Homeಕರ್ನಾಟಕಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ 'ಹೋರಾಟದ ಹಕ್ಕಿಗಾಗಿ ಜನಾಂದೋಲನ' ಆಗ್ರಹ

ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

- Advertisement -
- Advertisement -

‘ಹೈಕೋರ್ಟ್‌ ಆದೇಶ’ ಎಂಬ ಸುಳ್ಳು ಕಾರಣ ಮುಂದಿಟ್ಟುಕೊಂಡು ಪ್ರಭುತ್ವದ ವಿರುದ್ಧ ನಡೆಸುವ ಪ್ರತಿರೋಧದ ಹೋರಾಟಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತಗೊಳಿಸಿದ್ದು, ರಾಜ್ಯದ ಜನಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಶಾಸಕರ ಭವನದಲ್ಲಿ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಆದೇಶ ವಾಪಸ್ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಪ್ರಸ್ತಾವಿಕವಾಗಿ ಮಾತನಾಡಿದ ಕಾರ್ಮಿಕ ಹಕ್ಕುಗಳ ಹೋರಾಟಗಾರ್ತಿ ಮೈತ್ರೇಯಿ, “ಫ್ರೀಡಂ ಪಾರ್ಕಿನಲ್ಲಿ ಮಾತ್ರ ಹೋರಾಟ ಮಾಡಬೇಕು ಎಂದು ಕೋರ್ಟ್ ಹೇಳಿಲ್ಲ; ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದ ಆದೇಶ ಮಾಡಿಸಿದ್ದಾರೆ. ಈವರೆಗೆ ಪ್ರತಿಭಟನೆ ಮಾಡಬಾರದು ಎಂದು ಕೋರ್ಟಿನಿಂದ ಯಾವುದೇ ಆದೇಶ ಬಂದಿಲ್ಲ. ಈ ಆದೇಶವನ್ನು ವಾಪಸ್ ಪಡೆಯಬೇಕು, ಅದಕ್ಕಾಗಿ ನಾವು ಯಾವುದೇ ಕೋರ್ಟಿಗೆ ಹೋಗುವ ಅವಷ್ಯಕತೆ ಇಲ್ಲ” ಎಂದರು.

“ಪ್ರತಿಭಟನೆಯನ್ನು ಫ್ರೀಡಂ ಪಾರ್ಕಿಗೆ ಸೀಮಿತಗೊಳಿಸಿರುವುದು ಪ್ರಜಾಭುತ್ವದ ಮೇಲಿನ ದಾಳಿ, ಸರ್ಕಾರ ಈ ಆದೇಶವನ್ನು ವಾಪಸ್ ಪಡೆಯಬೇಕು. 250 ಕ್ಕಿಂತ ಹೆಚ್ಚಿನ ಜನರು ಪ್ರತಿಭಟನೆ ಮಾಡಿದರೆ ಮಾತ್ರ ಲೈಸೆನ್ಸ್ ತೆಗೆದುಕೊಳ್ಳಬೇಕು ಎಂದು ಹಿಂದೆ ಆದೇಶ ಇತ್ತು. ಆದರೆ, ಈಗ ಇಬ್ಬರು ಹೋರಾಟ ಮಾಡಿದರೂ ಲೈಸೆನ್ಸ್ ಪಡೆದುಕೊಳ್ಳಬೇಕು. ಪ್ರತಿಭಟನೆಗಳಿಗೆ ಅನುಮತಿ ನೀಡುವ ಅಥವಾ ನಿರಾಕರಿಸುವ ಹಕ್ಕನ್ನು ಸಂಪೂರ್ಣವಾಗಿ ಪೊಲೀಸರಿಗೆ ನೀಡಿದ್ದಾರೆ; ಇದು ಬದಲಾಗಬೇಕು. ಪ್ರತಿಭಟನಾ ಸ್ಥಳದಲ್ಲಿ ಪಾರ್ಕಿಂಗ್ ಇದೆಯಾ ಎಂದು ಪರಿಶೀಲಿಸಿ ಅನುಮತಿ ನೀಡುತ್ತಾರೆ. ಇದು ಪೊಲೀಸ್ ರಾಜ್ಯ ಆಗಿದೆ” ಎಂದು ಅಸಮಾಧಾನ ಹೊರಹಾಕಿದರು.

“ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟಕ್ಕೆ ಹೋಗಬೇಕಾದರೆ ಮೆಟಲ್ ಡಿಟೆಕ್ಟರ್ ಪರಿಶೀಲನೆಗೆ ಒಳಗಾಗಬೇಕು. ಬೆಂಗಳೂರಿನಲ್ಲಿಯೂ ಹಾಗಾಗದಂತೆ ನಾವು ತಡೆಯಬೇಕು. ಬೇರೆಡೆ ಪ್ರತಿಭಟನೆ ಮಾಡದಂತೆ ಹೊರಡಿಸಿರುವ ಆದೇಶ ವಾಪಸ್ ಪಡೆಯಬೇಕು. ಈ ಆದೇಶದ ಆಧಾರದಲ್ಲಿ ಪ್ರತಿಭಟಿಸಿದ ಹಲವರ ಮೇಲೆ ಕೇಸ್ ದಾಖಲಾಗಿದೆ. ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ವಿರುದ್ದ ಪ್ರತಿಭಟಿಸಿದವರ ವಿರುದ್ಧವೂ ಕೇಸ್ ದಾಖಲಾಗಿದೆ. ಪ್ಯಾಲೆಸ್ತೀನ್ ಪರ ಹೋರಾಟ ಆಗಬಾರದು ಎಂದು ಆದೇಶ ನೀಡಿದ್ದಾರೆ. ಫ್ರೀಡಂ ಪಾರ್ಕಿನಲ್ಲೂ ಹೋರಾಟ ಮಾಡಲು ಬಿಡುತ್ತಿಲ್ಲ. ಈವರೆಗೆ ಹೋರಾಟಗಾರರ ಮೇಲೆ ದಾಖಲಾಗಿರುವ ಎಫ್ಐಆರ್ ವಾಪಸ್ ಪಡೆಯಬೇಕು. ಪೊಲೀಸ್ ದೌರ್ಜನ್ಯದ ಬಗ್ಗೆ ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಜೆಸಿಟಿಯು ಸಂಘಟನೆಯ ಕೆವಿ ಭಟ್ ಮಾತನಾಡಿ, “ಹಿಂದೆಲ್ಲಾ ನಾವು ವಿಧಾನಸೌಧದ ಮುಂದೆಯೇ ಸಾಕಷ್ಟು ಹೋರಾಟ ಮಾಡಿದ್ದೇವೆ. ಅಲ್ಲಿನ ಪಾರ್ಕ್‌, ಗಿಡ-ಮರಕ್ಕೆ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ನಮ್ಮನ್ನು ಕೆಆರ್ ಸರ್ಕಲ್‌ಗೆ ಸ್ಥಳಾಂತರಿಸಿದರು. ನಂತರ, ಮೈಸೂರ್ ಬ್ಯಾಂಕ್, ಟೌನ್ ಹಾಲ್ ಸೇರಿದಂತೆ ಹಲವೆಡೆ ಕಳಿಸಿದರು. ಈಗ ಎಷ್ಟೇ ಜನ ಇದ್ದರೂ ಅದನ್ನು ಫ್ರೀಡಂ ಪಾರ್ಕಿಗೆ ಸೀಮಿತಗೊಳಿಸಿದ್ದಾರೆ. ಹಿಂದಿನ ಸರ್ಕಾರದ ಈ ಆದೇಶವನ್ನು ಈಗಿನ ಸರ್ಕಾರ ವಾಪಸ್ ಪಡೆಯಬೇಕು. ಆದೇಶ ವಾಪಸ್ ಪಡೆಯುವಂತೆ ನಮ್ಮ ಸಂಘಟನೆಯಿಂದ ಪೊಲೀಸ್ ಆಯುಕ್ತರು ಸೇರಿದಂತೆ ಸಂಬಂಧಿಸಿದವರನ್ನು ಭೇಟಿ ಮಾಡಿ, ಸಭೆ ಕರೆಯುವಂತೆ ಮನವಿ ಮಾಡಿದ್ದೇವೆ. ಆದರೆ, ಅವರೆಲ್ಲರೂ ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸುವ ನಿಟ್ಟಿನಲ್ಲಿ ನಡೆದುಕೊಳ್ಳುತ್ತಿದ್ದಾರೆ. ಇಂದು ನಡೆಯುವ ದುಂಡು ಮೇಜಿನ ಸಭೆಯ ವಿಚಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದರು.

ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರ್ತಿ, ಹಿರಿಯ ಲೇಖಕಿ ದು. ಸರಸ್ವತಿ ಮಾತನಾಡಿ, “ದೇಹ ರಾಜಕಾರಣ, ಅತ್ಯಾಚಾರ, ಮಾರ್ಯಾದೆಗೇಡು ಹತ್ಯೆ ವಿರುದ್ಧ, ಪೌರ ಕಾರ್ಮಿಕರ ಪರ ಹೋರಾಟಗಳನ್ನು ಮಾಡುತ್ತಾ ಬಂದಿದ್ದೇವೆ. ಇಂದು ಪ್ರಜಾಪ್ರಭುತ್ವ ಉಳಿದಿದ್ದರೆ ಅದು ಜನಪರ ಹೋರಾಟಗಳಿಂದ ಮಾತ್ರ ಎಂಬುದನ್ನು ಸರ್ಕಾರ ಮರೆಯಬಾರದು. ನಾವು ಮಾಡುತ್ತಿರುವ ಹೋರಾಟಗಳ ವಿಷಯ ನ್ಯಾಯೋಚಿತವಾಗಿತ್ತು. ಅದೇ ಕಾರಣಕ್ಕೆ ನಾವು ಧೈರ್ಯವಾಗಿ ಬೀದಿಗಿಳಿದು ಹೋರಾಟ ಮಾಡಿದ್ದೇವೆ” ಎಂದರು.

“ಯಾವುದು ಸರಿ ಇಲ್ಲವೋ ಅದನ್ನು ಪ್ರಶ್ನಿಸಲು, ನಮ್ಮ ಪ್ರತಿರೋಧ ದಾಖಲಿಸಿಲು ನಾವು ಪ್ರತಿಭಟನಾ ದಾರಿ ಬಳಸಿಕೊಂಡಿದ್ದೇವೆ. ನಮ್ಮ ಭಿನ್ನಮತ ದಾಖಲಿಸಲು ಪ್ರತಿಭಟನೆ ಮುಖ್ಯವಾಗುತ್ತದೆ, ಭಾರತೀಯತೆ ನಮ್ಮ ಧರ್ಮವಾದರೆ, ಸಂವಿಧಾನ ಧರ್ಮ ಗ್ರಂಥ. ‘ಸರ್ಕಾರ ನಮ್ಮ ಪ್ರತಿನಿಧಿಗಳು, ಅವರು ನಮ್ಮನ್ನು ಆಳುವವರು ಅಲ್ಲ’ ಎಂಬ ಗಾಂಧಿ ಹೇಳಿಕೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನೆನೆಪಿಸಿಕೊಳ್ಳಬೇಕು” ಎಂದು ಹೇಳಿದರು.

“ಮರೆತು ಹೋಗಿರುವುದನ್ನು ನೆನಪಿಸುವುದು ಪ್ರಜಾಪ್ರಭುತ್ವದ ಕರ್ತವ್ಯ, ಅಧಿಕಾರಕ್ಕೆ ಏರಿದಾಗ ಮರೆಯುವ ಸಾಧ್ಯತೆ ಇರುವುದರಿಂದ, ಅದನ್ನು ನೆನೆಪಿಸಲು ಪ್ರತಿಭಟನೆ ಅನಿವಾರ್ಯ” ಎಂದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಇತ್ತೀಚಿನ ವರ್ಷಗಳಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಬೇಕು ಎಂಬ ಬಹು ದೊಡ್ಡ ಕೂಗು ಆರಂಭವಾಗಿದೆ. ಏಕೆಂದರೆ, ದೇಶದ ಕೇಂದ್ರ ಸರ್ಕಾರ ಹೇಗೆ ವರ್ತಿಸುತ್ತಿದೆ ಎಂಬುದನ್ನು ನೋಡಿದ್ದೇವೆ. ಕಾಂಗ್ರೆಸ್ ಪಕ್ಷ ತನ್ನ ನೀತಿಗಳಲ್ಲಿ ಎಷ್ಟೇ ಜನವಿರೋಧಿ ಆಗಿದ್ದರೂ, ಬಿಜೆಪಿ ಸೋಲಿಸಲು ಕಾಂಗ್ರೆಸ್ಸಿಗೆ ಅವಕಾಶ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರತದ ಜನ ಒಂದು ಮಹತ್ತರ ತೀರ್ಪು ನೀಡುವ ಮೂಲಕ ‘ಚಾರ್‌ಸೌ ಫಾರ್’ ಎಂದು ಅರಚುತ್ತಿದ್ದವರ ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದರು.

“ಆನೆಯನ್ನು ಕೆಡ್ಡದಲ್ಲಿ ಹಾಕಿ ಪಳಗಿಸಿದಂತೆ ಪ್ರಭುತ್ವ ಕೂಡ ಜನಸಾಮಾನ್ಯರು ಹಾಗೂ ಹೋರಾಟಗಳನ್ನು ಪಳಗಿಸುತ್ತಾರೆ. ಅದಕ್ಕೆ ಪೂರಕವಾಗಿ ಪೊಲೀಸ್ ಪವರ್ ಬಳಸುತ್ತೆ. ಅದಕ್ಕಾಗಿಯೇ ನಾವು ಅವರು ಹೇಳಿದ ಕಡೆ ಹೋಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಮಾನಸಿಕವಾಗಿ ನಾವು ಅದಕ್ಕೆ ಹೋಗ್ಗಿಕೊಂಡಿದ್ದೇವೆ” ಎಂದರು.

“ಕಳೆದ ನಾಲ್ಕು ದಶಕದಲ್ಲಿ ನಾವು ಹಲವಾರು ಹೋರಾಟಗಳನ್ನು ನೋಡಿದ್ದೇವೆ, ವಿಧಾನ ಸೌಧದ ಮೆಟ್ಟಿಲ ಮೇಲೆ ಪ್ರೊ. ನಂಜುಂಡಸ್ವಾಮಿ ಕ್ಯಾಕರಿಸಿ ಉಗಿಯುವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸರ್ಕಾರವನ್ನು ನೋಡಿ ನಗುವ ಕಾರ್ಯಕ್ರಮವನ್ನೂ ಆಯೋಜಿಸಿದ್ದಾರೆ. ಹೈಕೋರ್ಟ್ ಜಡ್ಜ್ ಆದೇಶ ವಿರೋಧಿಸಿ ಕೋರ್ಟ್‌ ಆವರಣದಲ್ಲಿ ಪ್ರತಿಭಟನೆ ಮಾಡಿದ್ದೇವೆ. ನಂತರ ನಮ್ಮನ್ನು ಕೆ ಆರ್ ಸರ್ಕಲ್, ಬನ್ನಪ್ಪ ಪಾರ್ಕ್‌ಗೆ ಸ್ಥಾಳಾಂತರಿಸಿದರು. ಈಗ ಫ್ರೀಡಂ ಪಾರ್ಕಿಗೆ ಹಾಕಿದ್ದಾರೆ. ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕು” ಎಂದು ಸಭೆಯ ಗಮನಕ್ಕೆ ತಂದರು.

“ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೂ ಬಂದಿದೆ. ಆದರೆ, ಅವರು ಕಡೆಗಣಿಸುತ್ತಿರುವುದು ಯಾಕೆ ಗೊತ್ತಿಲ್ಲ. ಪ್ರತಿರೋಧ ಮನುಷ್ಯರಿಗಷ್ಟೇ ಸಂಬಂಧಿಸಿದ್ದಲ್ಲ, ಬೀಜ ಕೂಡ ಭೂತಾಯಿಯ ಹೊಟ್ಟೆ ಸೀಳಿ ಬರುತ್ತೆ. ಹೋರಾಟ ಕೂಡ ಹೊಸತನ್ನು ಬಯಸುತ್ತೆ; ಪ್ರಭುತ್ವದ ಕಿವಿ ಯಾವಾಗ ಮಂದವಾಗುತ್ತದೆಯೋ, ಆಗ ನಾವು ಅವರನ್ನು ಎಚ್ಚರಿಸುತ್ತಾ ಇರಬೇಕು. ಫ್ರೀಡಂ ಪಾರ್ಕ್ ಈಗ ಯಾತನಾ ಶಿಬಿರ ಆಗಿದೆ.. ಅಲ್ಲಿ ಎಲ್ಲೆಡೆ ಬರೀ ಧಿಕ್ಕಾರ ಮಾತ್ರ ಕೇಳಿಸುತ್ತೆ. ಪ್ರಭುತ್ವ ನಮ್ಮನ್ನು ನಿರ್ವೀರ್ಯರನ್ನಾಗಿ ಮಾಡುತ್ತೆ.. ನಾವು ಎಚ್ಚರದಿಂದ ನಮ್ಮ ಹೋರಾಟಗಳನ್ನು ಮಾಡಿಕೊಂಡು ಹೋಗಬೇಕು” ಎಂದು ಹೇಳಿದರು.

ದುಂಡು ಮೇಜಿನ ಸಭೆಯಲ್ಲಿ ಖ್ಯಾತ ಅಂಕಣಕಾರ ಆಕಾರ್ ಪಟೇಲ್, ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ, ದಲಿತ ಮುಖಂಡ ಕಾರಳ್ಳಿ ಶ್ರೀನಿವಾಸ್, ಎಎಲ್‌ಎಫ್ ಸಂಸ್ಥೆಯ ವಿನಯ್ ಶ್ರೀನಿವಾಸ್ ಹಾಗೂ ಕಾರ್ಮಿಕ, ದಲಿತ, ಮಹಿಳಾ ಮತ್ತು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಇದ್ದರು.

ಇದನ್ನೂ ಓದಿ; ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...