ಉದ್ಯೋಗಗಳ ಕಲ್ಪನೆಯನ್ನು ಉತ್ತೇಜಿಸುತ್ತದೆ. ಆದ್ದರಿಂದ ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನವೆಂಬರ್ 27ರಂದು ಕೇಂದ್ರಕ್ಕೆ ಪತ್ರ ಬರೆದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರ ಯೋಜನೆಯ ಕುರಿತು ಅಧ್ಯಯನ ನಡೆಸಿದೆ. ಈ ವೇಳೆ ಯೋಜನೆಯು ಸಣ್ಣ ಕುಟುಂಬ ನಡೆಸುವ ಕರಕುಶಲ ಮತ್ತು ಕುಶಲಕರ್ಮಿ ಉದ್ಯೋಗದಲ್ಲಿ ತೊಡಗಿರುವವವರಿಗೆ ಮಾತ್ರ ಲಾಭ ಒದಗಿಸುವುದು ಕಂಡು ಬಂದಿದೆ. ಇದು ಮೂಲಭೂತವಾಗಿ ಕೆಳಜಾತಿಯ ಯುವಕರನ್ನು ಶಿಕ್ಷಣದ ಮೇಲೆ ಕೇಂದ್ರೀಕರಿಸುವ ಬದಲು ಜಾತಿ ಆಧಾರಿತ ಉದ್ಯೋಗಗಳಲ್ಲೇ ಉಳಿಯಲು ಪ್ರೋತ್ಸಾಹಿಸುತ್ತದೆ ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ವಿಶ್ವಕರ್ಮ ಯೋಜನೆಯು 15 ಸಾವಿರ ರೂಪಾಯಿ ಟೂಲ್‌ಕಿಟ್‌ ಪ್ರೋತ್ಸಾಹ ಧನದ ಜೊತೆಗೆ ಕೌಶಲ್ಯ ವರ್ಧನೆಗೆ ತರಬೇತಿ ಮತ್ತು ಸಾಲ ಸೌಲಭ್ಯವನ್ನು ಒದಗಿಸುತ್ತದೆ. ಮೊದಲ ಕಂತಿನಲ್ಲಿ ರೂ. 1 ಲಕ್ಷ ಮತ್ತು ಎರಡನೇ ಕಂತಿನಲ್ಲಿ ರೂ. 2 ಲಕ್ಷದವರೆಗೆ ಮೇಲಾಧಾರ-ಮುಕ್ತ ಸಾಲವನ್ನು ಶೇ. 5ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ನೀಡುತ್ತದೆ.

ಯೋಜನೆಯು ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್‌ಗೆ ಪ್ರೋತ್ಸಾಹ ಒದಗಿಸುತ್ತದೆ. ಮರಗೆಲಸ, ದೋಣಿ ತಯಾರಿಕೆ, ಕಬ್ಬಿಣದ ಶಸ್ತ್ರಾಸ್ತ್ರ ತಯಾರಿಕೆ, ಶೂ ತಯಾರಿಕೆ ಸೇರಿದಂತೆ ಕುಟುಂಬ ಪಾರಂಪರ್ಯವಾಗಿ ಬಂದಿರುವ 18 ಕೆಲಸಗಳಿಗೆ ಇದು ಅನ್ವಯಿಸುತ್ತದೆ.

ಸೆಪ್ಟೆಂಬರ್ 17, 2023ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿರುವ ಈ ಯೋಜನೆ ಕುರಿತು ಬಿಜೆಪಿ ಸರ್ಕಾರ ಬಹಳ ಹೆಮ್ಮೆ ವ್ಯಕ್ತಪಡಿಸಿದೆ. ಆದರೆ, ತಮಿಳುನಾಡು ಸರ್ಕಾರ ಯೋಜನೆಯನ್ನು ವಿರೋಧಿಸಿದೆ.

ಒಂದು ಕುಟುಂಬ ಮರಗೆಲಸ ಮಾಡಿಕೊಂಡಿದ್ದರೆ, ಅವರ ಮಕ್ಕಳೂ ಅದೇ ಕೆಲಸ ಮಾಡಿಕೊಂಡು ಹಿಂದೆ ಉಳಿಯುವುದು ಬೇಡ. ಆ ಮಕ್ಕಳು ಆಧುನಿಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆದು, ಉತ್ತಮ ಕೆಲಸಗಳನ್ನು ಗಿಟ್ಟಿಸಿಕೊಂಡು ಸಂಬಳ ಪಡೆಯುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದೆ ಬರಲಿ ಎಂಬುವುದು ತಮಿಳುನಾಡು ಸರ್ಕಾರದ ವಾದ.

ಯೋಜನೆಯ ಕುರಿತು ಟೀಕೆಗಳು ವ್ಯಕ್ತವಾದಾಗ, ತಮಿಳುನಾಡು ಸರ್ಕಾರ ಅದರ ಸಂಭಾವ್ಯ ಪರಿಣಾಮಗಳನ್ನು ನಿರ್ಣಯಿಸಲು ಸಮಿತಿಯನ್ನು ರಚಿಸಿತ್ತು. ಅದರ ವರದಿ ಆಧಾರಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವರ್ಷದ ಜನವರಿಯಲ್ಲಿ ನಮ್ಮ ಸರ್ಕಾರ ಯೋಜನೆಯ ಕುರಿತು ಮೂರು ಬೇಡಿಕೆಗಳನ್ನು ಮುಂದಿಟ್ಟಿತ್ತು. ಅದು ಪರಿಹಾರವಾಗದೆ ಉಳಿದಿದೆ ಎಂದು ಸಿಎಂ ಸ್ಟಾಲಿನ್ ತಮ್ಮ ಪತ್ರದಲ್ಲಿ ಕೇಂದ್ರಕ್ಕೆ ಹೇಳಿದ್ದಾರೆ.

ನಿರ್ದಿಷ್ಟ ಕಸುಬಿನಲ್ಲಿ ತೊಡಗಿಸಿಕೊಂಡವರಿಗೆ ಮಾತ್ರ ಯೋಜನೆ ಲಾಭ ಎಂಬ ನಿಯಮವನ್ನು ತೆಗೆದುಹಾಕಿ, ಯಾವುದೇ ಉದ್ಯೋಗ ಮಾಡುವವರೂ ಅರ್ಹರು ಎಂಬ ನಿಯಮ ಅಳವಡಿಸಿ ಎಂದು ವಿಶ್ವಕರ್ಮ ಯೋಜನೆ ಸಂಬಂಧ ತಮಿಳುನಾಡು ಸರ್ಕಾರ ಕೇಂದ್ರವನ್ನು ಆಗ್ರಹಿಸಿತ್ತು.

ಎರಡನೆಯದಾಗಿ, ಫಲಾನುಭವಿಗಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಅರ್ಹತೆಯ ಕನಿಷ್ಠ ವಯಸ್ಸನ್ನು 18 ವರ್ಷದಿಂದ 35 ವರ್ಷಕ್ಕೆ ಏರಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿತ್ತು.

ಕೊನೆಯದಾಗಿ, ಗ್ರಾಮೀಣ ಪ್ರದೇಶದ ಫಲಾನುಭವಿಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಮುಖ್ಯಸ್ಥರಿಗಿಂತ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗೆ (ವಿಎಒ) ವಹಿಸಬೇಕೆಂದು ಸರ್ಕಾರ ಶಿಫಾರಸು ಮಾಡಿತ್ತು.

“ನಾವು ಮುಂದಿಟ್ಟಿರುವ ಬೇಡಿಕೆಗಳು ಈಡೇರದ ಕಾರಣ, ಪ್ರಸ್ತುತ ರೂಪದಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಕುಶಲಕರ್ಮಿಗಳನ್ನು ಸಾಮಾಜಿಕ ನ್ಯಾಯದ ಒಟ್ಟಾರೆ ತತ್ವದಡಿಯಲ್ಲಿ ಸಬಲೀಕರಣಗೊಳಿಸಲು, ಸರ್ಕಾರ ಕುಶಲಕರ್ಮಿಗಳಿಗಾಗಿ ಹೆಚ್ಚು ಒಳಗೊಳ್ಳುವಿಕೆಯ ಮತ್ತು ಸಮಗ್ರ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಅದು ಜಾತಿ ಆಧಾರಿತ ತಾರತಮ್ಯದಿಂದ ಹೊರತಾಗಿರಲಿದೆ. ನಮ್ಮ ಯೋಜನೆಯು ಜಾತಿ ಅಥವಾ ಕೌಟುಂಬಿಕ ಉದ್ಯೋಗಗಳನ್ನು ಲೆಕ್ಕಿಸದೆ ರಾಜ್ಯದ ಎಲ್ಲಾ ಕುಶಲಕರ್ಮಿಗಳಿಗೆ ಸಮಗ್ರ ಬೆಂಬಲವನ್ನು ನೀಡಲಿದೆ. ಯೋಜನೆಯು ಅವರಿಗೆ ಆರ್ಥಿಕ ನೆರವು, ತರಬೇತಿ ಮತ್ತು ಅವರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ಸಮಗ್ರವಾಗಿ ಮತ್ತು ಒಳಗೊಳ್ಳುವಿಕೆಯ ಮೂಲಕ ಒದಗಿಸಲಿದೆ” ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MoMSME),ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಸಚಿವಾಲಯ (MSDE)ಮತ್ತು ಹಣಕಾಸು ಸಚಿವಾಲಯ (MoF)ದ ಅಡಿ ಬರುವ ಹಣಕಾಸು ಸೇವೆಗಳ ಇಲಾಖೆ (DFS)ಜಂಟಿಯಾಗಿ 13,000 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಿದೆ.

ಇದನ್ನೂ ಓದಿ : ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...