Homeಕರ್ನಾಟಕ'ಆಂತರಿಕ ಸಮಿತಿ' ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

- Advertisement -
- Advertisement -

ಮಹಿಳಾ ಕಲಾವಿದರ ಸಮಸ್ಯೆ ಆಲಿಸಲು ‘ಆಂತರಿಕ ಸಮಿತಿ’ (ಪಾಶ್ ಸಮಿತಿ) ರಚಿಸುವಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ವಿಫಲವಾಗಿದ್ದು, ಈ ಕುರಿತು ರಾಜ್ಯ ಮಹಿಳಾ ಆಯೋಗ ಬೆಂಗಳೂರು ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸುವಂತೆ ಮಹಿಳಾ ಆಯೋಗ ಈ ಹಿಂದೆ ಕೆಎಫ್‌ಸಿಸಿಗೆ ಸೂಚಿಸಿತ್ತು. ಆದರೆ, ಕೆಎಫ್‌ಸಿಸಿ ಸಮಿತಿ ರಚಿಸುವ ಬದಲು ಪದೇ ಪದೇ ಸಮಯ ವಿಸ್ತರಣೆ ಕೇಳುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಕೆಲಸದ ಸ್ಥಳದಲ್ಲಿ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (POSH) ಸಮಿತಿಯ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸಲು, ವಿಫಲವಾದರೆ ಮಾನ್ಯ ಕಾರಣಗಳನ್ನು ನೀಡಲು ಸೆಪ್ಟೆಂಬರ್ 16 ರಂದು 15 ದಿನಗಳ ಗಡುವನ್ನು ಮಹಿಳಾ ಆಯೋಗವು ಕೆಎಫ್‌ಸಿಸಿಗೆ ನೀಡಿತ್ತು. ಪಾಶ್ ಕಾಯ್ದೆಯಡಿ ಆಂತರಿಕ ಸಮಿತಿ ರಚಿಸುವುದು ಕಡ್ಡಾಯ. ಆ ನಿಟ್ಟಿನಲ್ಲಿ ಮಹಿಳಾ ಆಯೋಗ ಕೆಎಫ್‌ಸಿಸಿಗೆ ಸೂಚನೆ ನೀಡಿತ್ತು.

ಗಡುವಿನ ಒಳಗೆ ಸಮಿತಿ ರಚಿಸಲು ವಿಫಲವಾದ ಕೆಎಫ್‌ಸಿಸಿ, ಸಮಯ ವಿಸ್ತರಣೆ ಕೋರಿ ಎರಡು ಬಾರಿ ಪತ್ರ ಬರೆದಿದೆ. ಆ ಬಳಿಕವೂ ಸಮಿತಿ ರಚನೆ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಕಂಡು ಬಂದಿರಲಿಲ್ಲ. ಸೆಪ್ಟೆಂಬರ್ 18 ರಂದು ಕೆಎಫ್‌ಸಿಸಿಗೆ ಪತ್ರ ಬರೆದಿದ್ದ ಮಹಿಳಾ ಆಯೋಗ, ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ, ಹಕ್ಕುಗಳು ಮತ್ತು ಕಲ್ಯಾಣದ ಬಗ್ಗೆ ವಿವರವಾದ ಕ್ರಿಯಾ ಯೋಜನೆಯನ್ನು ಕೋರಿತ್ತು.

ವರದಿಗಳ ಪ್ರಕಾರ, ಆಂತರಿಕ ಸಮಿತಿ ರಚನೆ ಪ್ರಯತ್ನಕ್ಕೆ ಕನ್ನಡ ಚಿತ್ರರಂಗದಲ್ಲಿ ಪ್ರತಿರೋಧವೂ ಎದುರಾಗಿದೆ. ಸಮಿತಿ ರಚನೆ ಸಂಬಂಧ ಚರ್ಚಿಸಲು ಮಹಿಳಾ ಆಯೋಗ ಕರೆದಿದ್ದ ಸಭೆಯಲ್ಲಿ ಹಾಜರಿದ್ದ ಕೆಲ ಮಹಿಳಾ ಕಲಾವಿದರು, ತಾವು ಬಯಸಿದ್ದನ್ನು ಹೇಳಲು ತಡೆ ಎದುರಿಸುತ್ತಿದ್ದರು. ಇನ್ನೂ ಕೆಲವರು ಮೌನವಾಗಿದ್ದರು.

ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು, “ಪಾಶ್ ಕಾಯ್ದೆಯ ಪ್ರಕಾರ ಕಡ್ಡಾಯವಾಗಿ ಆಂತರಿಕ ಸಮಿತಿ ರಚನೆ ಮಾಡಬೇಕು. ಇಲ್ಲದಿದ್ದರೆ, ಫಿಲ್ಮ್ ಚೇಂಬರ್ ಮಾನ್ಯತೆ ರದ್ದಾಗಬಹುದು ಮತ್ತು ದಂಡ ವಿಧಿಸಬಹುದು. ನಾವು ಸಮಿತಿ ರಚಿಸಲು ಕೊಟ್ಟ ಗಡುವು ಮುಗಿದ ಮೇಲೆ ಫಿಲ್ಮ್ ಚೇಂಬರ್ ಎರಡು ಬಾರಿ ಸಮಯ ವಿಸ್ತರಣೆ ಕೇಳಿದೆ. ಹಾಗೆಲ್ಲ ಸಮಯ ವಿಸ್ತರಣೆ ಮಾಡಲು ಅವಕಾಶವಿಲ್ಲ. ಅವರು ಕಡ್ಡಾಯವಾಗಿ ಸಮಿತಿ ರಚಿಸಲೇಬೇಕು. ಹಾಗಾಗಿ, ನಾವು ಪಾಶ್ ನೋಡಲ್ ಅಧಿಕಾರಿಯಾದ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇವೆ” ಎಂದಿದ್ದಾರೆ.

ಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಲು ಸಮಿತಿ ರಚಿಸುವ ಬೇಡಿಕೆ ಬಂದಿತ್ತು. ನಾವು ಸಮಿತಿ ರಚನೆ ಕೋರಿ ಸರ್ಕಾರಕ್ಕೆ ಪತ್ರ ಬರೆದಾಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ಒಬ್ಬರು ಹಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆಗೆ ನಾವು ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ. ಸರ್ಕಾರದ ಒಪ್ಪಿಗೆಯೊಂದೇ ಬಾಕಿಯಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸಿದ ಲೈಂಗಿಕ ದೌರ್ಜನ್ಯಗಳನ್ನು ಬಿಚ್ಚಿಟ್ಟ ಬಳಿಕ, ಕರ್ನಾಟಕದಲ್ಲೂ ಅಂತಹದ್ದೇ ಸಮಿತಿ ರಚನೆಗೆ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ನಟಿಯರ ತಂಡವೊಂದು ಸಿಎಂಗೆ ಮನವಿಯನ್ನೂ ಸಲ್ಲಿಸಿದೆ.

ಇದನ್ನೂ ಓದಿ : ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...