Homeಮುಖಪುಟಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

ಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಮಲಯಾಳಂ ನಟಿ ಮಾಲಾ ಪಾರ್ವತಿ ಶುಕ್ರವಾರ (ನ.29) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

“ಹೇಮಾ ಸಮಿತಿ ಮುಂದೆ ನಾನು ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ‘ಶೈಕ್ಷಣಿಕ ಉದ್ದೇಶ’ವನ್ನು ಹೊಂದಿದೆ. ಅಲ್ಲದೆ, ಮುಂದೆ ಶಿಫಾರಸುಗಳನ್ನು ನೀಡಲು ಸಹಾಯವಾಗಲಿ ಎಂದು ನಾನು ಹೇಳಿಕೆ ನೀಡಿದ್ದೇನೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತಿದೆ. ಹೇಮಾ ಸಮಿತಿ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸುವ ಮೂಲಕ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿಯನ್ನು ದಾಟಿದೆ” ಎಂದು ಮಾಲಾ ಪಾರ್ವತಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

“ವರದಿ ಆಧರಿಸಿ ಎಫ್‌ಐಆರ್ ದಾಖಲಿಸಿ ಎಂಬ ಹೈಕೋರ್ಟ್ ಆದೇಶ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ನಡೆಸುವ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಆ ತಂಡದ ವಿವೇಚನೆಯನ್ನು ದುರ್ಬಲಗೊಳಿಸುತ್ತದೆ. ಸೂಕ್ತ ತನಿಖೆ ನಡೆಸದೆ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವುದು ಸರಿಯಲ್ಲ” ಎಂದು ಮಾಲಾ ಪಾರ್ವತಿ ವಾದಿಸಿದ್ದಾರೆ.

“ನಾನು ಹೇಮಾ ಸಮಿತಿ ಮುಂದೆ ನೀಡಿರುವ ಹೇಳಿಕೆಗಳು ಬೇರೆಯವರಿಂದ ಕೇಳಿದ್ದು, ಅವರು ನಂತರ ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ. ಎಸ್‌ಐಟಿ ರಚನೆಯಾದ ಬಳಿಕ ಅಧಿಕಾರಿಗಳು ನನ್ನನ್ನು ಮತ್ತು ನನಗೆ ಮಾಹಿತಿ ನೀಡಿದವರನ್ನು ಭೇಟಿಯಾಗಿದ್ದಾರೆ. ನಮಗೆ ಕಾನೂನು ಕ್ರಮ ಮುಂದುವರಿಸಲು ಆಸಕ್ತಿಯಿಲ್ಲ. ಹೈಕೋರ್ಟ್ ಆದೇಶದ ಬಳಿಕ, ಬೇಡ ಅಂದರೂ ಎಸ್‌ಐಟಿ ಎಫ್‌ಐಆರ್ ದಾಖಲಿಸುತ್ತಿದೆ” ಎಂದಿದ್ದಾರೆ.

“ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ರೂಪಿಸುವ ಸಲುವಾಗಿ ಅಥವಾ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಸಲುವಾಗಿ ನಾನು ಹೇಮಾ ಸಮಿತಿ ಮುಂದೆ ಹೇಳಿಕೆಗಳನ್ನು ನೀಡಿದ್ದೇನೆ. ನನ್ನಿಂದ ಹೇಳಿಕೆ ಪಡೆಯುವಾಗಲೂ, ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಮಾ ಸಮಿತಿ ಭರವಸೆ ನೀಡಿದೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಮಕ್ಕೆ ಮುಂದಾಗಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ನನ್ನ ಹೇಳಿಕೆಯೊಂದಿಗೆ ಸಂಬಂಧ ಇಲ್ಲದವರನ್ನು ಕರೆದು ಕಿರುಕುಳ ನೀಡುತ್ತಿದೆ. ಇದು ನಟಿಯಾಗಿ ನನ್ನ ಸಮಗ್ರತೆಯನ್ನು ಹಾಳು ಮಾಡುತ್ತದೆ. ಸಮಿತಿಯ ಉದ್ದೇವನ್ನೂ ಕೆಡಿಸುತ್ತದೆ. ಸಿನಿಮಾ ರಂಗದಲ್ಲಿ ಸಮಸ್ಯೆ ಎದುರಿಸಿದವರು ಪಡೆಯುತ್ತಿರುವ ಬೆಂಬಲವನ್ನು ಕುಗ್ಗಿಸುತ್ತದೆ” ಎಂದು ಮಾಲಾ ಪಾರ್ವತಿ ಹೇಳಿದ್ದಾರೆ.

2017ರಲ್ಲಿ ಬಹುಭಾ‍ಷಾ ನಟಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ತಂಡ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಕೋರಿತ್ತು.

ಈ ಮನವಿ ಪರಿಗಣಿಸಿದ ಸರ್ಕಾರ, ಕೇರಳ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಹೇಮಾ, ಚಲನಚಿತ್ರ ನಟಿ ಶಾರದ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ.ಬಿ.ವಲ್ಸಲಕುಮಾರಿ ಅವರ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯನ್ನು ‘ಹೇಮಾ ಸಮಿತಿ’ ಎಂದು ಕರೆಯಲಾಗುತ್ತದೆ.

ಸಮಿತಿ ಅಧ್ಯಯನ ನಡೆಸಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ನಟಿ ರಜಿನಿ ಅವರು ವರದಿ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ ಕಾರಣ ವರದಿ ಬಿಡುಗಡೆಯಾಗದೆ ಉಳಿದಿತ್ತು.

ಹೈಕೋರ್ಟ್ ರಜಿನಿಯವರ ಅರ್ಜಿಯನ್ನು ತಿರಸ್ಕರಿಸಿದ ಬಳಿಕ, ಕಳೆದ ಆಗಸ್ಟ್ 19ರಂದು ವರದಿ ಬಿಡುಗಡೆಯಾಗಿದೆ. ಅದರಲ್ಲಿ ಉಲ್ಲೇಖಿಸಿರುವ ‘ಸಿನಿಮಾದಲ್ಲಿ ಅವಕಾಶ ಬೇಕೇಂದರೆ ಮಹಿಳಾ ಕಲಾವಿದರು ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಪುರುಷರ ಜೊತೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಅನೇಕ ಮಹಿಳಾ ಕಲಾವಿದರು ಈಗಾಗಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಬೆದರಿಕೆಯಿಂದ ಅದನ್ನು ಹೊರಗೆ ಹೇಳಿಕೊಳ್ಳುತ್ತಿಲ್ಲ, ದೂರು ದಾಖಲಿಸುತ್ತಿಲ್ಲ” ಎಂಬ ವಿಷಯ ದೇಶದಲ್ಲೇ ಸಂಚಲನ ಸೃಷ್ಟಿಸಿದೆ.

ವರದಿ ಬಿಡುಗಡೆ ಬಳಿಕ, ಅನೇಕ ನಟಿಯರು ಮಾಧ್ಯಮಗಳ ಮುಂದೆ ತಮಗಾದ ಕಿರುಕುಳ ಹೇಳಿಕೊಂಡಿದ್ದಾರೆ. ದೂರು ದಾಖಲಿಸಿದ್ದಾರೆ. ಕೇರಳ ಸರ್ಕಾರ ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದೆ.

ವರದಿ ಬಿಡುಗಡೆಯಾದ ನಂತರ, ಮಲಯಾಳಂ ನಟ ಸಿದ್ದೀಕ್, ನಟ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ಎಂ ಮುಖೇಶ್, ನಟ ಜಯಸೂರ್ಯ ಮತ್ತು ನಿರ್ದೇಶಕ ವಿಎ ಶ್ರೀಕುಮಾರ್ ಮೆನನ್ ಸೇರಿದಂತೆ ಮಲಯಾಳಂ ಚಿತ್ರರಂಗದ ಹಲವಾರು ಘಟಾನುಘಟಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...