Homeಮುಖಪುಟಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನನ : ನಾಲ್ವರು ವೈದ್ಯರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ

ಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನನ : ನಾಲ್ವರು ವೈದ್ಯರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ

- Advertisement -
- Advertisement -

ಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನಿಸಿರುವುದಕ್ಕೆ ಸಂಬಂಧಪಟ್ಟಂತೆ ಕೇರಳದಲ್ಲಿ ನಾಲ್ವರು ವೈದ್ಯರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಸರ್ಕಾರ ತನಿಖೆಗೆ ಆದೇಶಿಸಿದೆ.

ನವೆಂಬರ್ 2ರಂದು ಜನಿಸಿದ ಮಗುವಿಗೆ ಹಲವು ರೀತಿಯ ಗಂಭೀರ ಸಮಸ್ಯೆಗಳಿವೆ. ಇದಕ್ಕೆ ಕಾರಣ ಸರ್ಕಾರಿ ವೈದ್ಯರು ಮತ್ತು ಎರಡು ಸ್ಕ್ಯಾನಿಂಗ್ ಸೆಂಟರ್‌ಗಳ ನಿರ್ಲಕ್ಷ್ಯ ಎಂದು ಮಗುವಿನ ಪೋಷಕರಾದ ಸುರುಮಿ ಮತ್ತು ಅನೀಶ್ ದಂಪತಿ ಆರೋಪಿಸಿದ್ದಾರೆ.

ಸುರುಮಿಯ ಗರ್ಭಾವಸ್ಥೆಯಲ್ಲಿ ಅನೇಕ ಅಲ್ಟ್ರಾಸೌಂಡ್‌ಗಳನ್ನು ನಡೆಸಿದರೂ ಭ್ರೂಣದ ಅಸಹಜತೆಗಳನ್ನು ಪತ್ತೆಹಚ್ಚಲು ವೈದ್ಯರು ಮತ್ತು ಸ್ಕ್ಯಾನಿಂಗ್ ಕೇಂದ್ರದವರು ವಿಫಲರಾಗಿದ್ದಾರೆ ಎಂದು ದಂಪತಿ ದೂರಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರಿಗೆ ದೂರು ನೀಡಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಆರೋಗ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರಿಂದ ವರದಿ ಕೇಳಿದೆ. ಪ್ರಕರಣ ಕುರಿತು ಆಲಪ್ಪುಝ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಕೆ ಶ್ರೀಜಿತ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಪೊಲೀಸ್ ವರಿಷ್ಠಾಧಿಕಾರಿ ಎಂ ಆರ್ ಮಧುಬಾಬು ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.

ಸುರುಮಿ ಅವರು ಗರ್ಭಾವಸ್ಥೆಯಲ್ಲಿ ಅಲಪ್ಪುಝ ಕಡ್ಡಪ್ಪುರ (ಬೀಚ್) ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ (ಡಬ್ಲ್ಯುಎಸಿ ಆಸ್ಪತ್ರೆ) ಇಬ್ಬರು ಹಿರಿಯ ವೈದ್ಯರ ಆರೈಕೆಯಲ್ಲಿದ್ದರು ಮತ್ತು ಏಳು ಸ್ಕ್ಯಾನ್‌ಗಳಿಗೆ ಒಳಗಾಗಿದ್ದರು. ಆದರೆ, ಈ ಸ್ಕ್ಯಾನ್‌ಗಳು ಗಮನಾರ್ಹವಾದ ಭ್ರೂಣದ ಅಸಹಜತೆಗಳನ್ನು ಪತ್ತೆ ಹಚ್ಚಲು ವಿಫಲವಾಗಿವೆ.

ನವೆಂಬರ್ 2 ರಂದು ಮಗು ಜನಿಸಿದಾಗ, ಅದರ ಮುಖದಲ್ಲಿ ಅಸಹಜತೆಗಳು, ಹೃದಯ ದೋಷ, ಕಾರ್ಯನಿರ್ವಹಿಸದ ಹಾಗೂ ತಪ್ಪಾಗಿ ಜೋಡಿಸಲಾದ ಕಣ್ಣುಗಳು ಮತ್ತು ಕಿವಿಗಳು, ಅಂಗ ವಿರೂಪಗಳು ಮತ್ತು ಬಾಯಿ ತೆರೆಯಲು ಆಗದಿರುವುದು ಸೇರಿದಂತೆ ಗಂಭೀರ ಸಮಸ್ಯೆಗಳು ಕಂಡು ಬಂದಿವೆ.

“ಹೆರಿಗೆಗಾಗಿ ಅಕ್ಟೋಬರ್ 30 ರಂದು ಡಬ್ಲ್ಯುಎಸಿ ಆಸ್ಪತ್ರೆಗೆ ದಾಖಲಾಗಿದ್ದೆ. ಅಲ್ಲಿ ತೊಡಕುಗಳ ಕಾರಣ ಅಲಪ್ಪುಝ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಎಂಸಿಹೆಚ್) ವರ್ಗಾಯಿಸಲಾಗಿತ್ತು. ಎಂಸಿಹೆಚ್‌ನ ವೈದ್ಯರು ಮಗುವಿಗೆ ಸಮಸ್ಯೆಗಳು ಇರುವುದನ್ನು ತಕ್ಷಣ ಪತ್ತೆ ಹಚ್ಚಿದ್ದಾರೆ. ಈ ಹಿಂದಿನ ಸ್ಕ್ಯಾನ್‌ಗಳ ಸಾಮರ್ಥ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಸುರುಮಿ ಹೇಳಿದ್ದಾರೆ.

“ಭ್ರೂಣ ಸಮಸ್ಯೆಯಿಂದ ಕೂಡಿರುವುದು ಸ್ಕ್ಯಾನಿಂಗ್ ವೇಳೆ ಪತ್ತೆ ಮಾಡಿದ್ದರೆ, ಗರ್ಭಧಾರಣೆಯನ್ನು ಕೊನೆಗೊಳಿಸುವ ಒಂದು ಆಯ್ಕೆ ಇತ್ತು. ನನ್ನ ನಿಗದಿತ ಸ್ಕ್ಯಾನಿಂಗ್‌ ಸಮಯಗಳಲ್ಲಿ ವೈದ್ಯರು ಯಾವಾಗಲೂ ಇರುತ್ತಿರಲಿಲ್ಲ” ಎಂದು ಸುರುಮಿ ಆರೋಪಿಸಿದ್ದಾರೆ.

ಡಬ್ಲ್ಯುಎಸಿ ಆಸ್ಪತ್ರೆಯ ವೈದ್ಯರು ಮತ್ತು ಸ್ಕ್ಯಾನಿಂಗ್ ಸೆಂಟರ್‌ಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ದಂಪತಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಮುಖ್ಯಸ್ಥರಿಗೂ ದೂರು ನೀಡಿದ್ದಾರೆ. ಪ್ರಸ್ತುತ ಈ ಪ್ರಕರಣ ಕೇರಳದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿದೆ.

ಇದನ್ನೂ ಓದಿ | ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...