Homeಮುಖಪುಟಮಣಿಪುರ: 13 ದಿನಗಳ ನಂತರ ಇಂಫಾಲ್ ಕಣಿವೆಯಲ್ಲಿ ಶಾಲಾ-ಕಾಲೇಜುಗಳು ಆರಂಭ

ಮಣಿಪುರ: 13 ದಿನಗಳ ನಂತರ ಇಂಫಾಲ್ ಕಣಿವೆಯಲ್ಲಿ ಶಾಲಾ-ಕಾಲೇಜುಗಳು ಆರಂಭ

- Advertisement -
- Advertisement -

ಮಣಿಪುರದ ಇಂಫಾಲ್ ಕಣಿವೆ, ಜಿರಿಬಾಮ್ ಜಿಲ್ಲೆಯ ಶಾಲೆಗಳು ಮತ್ತು ಕಾಲೇಜುಗಳು 13 ದಿನಗಳ ವಿರಾಮದ ನಂತರ ಶುಕ್ರವಾರ ತರಗತಿಗಳನ್ನು ಪುನರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸುವುದರೊಂದಿಗೆ ರಾಜ್ಯದ ರಾಜಧಾನಿ ಇಂಫಾಲ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದಲ್ಲಿ ಬಸ್‌ಗಳಿಗಾಗಿ ಕಾಯುತ್ತಿರುವುದು ಕಂಡುಬಂದಿದೆ.

ಶಾಲಾ ಶಿಕ್ಷಣ ನಿರ್ದೇಶನಾಲಯ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಗುರುವಾರ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಕ್ಚಿಂಗ್, ತೌಬಲ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ತರಗತಿಗಳನ್ನು ಪುನರಾರಂಭಿಸಲು ಆದೇಶಿಸಿದೆ.

ಸರ್ಕಾರಿ ಅಧಿಕಾರಿ ಕೆ ಬಿಕೆನ್ ಸಿಂಗ್, “ಶಾಲೆಗಳು ಪುನರಾರಂಭವಾಗಿರುವುದು ದೊಡ್ಡ ಸಮಾಧಾನವಾಗಿದೆ ಎಂದು ಹೇಳಿದ್ದಾರೆ. ಇಂಫಾಲ್‌ನ ಖಾಸಗಿ ಶಾಲೆಯಲ್ಲಿ 6 ಮತ್ತು 7 ನೇ ತರಗತಿಯಲ್ಲಿರುವ ಓದುತ್ತಿರುವ ನನ್ನ ಮಕ್ಕಳ ಅಂತಿಮ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಡಿಸೆಂಬರ್ ಎರಡನೇ ವಾರದಿಂದ ಪರೀಕ್ಷೆ ಪ್ರಾರಂಭವಾಗಲಿದೆ. ಆದರೆ ಪಠ್ಯಕ್ರಮದ ಭಾಗಗಳು ಇನ್ನೂ ಪೂರ್ಣಗೊಂಡಿಲ್ಲ, ಶಾಲೆಗಳ ಪುನರಾರಂಭವು ಶಿಕ್ಷಕರಿಗೆ ತಮ್ಮ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಮಣಿಪುರ-ಅಸ್ಸಾಂನ ಜಿರಿ ಮತ್ತು ಬರಾಕ್ ನದಿಯಲ್ಲಿ ಜಿರಿಬಾಮ್‌ನಲ್ಲಿ ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳ ಮೃತದೇಹಗಳನ್ನು ವಶಪಡಿಸಿಕೊಂಡ ನಂತರ ಕಣಿವೆ ಜಿಲ್ಲೆಗಳು ಮತ್ತು ಜಿರಿಬಾಮ್‌ನಲ್ಲಿ ನವೆಂಬರ್ 16 ರಿಂದ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.

ಈ ಮಧ್ಯೆ, ಅಧಿಕೃತ ಆದೇಶದ ಪ್ರಕಾರ ಜನರು ಅಗತ್ಯ ವಸ್ತುಗಳು ಮತ್ತು ಔಷಧಿಗಳನ್ನು ಖರೀದಿಸಲು ಅನುವು ಮಾಡಿಕೊಡಲು ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಿಗ್ಗೆ 5 ರಿಂದ ಸಂಜೆ 4 ರವರೆಗೆ ಕರ್ಫ್ಯೂ ಸಡಿಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

“ಜಿಲ್ಲೆಗಳಲ್ಲಿ ಸುಧಾರಿಸುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯಿಂದಾಗಿ, ಸಾರ್ವಜನಿಕರಿಗೆ ಔಷಧಿಗಳು ಮತ್ತು ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಜನರ ಸಂಚಾರದ ಮೇಲಿನ ನಿರ್ಬಂಧಗಳನ್ನು ಸಡಿಲಿಸುವ ಅವಶ್ಯಕತೆಯಿದೆ. ಜನರು ತಮ್ಮ ನಿವಾಸಗಳ ಹೊರಗೆ ಸಂಚಾರ ನಿರ್ಬಂಧವನ್ನು ಈ ಮೂಲಕ ತೆಗೆದುಹಾಕಲಾಗಿದೆ” ಎಂದು ಸರ್ಕಾರದ ಆದೇಶ ತಿಳಿಸಿದೆ.

ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಕ್ಚಿಂಗ್ ಮತ್ತು ತೌಬಲ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಪ್ರತ್ಯೇಕವಾಗಿ ಆದೇಶ ಹೊರಡಿಸಿದ್ದಾರೆ.

“ಆದರೂ, ಸಡಿಲಿಕೆಯು ಸಕ್ಷಮ ಪ್ರಾಧಿಕಾರದ ಮೂಲಕ ಅನುಮೋದನೆಯನ್ನು ಪಡೆಯದೆ ಯಾವುದೇ ಸಭೆ, ಧರಣಿ, ರ್ಯಾಲಿಯನ್ನು ಒಳಗೊಂಡಿರುವುದಿಲ್ಲ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನವೆಂಬರ್ 11 ರಂದು ಭದ್ರತಾ ಪಡೆಗಳು ಮತ್ತು ಶಂಕಿತ ಕುಕಿ-ಜೋ ಉಗ್ರಗಾಮಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಬಂಡುಕೋರರ ಸಾವಿಗೆ ಕಾರಣವಾದ ನಂತರ, ಜಿರಿಬಾಮ್‌ನ ಪರಿಹಾರ ಶಿಬಿರದಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾದ ಬಳಿಕ ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿತು. ಆ ಆರು ಮಂದಿಯ ಶವಗಳು ನಂತರ ಪತ್ತೆಯಾಗಿವೆ.

ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ; ಫೆಂಗಲ್ ಚಂಡಮಾರುತ ಪರಿಣಾಮ; ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳು ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...