Homeಮುಖಪುಟಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

ಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯ ಚಂದೌಸಿಯಲ್ಲಿರುವ ಶಾಹಿ ಜಾಮಾ ಮಸೀದಿ ಆವರಣದಲ್ಲಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಇಂದು (ನ.29) ತಡೆ ನೀಡಿದ್ದು, ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಸಮೀಕ್ಷೆ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಪಟ್ಟಿ ಮಾಡುವವರೆಗೆ ಸಮೀಕ್ಷೆ ವಿಚಾರದಲ್ಲಿ ಮುಂದುವರೆಯದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

“ಮಸೀದಿ ಸಮೀಕ್ಷೆಗೆ ಸಂಬಂಧಿಸಿದ ಅಡ್ವೊಕೇಟ್ ಕಮಿಷನರ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕು. ಮುಂದಿನ ಆದೇಶದವರೆಗೆ ತೆರಯಬಾರದು. ಯಾವುದೇ ಬೆಲೆ ತೆತ್ತಾದರೂ ಸರ್ಕಾರ ಶಾಂತಿ, ಸೌಹಾರ್ದತೆ ಕಾಪಾಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠ ನಿರ್ದೇಶಿಸಿದೆ.

“ಮಸೀದಿಯ ಸಮೀಕ್ಷೆಗೆ ಆದೇಶ ನೀಡಿರುವ ವಿಚಾರಣಾ ನ್ಯಾಯಾಲಯ ಮುಂದಿನ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು. ಮಸೀದಿ ಸಮಿತಿ ಹೈಕೋರ್ಟ್‌ಗೆ ತೆರಳುವವರೆಗೆ ಏನೂ ಆಗಬಾರದು ಎಂದು ನಾವು ಬಯಸುತ್ತೇವೆ. ವಿಚಾರಣಾ ನ್ಯಾಯಾಲಯ ತನ್ನ ಆದೇಶವನ್ನು ಜಾರಿಗೆ ತರಬಾರದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಈ ಹಿಂದೆ ದೇವಾಲಯವಾಗಿತ್ತು ಎಂದು ಅರ್ಜಿ ಸಲ್ಲಿಕೆಯಾದ ಕೂಡಲೇ ಜಿಲ್ಲಾ ನ್ಯಾಯಾಲಯ ತರಾತುರಿಯಲ್ಲಿ ಸಮೀಕ್ಷೆಗೆ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ನವೆಂಬರ್ 19ರಂದು ಸಮೀಕ್ಷೆಗೆ ಆದೇಶಿಸಿ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸಮಿತಿ (ಎಸ್‌ಎಸ್‌ಜೆಂಸಿ) ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಮಸೀದಿ ಸಮಿತಿ ತನ್ನ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿತ್ತು. ಅದಕ್ಕೆ ಒಪ್ಪಿದ್ದ ಸುಪ್ರೀಂ ಕೋರ್ಟ್, ಇಂದು ವಿಚಾರಣೆ ನಿಗದಿ ಮಾಡಿತ್ತು.

ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಆದಿತ್ಯ ಸಿಂಗ್ ಅವರು ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ನಡೆಸುವಂತೆ ಅಡ್ವೊಕೇಟ್‌ ಕಮಿಷನರ್‌ಗೆ ನಿರ್ದೇಶನ ನೀಡಿದ್ದರು. ನ.29ರೊಳಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿ, ರಮೇಶ್ ರಾಘವ್ ಅವರನ್ನು ಅಡ್ವೊಕೇಟ್ ಕಮಿಷನರ್ ಆಗಿ ನೇಮಿಸಿದ್ದರು.

ಮೊಘಲರ ಕಾಲದಲ್ಲಿ ಧ್ವಂಸಗೊಂಡ ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಸಮೀಕ್ಷೆಗೆ ಆದೇಶಿಸಿದ್ದರು.

ನ್ಯಾಯಾಲಯದ ಆದೇಶದಂತೆ ಮಸೀದಿಯ ಸಮೀಕ್ಷೆ ಮುಂದಾದಾಗ ಭುಗಿಲೆದ್ದ ಹಿಂಸಾಚಾರದಲ್ಲಿ ಕನಿಷ್ಠ ಆರು ಮುಸ್ಲಿಂ ಯುವಕರು ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂ ಓದಿ : ವಕ್ಫ್‌ ಮಸೂದೆ | ಸಂಸದೀಯ ಸಮಿತಿ ಕಾರ್ಯಾವಧಿ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...