Homeಮುಖಪುಟಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

ಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯ ಚಂದೌಸಿಯಲ್ಲಿರುವ ಶಾಹಿ ಜಾಮಾ ಮಸೀದಿ ಆವರಣದಲ್ಲಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಇಂದು (ನ.29) ತಡೆ ನೀಡಿದ್ದು, ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಸಮೀಕ್ಷೆ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಪಟ್ಟಿ ಮಾಡುವವರೆಗೆ ಸಮೀಕ್ಷೆ ವಿಚಾರದಲ್ಲಿ ಮುಂದುವರೆಯದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

“ಮಸೀದಿ ಸಮೀಕ್ಷೆಗೆ ಸಂಬಂಧಿಸಿದ ಅಡ್ವೊಕೇಟ್ ಕಮಿಷನರ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕು. ಮುಂದಿನ ಆದೇಶದವರೆಗೆ ತೆರಯಬಾರದು. ಯಾವುದೇ ಬೆಲೆ ತೆತ್ತಾದರೂ ಸರ್ಕಾರ ಶಾಂತಿ, ಸೌಹಾರ್ದತೆ ಕಾಪಾಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠ ನಿರ್ದೇಶಿಸಿದೆ.

“ಮಸೀದಿಯ ಸಮೀಕ್ಷೆಗೆ ಆದೇಶ ನೀಡಿರುವ ವಿಚಾರಣಾ ನ್ಯಾಯಾಲಯ ಮುಂದಿನ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು. ಮಸೀದಿ ಸಮಿತಿ ಹೈಕೋರ್ಟ್‌ಗೆ ತೆರಳುವವರೆಗೆ ಏನೂ ಆಗಬಾರದು ಎಂದು ನಾವು ಬಯಸುತ್ತೇವೆ. ವಿಚಾರಣಾ ನ್ಯಾಯಾಲಯ ತನ್ನ ಆದೇಶವನ್ನು ಜಾರಿಗೆ ತರಬಾರದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಈ ಹಿಂದೆ ದೇವಾಲಯವಾಗಿತ್ತು ಎಂದು ಅರ್ಜಿ ಸಲ್ಲಿಕೆಯಾದ ಕೂಡಲೇ ಜಿಲ್ಲಾ ನ್ಯಾಯಾಲಯ ತರಾತುರಿಯಲ್ಲಿ ಸಮೀಕ್ಷೆಗೆ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ನವೆಂಬರ್ 19ರಂದು ಸಮೀಕ್ಷೆಗೆ ಆದೇಶಿಸಿ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸಮಿತಿ (ಎಸ್‌ಎಸ್‌ಜೆಂಸಿ) ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಮಸೀದಿ ಸಮಿತಿ ತನ್ನ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿತ್ತು. ಅದಕ್ಕೆ ಒಪ್ಪಿದ್ದ ಸುಪ್ರೀಂ ಕೋರ್ಟ್, ಇಂದು ವಿಚಾರಣೆ ನಿಗದಿ ಮಾಡಿತ್ತು.

ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಆದಿತ್ಯ ಸಿಂಗ್ ಅವರು ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ನಡೆಸುವಂತೆ ಅಡ್ವೊಕೇಟ್‌ ಕಮಿಷನರ್‌ಗೆ ನಿರ್ದೇಶನ ನೀಡಿದ್ದರು. ನ.29ರೊಳಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿ, ರಮೇಶ್ ರಾಘವ್ ಅವರನ್ನು ಅಡ್ವೊಕೇಟ್ ಕಮಿಷನರ್ ಆಗಿ ನೇಮಿಸಿದ್ದರು.

ಮೊಘಲರ ಕಾಲದಲ್ಲಿ ಧ್ವಂಸಗೊಂಡ ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಸಮೀಕ್ಷೆಗೆ ಆದೇಶಿಸಿದ್ದರು.

ನ್ಯಾಯಾಲಯದ ಆದೇಶದಂತೆ ಮಸೀದಿಯ ಸಮೀಕ್ಷೆ ಮುಂದಾದಾಗ ಭುಗಿಲೆದ್ದ ಹಿಂಸಾಚಾರದಲ್ಲಿ ಕನಿಷ್ಠ ಆರು ಮುಸ್ಲಿಂ ಯುವಕರು ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂ ಓದಿ : ವಕ್ಫ್‌ ಮಸೂದೆ | ಸಂಸದೀಯ ಸಮಿತಿ ಕಾರ್ಯಾವಧಿ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...