ಬಿಜೆಪಿ ಪಕ್ಷದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಹಳ ಜನ ಶತ್ರುಗಳಿದ್ದಾರೆ. ಅವರಲ್ಲೇ ಯಾರೋ ಆಡಿಯೋ ರೆಕಾರ್ಡ್ ಮಾಡಿ, ಮಾಧ್ಯಮಗಳಿಗೆ ಕೊಟ್ಟಿದ್ದಾರೆ. ‘ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು’ ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ? ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಇದನ್ನು ಓದಿ: ಬಿಎಸ್ವೈ ಆಡಿಯೋ ಕುರಿತು ವಿಚಾರಣೆಗೆ ಸುಪ್ರೀಂ ಗ್ರೀನ್ ಸಿಗ್ನಲ್: ನಾಳೆ ವಿಚಾರಣೆ
ಶ್ರೀಮಂತ ಪಾಟೀಲ್ ಹೃದಯದ ಕಾಯಿಲೆ ಎಂದು ಸುಳ್ಳು ಹೇಳಿ 300 ಕಿ.ಮೀ ದೂರದ ಚೆನ್ನೈಗೆ ಹೋಗಿದ್ದರು. ಕೊನೆಗೆ ಅಲ್ಲಿಂದ ಹೃದ್ರೋಗ ತಜ್ಞರೇ ಇಲ್ಲದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈ ನಾಟಕಗಳೆಲ್ಲ ಆಪರೇಷನ್ ಕಮಲದ ಭಾಗವಲ್ಲವೇ? ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲವೇ? ಎಂದು ಸಿದ್ದು ಪ್ರಶ್ನಿಸಿದ್ದಾರೆ.
ಮೊದಲು ಆಡಿಯೋದಲ್ಲಿನ ಹೇಳಿಕೆ ತಮ್ಮದೇ ಎಂದು ಒಪ್ಪಿಕೊಂಡಿದ್ದ ಯಡಿಯೂರಪ್ಪ ಅವರು, ಅಮಿತ್ ಶಾ ತರಾಟೆಗೆ ತಗೊಂಡ ಮೇಲೆ ವರಸೆ ಬದಲಿಸಿದ್ದಾರೆ. ಇದರಿಂದಾಗಿಯೇ ಅಮಿತ್ ಶಾ ನಿರ್ದೇಶನದಂತೆಯೇ ಸರ್ಕಾರವನ್ನು ಬೀಳಿಸಲಾಗಿದೆ ಎಂಬ ಯಡಿಯೂರಪ್ಪನವರ ಹೇಳಿಕೆ ಸತ್ಯ ಎಂದು ಸಾಬೀತಾಗಿದೆ ಎಂದು ಸಿದ್ದರಾಮಯ್ಯ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.


