Homeಮುಖಪುಟಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

ಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಮಲಯಾಳಂ ನಟಿ ಮಾಲಾ ಪಾರ್ವತಿ ಶುಕ್ರವಾರ (ನ.29) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

“ಹೇಮಾ ಸಮಿತಿ ಮುಂದೆ ನಾನು ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ‘ಶೈಕ್ಷಣಿಕ ಉದ್ದೇಶ’ವನ್ನು ಹೊಂದಿದೆ. ಅಲ್ಲದೆ, ಮುಂದೆ ಶಿಫಾರಸುಗಳನ್ನು ನೀಡಲು ಸಹಾಯವಾಗಲಿ ಎಂದು ನಾನು ಹೇಳಿಕೆ ನೀಡಿದ್ದೇನೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತಿದೆ. ಹೇಮಾ ಸಮಿತಿ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸುವ ಮೂಲಕ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿಯನ್ನು ದಾಟಿದೆ” ಎಂದು ಮಾಲಾ ಪಾರ್ವತಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

“ವರದಿ ಆಧರಿಸಿ ಎಫ್‌ಐಆರ್ ದಾಖಲಿಸಿ ಎಂಬ ಹೈಕೋರ್ಟ್ ಆದೇಶ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ನಡೆಸುವ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಆ ತಂಡದ ವಿವೇಚನೆಯನ್ನು ದುರ್ಬಲಗೊಳಿಸುತ್ತದೆ. ಸೂಕ್ತ ತನಿಖೆ ನಡೆಸದೆ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವುದು ಸರಿಯಲ್ಲ” ಎಂದು ಮಾಲಾ ಪಾರ್ವತಿ ವಾದಿಸಿದ್ದಾರೆ.

“ನಾನು ಹೇಮಾ ಸಮಿತಿ ಮುಂದೆ ನೀಡಿರುವ ಹೇಳಿಕೆಗಳು ಬೇರೆಯವರಿಂದ ಕೇಳಿದ್ದು, ಅವರು ನಂತರ ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ. ಎಸ್‌ಐಟಿ ರಚನೆಯಾದ ಬಳಿಕ ಅಧಿಕಾರಿಗಳು ನನ್ನನ್ನು ಮತ್ತು ನನಗೆ ಮಾಹಿತಿ ನೀಡಿದವರನ್ನು ಭೇಟಿಯಾಗಿದ್ದಾರೆ. ನಮಗೆ ಕಾನೂನು ಕ್ರಮ ಮುಂದುವರಿಸಲು ಆಸಕ್ತಿಯಿಲ್ಲ. ಹೈಕೋರ್ಟ್ ಆದೇಶದ ಬಳಿಕ, ಬೇಡ ಅಂದರೂ ಎಸ್‌ಐಟಿ ಎಫ್‌ಐಆರ್ ದಾಖಲಿಸುತ್ತಿದೆ” ಎಂದಿದ್ದಾರೆ.

“ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ರೂಪಿಸುವ ಸಲುವಾಗಿ ಅಥವಾ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಸಲುವಾಗಿ ನಾನು ಹೇಮಾ ಸಮಿತಿ ಮುಂದೆ ಹೇಳಿಕೆಗಳನ್ನು ನೀಡಿದ್ದೇನೆ. ನನ್ನಿಂದ ಹೇಳಿಕೆ ಪಡೆಯುವಾಗಲೂ, ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಮಾ ಸಮಿತಿ ಭರವಸೆ ನೀಡಿದೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಮಕ್ಕೆ ಮುಂದಾಗಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ನನ್ನ ಹೇಳಿಕೆಯೊಂದಿಗೆ ಸಂಬಂಧ ಇಲ್ಲದವರನ್ನು ಕರೆದು ಕಿರುಕುಳ ನೀಡುತ್ತಿದೆ. ಇದು ನಟಿಯಾಗಿ ನನ್ನ ಸಮಗ್ರತೆಯನ್ನು ಹಾಳು ಮಾಡುತ್ತದೆ. ಸಮಿತಿಯ ಉದ್ದೇವನ್ನೂ ಕೆಡಿಸುತ್ತದೆ. ಸಿನಿಮಾ ರಂಗದಲ್ಲಿ ಸಮಸ್ಯೆ ಎದುರಿಸಿದವರು ಪಡೆಯುತ್ತಿರುವ ಬೆಂಬಲವನ್ನು ಕುಗ್ಗಿಸುತ್ತದೆ” ಎಂದು ಮಾಲಾ ಪಾರ್ವತಿ ಹೇಳಿದ್ದಾರೆ.

2017ರಲ್ಲಿ ಬಹುಭಾ‍ಷಾ ನಟಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ತಂಡ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಕೋರಿತ್ತು.

ಈ ಮನವಿ ಪರಿಗಣಿಸಿದ ಸರ್ಕಾರ, ಕೇರಳ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಹೇಮಾ, ಚಲನಚಿತ್ರ ನಟಿ ಶಾರದ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ.ಬಿ.ವಲ್ಸಲಕುಮಾರಿ ಅವರ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯನ್ನು ‘ಹೇಮಾ ಸಮಿತಿ’ ಎಂದು ಕರೆಯಲಾಗುತ್ತದೆ.

ಸಮಿತಿ ಅಧ್ಯಯನ ನಡೆಸಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ನಟಿ ರಜಿನಿ ಅವರು ವರದಿ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ ಕಾರಣ ವರದಿ ಬಿಡುಗಡೆಯಾಗದೆ ಉಳಿದಿತ್ತು.

ಹೈಕೋರ್ಟ್ ರಜಿನಿಯವರ ಅರ್ಜಿಯನ್ನು ತಿರಸ್ಕರಿಸಿದ ಬಳಿಕ, ಕಳೆದ ಆಗಸ್ಟ್ 19ರಂದು ವರದಿ ಬಿಡುಗಡೆಯಾಗಿದೆ. ಅದರಲ್ಲಿ ಉಲ್ಲೇಖಿಸಿರುವ ‘ಸಿನಿಮಾದಲ್ಲಿ ಅವಕಾಶ ಬೇಕೇಂದರೆ ಮಹಿಳಾ ಕಲಾವಿದರು ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಪುರುಷರ ಜೊತೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಅನೇಕ ಮಹಿಳಾ ಕಲಾವಿದರು ಈಗಾಗಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಬೆದರಿಕೆಯಿಂದ ಅದನ್ನು ಹೊರಗೆ ಹೇಳಿಕೊಳ್ಳುತ್ತಿಲ್ಲ, ದೂರು ದಾಖಲಿಸುತ್ತಿಲ್ಲ” ಎಂಬ ವಿಷಯ ದೇಶದಲ್ಲೇ ಸಂಚಲನ ಸೃಷ್ಟಿಸಿದೆ.

ವರದಿ ಬಿಡುಗಡೆ ಬಳಿಕ, ಅನೇಕ ನಟಿಯರು ಮಾಧ್ಯಮಗಳ ಮುಂದೆ ತಮಗಾದ ಕಿರುಕುಳ ಹೇಳಿಕೊಂಡಿದ್ದಾರೆ. ದೂರು ದಾಖಲಿಸಿದ್ದಾರೆ. ಕೇರಳ ಸರ್ಕಾರ ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದೆ.

ವರದಿ ಬಿಡುಗಡೆಯಾದ ನಂತರ, ಮಲಯಾಳಂ ನಟ ಸಿದ್ದೀಕ್, ನಟ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ಎಂ ಮುಖೇಶ್, ನಟ ಜಯಸೂರ್ಯ ಮತ್ತು ನಿರ್ದೇಶಕ ವಿಎ ಶ್ರೀಕುಮಾರ್ ಮೆನನ್ ಸೇರಿದಂತೆ ಮಲಯಾಳಂ ಚಿತ್ರರಂಗದ ಹಲವಾರು ಘಟಾನುಘಟಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...