Homeಕರ್ನಾಟಕಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ...

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

- Advertisement -
- Advertisement -

ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, “ಈದಿನ.ಕಾಮ್ ಯಾಕೆ ಬೇಕು? ಯಾಕೆ ಡಿಜಿಟಲ್ ಸ್ವತಂತ್ರ ಮಾಧ್ಯಮ ಬೇಕು. ನಾವು ಆ ಮಾಧ್ಯಮವೇ ಆಗಿ ವಾದಿಸುವುದಾದರೆ, ಇದು ಕೇವಲ ಮಾಧ್ಯಮಗಳ ಕೆಲಸವಲ್ಲ. ನಾಗರೀಕರಾಗಿ ನಮ್ಮೆಲ್ಲರ ಕೆಲಸ. ಏಕೆಂದರೆ ಭಾರತದ ಸ್ವತಂತ್ರ ಅಸ್ತಿತ್ವ ನಮ್ಮ ಜನರು ಮಾಡುವ ಆಯ್ಕೆಗಳ ಮೇಲಿರುತ್ತದೆ ಹಾಗಾಗಿ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ದೊಡ್ಡ ಮಾಧ್ಯಮ ಎಂದು ಕರೆಯುವವರ ವಾಸ್ತವ ಏನು ಎಂಬುವುದು ನಮಗೆ ತಿಳಿದಿದೆ. ಆದ್ದರಿಂದಲೇ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ. ಕಳೆದ 11 ವರ್ಷಗಳಲ್ಲಿ ದೇಶದಲ್ಲಿ ಅವರು ಬಹುಸಂಖ್ಯಾತರ ಪಟ್ಟ ತಲುಪಿದ್ದಾರೆ. ಈ ಬಾರಿ ಸಣ್ಣ ಪ್ರಮಾಣದಲ್ಲಿ ವಿರೋಧ ಪಕ್ಷವಿದೆ. ಕ್ರೈಮ್, ಕ್ರಿಕೆಟ್ ಮತ್ತು ಸಿನೆಮಾದ ಗೀಳು ಮಾಧ್ಯಮಗಳನ್ನು ತುಂಬಿದ್ದು, ಬಹುತೇಕ ಮಾಧ್ಯಮಗಳಿಗೆ ಗ್ರಾಮೀಣ ವರದಿಗಾಗರೂ ಇಲ್ಲ” ಎಂದು ಅವರು ತಿಳಿಸಿದರು.

“100000 ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ. 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ. ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದಾರೆ. ಅದಾಗ್ಯೂ, 2014ರ ನಂತರ ಆಗಿರುವುದು ಪೂರ್ತಿ ಭಿನ್ನ ವಿಚಾರವಾಗಿದ್ದು, ಈಗ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಎಂಬುವು ಈಗ ಬೋರಿಂಗ್ ಪದಗಳಾಗಿವೆ. 2014ಕ್ಕೂ ಮೊದಲು ಮತ್ತು ಈಗ ಮಾಧ್ಯಮಗಳಲ್ಲಿ ಏನು ವ್ಯತ್ಯಾಸವಿದೆ ಎಂದರೆ, ಅವರು ಹಿಪಾಕ್ರಸಿಯನ್ನು ಇಷ್ಟಪಡುತ್ತಾ, ತಮ್ಮ ಕರ್ತವ್ಯ ಮರೆತಿದ್ದಾರೆ” ಎಂದು ಅತಂಕ ವ್ಯಕ್ತಪಡಿಸಿದರು.

“ಉದಾಹರಣೆಗೆ, ಹೊರಗೆ ಮಳೆ ಬರುತ್ತಿದ್ದರೆ ನಾರಾಯಣ್ ಅವರು ಮಳೆ ಬರುತ್ತಿದೆ ಎಂಬು ಹೇಳಿದರು ಅಥವಾ ಸಿಎಂ ಸಿದ್ಧರಾಮಯ್ಯ ಅವರು ಮಳೆ ಬರುತ್ತಿಲ್ಲ ಎಂದು ಹೇಳಿದರು ಎಂದು ವರದಿ ಮಾಡುವುದು ಮಾಧ್ಯಮದ ಕೆಲಸವಲ್ಲ. ಛತ್ರಿ ಹಿಡಿದು ಹೊರಗೆ ಹೋಗಿ 2 ಸೆಂ ಮೀ ಮಳೆ ಆಗಿದೆ ಎಂದು ಹೇಳುವುದು ನಮ್ಮ ಕೆಲಸ” ಎಂದು ಅವರು ಹೇಳಿದರು.

“ಖಬರ್ ಲೆಹರಿಯಾ, ವೈರ್, ಈದಿನ.ಕಾಮ್ ಸೇರಿ ನಾವೆಲ್ಲ ಇಂದು ಒಂದೇ ದಿಕ್ಕಿಗೆ ಹೊರಟಿದ್ದೇವೆ. ನಾವೆಲ್ಲ ಇದರಲ್ಲಿ ಮಾಡುತ್ತಿರುವ ಪ್ರಯತ್ನ ಜನರಿಗೆ ಆರೋಗ್ಯಕರವಾದ, ಸತ್ಯವಾದ ಮಾಹಿತಿಯನ್ನು ನೀಡುವುದಾಗಿದೆ. ನೀರಿನೊಳಗೆ ಬೇಯುತ್ತಿರುವ ಕಪ್ಪೆಗೆ ಹೇಗೆ ಬಿಸಿ ಗೊತ್ತಾಗುವುದಿಲ್ಲವೋ, ಹಾಗೆ ನಮ್ಮ ಜನರ ಸ್ಥಿತಿಯಿದೆ. 11 ವರ್ಷಗಳಲ್ಲಿ ಪ್ರಧಾನ ಮಂತ್ರಿ ಒಂದೂ ಪತ್ರಿಕಾಗೋಷ್ಠಿ ಮಾಡಿಲ್ಲ, ಟ್ರಂಪ್ ಕೂಡಾ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುತ್ತಾರೆ. ಆದರೆ ಇವರು ಅದನ್ನು ಮಾಡುತ್ತಿಲ್ಲ. ಕೋವಿಡ್ ಬಂತು, ಗಂಗಾನದಿಯಲ್ಲಿ ಹೆಣಗಳು ಬಂದವು, ಏನೇ ಬರಲಿ ಪ್ರಧಾನ ಮಂತ್ರಿ ಮಾಧ್ಯಮಗಳ ಮುಂದೆ ಬರಲಿಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

“ಹೊರಗೆ ಹೋಗಿ ರೈತರು ಹೋರಾಟದಲ್ಲಿದ್ದಾರೆ ಎಂಬುವುದನ್ನು ದಾಖಲಿಸುವುದು. ಯಾಕೆ ಕಾರ್ಮಿಕರ ಮುಷ್ಕರ ನಡೆಯುತ್ತಿದೆ ಎಂಬುದನ್ನು ವರದಿ ಮಾಡುವುದು ಇಂದು ಮಾಧ್ಯಮಗಳ ಕೆಲಸವಲ್ಲ ಎಂಬಂತಾಗಿದೆ. ಮೊದಲೆಲ್ಲ ದನಿಯೆತ್ತುತ್ತಿದ್ದ ಮಾಧ್ಯಮ ಸಂಸ್ಥೆಗಳು ಈ ಯಾವ ಸಂದರ್ಭಗಳಲ್ಲೂ ಒಂದೂ ಮಾತಾಡುತ್ತಿಲ್ಲ. ಮಾಧ್ಯಮ ಇರುವುದು ಜನರ ಒಳಿತಿಗಾಗಿ ಎಂಬುವುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು. ಬಿಬಿಸಿ ಸರ್ಕಾರದ ಸಂಸ್ಥೆಯಲ್ಲ ಜನರ ಪ್ರತಿನಿಧಿ. ಹಾಗೆಯೇ ಈದಿನದಂತಹ ಸಂಸ್ಥೆಗಳೂ ಕೂಡಾ. ಸರ್ಕಾರದ ದನಿಯಾಗಲು ದೂರದರ್ಶನ ಇದೆ, ಅದು ಮಾಧ್ಯಮಗಳ ಕೆಲಸವಲ್ಲ” ಎಂದು ಅವರು ಹೇಳಿದರು.

“ಮೂಲಭೂತ ಸತ್ಯಗಳನ್ನು ಹೇಳುವವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲೂ, ಹೊರಗೂ ದಾಳಿಗಳಾಗುತ್ತಿವೆ. ತಟಸ್ಥರಾಗಿರುವುದು ಸ್ವತಂತ್ರ ಮಾಧ್ಯಮಗಳ ಕೆಲಸವಲ್ಲ, ನಾವು ಜನರ ಪಕ್ಷಪಾತಿ ಆಗಿರಬೇಕು. ಟಿವಿ ಮಾಧ್ಯಮಗಳು ಒಂದು ಸುಳ್ಳಿನ ಪರದೆಯನ್ನು ಸೃಷ್ಟಿಸುತ್ತವೆ, ಅದರ ವಿರುದ್ಧ ನಾವು ಪ್ರವಾಹದ ವಿರುದ್ಧ ಈಜುತ್ತಿರುವಂತೆ ಈಜುತ್ತಿದ್ದೇವೆ. ಇದರ ಪರಿಣಾಮ ಏನೆ ಆದರೂ ನಾವು ನಮ್ಮ ಕೆಲಸ ಮಾಡಬೇಕು. ಅದು ನಾಳೆಯೇ ಬರದಿರಬಹುದು, ಆದರೂ ಇದು ದೀರ್ಘಕಾಲ ನಡೆಯಬೇಕಾದ ಕೆಲಸ. ಇದು ನಮ್ಮ ಭವಿಷ್ಯ, ವರ್ತಮಾನಕ್ಕೆ ಸಂಬಂಧಿಸಿದ ಹೋರಾಟ. ಇದು ಖಬರ್ ಲೆಹರಿಯಾ, ದ ವೈರ್, ಈದಿನ.ಕಾಮ್ ಎಲ್ಲರೂ ಸೇರಿ ನಡೆಸಬೇಕಾದ ಹೋರಾಟ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...